Homeಮುಖಪುಟಪತಂಜಲಿ ಪ್ರೊಡಕ್ಟ್‌ನಲ್ಲಿ 'ಸಸ್ಯಾಹಾರಿ' ಎಂದು ಸುಳ್ಳು ನಮೂದಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಕೋರ್ಟ್ ಮೊರೆ

ಪತಂಜಲಿ ಪ್ರೊಡಕ್ಟ್‌ನಲ್ಲಿ ‘ಸಸ್ಯಾಹಾರಿ’ ಎಂದು ಸುಳ್ಳು ನಮೂದಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಕೋರ್ಟ್ ಮೊರೆ

- Advertisement -
- Advertisement -

ಬಾಬಾ ರಾಮ್‌ ದೇವ್‌ ಮಾಲಕತ್ವದ ಪತಂಜಲಿಯ ‘ದಿವ್ಯ ಮಂಜನ್’ ಟೂತ್ ಪೇಸ್ಟ್‌ನಲ್ಲಿ ಮಾಂಸಾಹಾರ ಪದಾರ್ಥಗಳಿವೆ ಎಂದು ಆರೋಪಿಸಿ ವಕೀಲ ಯತಿನ್ ಶರ್ಮ ದೆಹಲಿ ಹೈಕೋರ್ಟ್‌ಗೆ ದೂರು ನೀಡಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸುಬ್ರಮೊನಿಯಮ್ ಪ್ರಸಾದ್ ಅವರ ಪೀಠ, ಆಯುಷ್ ಸಚಿವಾಲಯವು ಸ್ಥಾಪಿಸಿರುವ ಸಮಿತಿಯು, ಔಷಧ ತಯಾರಿಕೆಯಲ್ಲಿ ಬಳಸಲಾಗುವ ಪದಾರ್ಥಗಳನ್ನು ಸಸ್ಯಾಹಾರ, ಮಾಂಸಾಹಾರ ಹಾಗೂ ಇನ್ನಿತರ ಪ್ರವರ್ಗ ಎಂದು ವರ್ಗೀಕರಿಸಲು ಮಾನದಂಡವನ್ನು ರೂಪಿಸುವಂತೆ ಸೂಚಿಸಿದ್ದು, ಈ ಕುರಿತು  10 ವಾರಗಳೊಳಗೆ ತನ್ನ ವರದಿ ಸಲ್ಲಿಸುವಂತೆ ಸಮಿತಿಗೆ ತಿಳಿಸಿದೆ. ಪತಂಜಲಿಯ ದಿವ್ಯ ಮಂಜನ್ ಟೂತ್‌ಪೇಸ್ಟ್‌ನಲ್ಲಿ ಮಾಂಸಾಹಾರಿ ಅಂಶಗಳಿವೆ ಎಂದು ಆರೋಪಿಸಿ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಫೆಬ್ರವರಿ 2ರಂದು ನ್ಯಾಯಾಲಯವು ಈ ಆದೇಶವನ್ನು ಹೊರಡಿಸಿದೆ.

ವಕೀಲ ಯತಿನ್ ಶರ್ಮಾ ಅವರು ಸಲ್ಲಿಸಿದ ಮನವಿಯಲ್ಲಿ, ಪತಂಜಲಿ ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಂಸಾಹಾರಿ ಪದಾರ್ಥಗಳ ಬಗ್ಗೆ ಉಲ್ಲೇಖಿಸಿದೆ, ಆದರೆ ‘ದಿವ್ಯ ಮಂಜನ್’ ಟೂತ್ ಪೇಸ್ಟ್‌ನ್ನು ಹಸಿರು ಚುಕ್ಕೆಯೊಂದಿಗೆ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದರಿಂದಾಗಿ ಗ್ರಾಹಕರನ್ನು ತಪ್ಪುದಾರಿಗೆಳೆಯಲಾಗಿದೆ, ಗ್ರಾಹಕರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲಾಗಿದೆ, ಗ್ರಾಹಕರನ್ನು ವಂಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಕೆಂಪು ಗುರುತಿನ ಬದಲು ಹಸಿರು ಗುರುತನ್ನು ಬಳಸಿ ಸಸ್ಯಹಾರವೆಂದು ಮೋಸ ಮಾಡಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ.

ಶರ್ಮಾ ಅವರು ಕಳೆದ ವರ್ಷ ಜುಲೈನಲ್ಲಿ ಈ ಕುರಿತು ಮನವಿ ಸಲ್ಲಿಸಿದ್ದರು, ನಂತರ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಲು ಆದೇಶಿಸಲಾಗಿತ್ತು. ಇದರ ನಂತರ ವಕೀಲರು 23.07.2023ರಂದು ಆಯುಷ್ ಸಚಿವಾಲಯಕ್ಕೆ ದೂರು ಸಲ್ಲಿಸಿದ್ದರು.

ಆಧುನಿಕ ವೈದ್ಯಕೀಯ ವ್ಯವಸ್ಥೆಗಳನ್ನು ಅವಹೇಳನ ಮಾಡುವ, ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸದಂತೆ ಪತಂಜಲಿ ಆಯುರ್ವೇದಕ್ಕೆ ಸುಪ್ರೀಂಕೋರ್ಟ್ ಇತ್ತೀಚೆಗೆ ಸೂಚನೆ ನೀಡಿತ್ತು. ನಿರ್ದಿಷ್ಟ ಕಾಯಿಲೆಗಳನ್ನು ಗುಣಪಡಿಸಬಹುದು ಎಂದು ಸೂಚಿಸುವ ಸುಳ್ಳು ಜಾಹೀರಾತು ನೀಡುವುದಕ್ಕಾಗಿ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂಪಾಯಿ ದಂಡವನ್ನು ವಿಧಿಸುವುದಾಗಿಯು ನ್ಯಾಯಾಲಯ ಎಚ್ಚರಿಸಿತ್ತು.

ಕಳೆದ ನವೆಂಬರ್‌ನಲ್ಲಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠವು ಪತಂಜಲಿ ಆಯುರ್ವೇದ್‌ನ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಮೌಖಿಕವಾಗಿ ಎಚ್ಚರಿಕೆ ನೀಡಿತ್ತು.

ಈ ಹಿಂದೆ ಆಗಸ್ಟ್ 23, 2022ರಲ್ಲಿ ವ್ಯಾಕ್ಸಿನೇಷನ್ ಡ್ರೈವ್ ಮತ್ತು ಆಧುನಿಕ ಔಷಧಿಗಳ ವಿರುದ್ಧ ರಾಮ್‌ದೇವ್ ಅವರ ಅಭಿಯಾನದ ವಿರುದ್ಧದ  IMA ಮನವಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂಕೋರ್ಟ್, ಕೇಂದ್ರ ಆರೋಗ್ಯ ಸಚಿವಾಲಯ, ಆಯುಷ್ ಸಚಿವಾಲಯ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್‌ಗೆ ನೋಟಿಸ್‌ ನೀಡಿತ್ತು.

ಇದನ್ನು ಓದಿ: ದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ: ಡಿಎಂಕೆ ಶಾಸಕನ ಪುತ್ರ, ಸೊಸೆಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...