Homeಮುಖಪುಟರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆ ವಿರುದ್ಧ ಅರ್ಜಿ : ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್...

ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆ ವಿರುದ್ಧ ಅರ್ಜಿ : ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ರಾಜಕೀಯ ಪಕ್ಷಗಳು 2,000 ರೂ.ಗಿಂತ ಕಡಿಮೆ ‘ಅನಾಮಧೇಯ’ ನಗದು ದೇಣಿಗೆಗಳನ್ನು ಸ್ವೀಕರಿಸಲು ಅವಕಾಶ ನೀಡುವ ಆದಾಯ ತೆರಿಗೆ ಕಾಯ್ದೆಯ ನಿಬಂಧನೆಯ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 24) ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಇತರರಿಂದ ಪ್ರತಿಕ್ರಿಯೆ ಕೋರಿದೆ.

ಈ ಪಾರದರ್ಶಕತೆ ಕೊರತೆಯು ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆಯನ್ನು ಹಾಳು ಮಾಡುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಏಕೆಂದರೆ ಯಾರು ಯಾವ ರಾಜಕೀಯ ಪಕ್ಷಕ್ಕೆ ಹಣ ಕೊಟ್ಟಿದ್ದಾರೆ, ಆ ದಾನಿಗಳು ಯಾರು, ಅವರ ಉದ್ದೇಶ ಏನು ಎಂಬ ಮಾಹಿತಿಯನ್ನು ಮತದಾರರಿಗೆ ಸಂಪೂರ್ಣವಾಗಿ ಮರೆ ಮಾಚಿದಂತಾಗುತ್ತದೆ. ಇದರಿಂದ ಮತದಾರರು ತಮ್ಮ ಮತವನ್ನು ಹಾಕುವಾಗ ತರ್ಕಬದ್ಧವಾಗಿ, ಬುದ್ಧಿವಂತಿಕೆಯಿಂದ ಮತ್ತು ಸಂಪೂರ್ಣ ಮಾಹಿತಿ ಆಧರಿಸಿ ನಿರ್ಧಾರ ತೆಗೆದುಕೊಳ್ಳುವ ಅವಕಾಶವೇ ಇಲ್ಲವಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯಲ್ಲಿ ವಾದಿಸಲಾಗಿದೆ.

ಯಾವುದೇ ರಾಜಕೀಯ ಪಕ್ಷವನ್ನು ನೋಂದಣಿ ಮಾಡುವಾಗ ಮತ್ತು ಅದಕ್ಕೆ ಚಿಹ್ನೆ ಹಂಚಿಕೆ ಮಾಡುವಾಗ ನಗದು ರೂಪದಲ್ಲಿ ಯಾವುದೇ ದೇಣಿಗೆ ಪಡೆಯದಂತೆ ನಿರ್ದೇಶನ ನೀಡಲು ಚುನಾವಣಾ ಆಯೋಗಕ್ಕೆ ಸೂಚಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಯನ್ನು ನಾಲ್ಕು ವಾರಗಳ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದೆ.

ಅರ್ಜಿಯನ್ನು ಕೈಗೆತ್ತಿಕೊಂಡ ಪೀಠ, ಆರಂಭದಲ್ಲಿ ನೀವು ಹೈಕೋರ್ಟ್‌ಗೆ ಏಕೆ ಹೋಗಿಲ್ಲ ಎಂದು ಅರ್ಜಿದಾರ ಖೇಮ್ ಸಿಂಗ್ ಭಾಟಿ ಮತ್ತು ವಕೀಲೆ ಸ್ನೇಹಾ ಕಲಿತಾ ಪರ ಹಾಜರಿದ್ದ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರನ್ನು ಕೇಳಿದೆ ಎಂದು ವರದಿಯಾಗಿದೆ.

ಇದಕ್ಕೆ ಉತ್ತರಿಸಿದ ವಕೀಲ ಹನ್ಸಾರಿಯಾ, ಈ ಅರ್ಜಿಯು ದೇಶದಾದ್ಯಂತ ಇರುವ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅವುಗಳಿಗೆ ಬರುವ ನಿಧಿಗೆ ಸಂಬಂಧಿಸಿದೆ ಎಂದು ತಿಳಿಸಿದ್ದಾರೆ.

ನಂತರ, ಅರ್ಜಿಯನ್ನು ಆಲಿಸಲು ಒಪ್ಪಿಕೊಂಡ ನ್ಯಾಯಪೀಠ, ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಕಾಂಗ್ರೆಸ್‌ ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.

1961ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13Aನ ಷರತ್ತು (ಡಿ) ಅನ್ನು ಅಸಾಂವಿಧಾನಿಕ ಎಂದು ರದ್ದುಗೊಳಿಸುವಂತೆ ಮತ್ತು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ನ 2024 ರ ತೀರ್ಪನ್ನು ಉಲ್ಲೇಖಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ರಾಜಕೀಯ ಪಕ್ಷಗಳು ತಮಗೆ ಯಾವುದೇ ಮೊತ್ತದ ಹಣವನ್ನು ಪಾವತಿಸುವ ವ್ಯಕ್ತಿಯ ಹೆಸರು ಮತ್ತು ಇತರ ಎಲ್ಲಾ ವಿವರಗಳನ್ನು ಬಹಿರಂಗಪಡಿಸಬೇಕು ಮತ್ತು ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಯಾವುದೇ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಿರ್ದೇಶನ ನೀಡಬೇಕು ಎಂಬುವುದಾಗಿ ಅರ್ಜಿದಾರರು ಕೋರಿದ್ದಾರೆ ಎಂದು ವಕೀಲ ಜಯೇಶ್ ಕೆ ಉನ್ನಿಕೃಷ್ಣನ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ ತಿಳಿಸಲಾಗಿದೆ.

1961ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13A ರಾಜಕೀಯ ಪಕ್ಷಗಳ ಆದಾಯಕ್ಕೆ ಸಂಬಂಧಿಸಿದ ವಿಶೇಷ ನಿಬಂಧನೆಗೆ ಸಂಬಂಧಿಸಿದೆ.

ಸೆಕ್ಷನ್ 13A ರಾಜಕೀಯ ಪಕ್ಷಗಳಿಗೆ ಸೆಕ್ಯುರಿಟಿಗಳ ಮೇಲಿನ ಬಡ್ಡಿ, ಮನೆ ಆಸ್ತಿಯಿಂದ ಬರುವ ಆದಾಯ ಅಥವಾ ಇತರ ಮೂಲಗಳಿಂದ ಬರುವ ಆದಾಯ ಮತ್ತು ಸ್ವಯಂಪ್ರೇರಿತ ಕೊಡುಗೆಗಳ ಮೂಲಕ ಪಡೆಯುವ ಯಾವುದೇ ಆದಾಯವನ್ನು ಒಟ್ಟು ಆದಾಯದ ಲೆಕ್ಕಾಚಾರದಿಂದ ವಿನಾಯಿತಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...