Homeಮುಖಪುಟಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

- Advertisement -
- Advertisement -

ಪಿಎಂ ಕೇರ್ಸ್ ಫಂಡ್‌ನ ಪ್ರಸ್ತುತ ಸ್ಥಿತಿ ಮತ್ತು ಭಾರತ ಸರ್ಕಾರದೊಂದಿಗಿನ ಸಂಬಂಧಗಳ ಬಗ್ಗೆ ವಿವರಗಳನ್ನು ಬಹಿರಂಗ ಪಡಿಸುವಂತೆ ನಿರ್ದೇಶನ ಕೋರಿ ಉನ್ನತ ನ್ಯಾಯಾಲಯಕ್ಕೆ ಸಾಮಾಜಿಕ ಕಾರ್ಯಕರ್ತ, ಮಾಜಿ ಪತ್ರಕರ್ತ ಸಾಕತ್ ಗೋಖಲೆ ಪಿಐಎಲ್ ಸಲ್ಲಿಸಿದ್ದಾರೆ.

ಅರ್ಜಿದಾರ ಸಾಕೇತ್ ಗೋಖಲೆ, ಪಿಎಂ ಕೇರ್ಸ್ ಫಂಡ್‌ಗಳ ಹಂಚಿಕೆ ಮತ್ತು ಕೊರೊನಾ ಪರಿಹಾರ ಮತ್ತು ಪ್ರಗತಿಯ ಅನುಮೋದಿತ ಯೋಜನೆಗಳ ಸ್ಥಿತಿಗತಿಗಳ ಬಗ್ಗೆ ವಿವರಗಳನ್ನು ನೀಡುವಂತೆ ಅವರ ಅರ್ಜಿಯಲ್ಲಿ ನಿರ್ದೇಶನ ಕೋರಿದ್ದಾರೆ.

ಪಿಎಂ ಕೇರ್ಸ್ ಫಂಡ್ ಸರ್ಕಾರೇತರ ಪಾಲುದಾರರಾಗಿದ್ದು, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಸರ್ಕಾರದೊಂದಿಗೆ ಅಗತ್ಯ ವಸ್ತುಗಳ ವಿತರಣೆ ಮತ್ತು ಸರಬರಾಜಿಗೆ ನಿಕಟ ಸಂಬಂಧ ಹೊಂದಿರುವ ನಿರ್ಧಾರಗಳು ಮತ್ತು ಯೋಜನೆಗಳಲ್ಲಿ ನಿಕಟವಾಗಿ ತೊಡಗಿಸಿಕೊಂಡಿದೆ. ಹೀಗಾಗಿ ಇದರ ಮಾಹಿತಿಯನ್ನು ಬಹಿರಂಗ ಪಡಿಸಿ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್‌, ಕಾರ್ಪೋರೇಟ್‌ ಜವಾಬ್ದಾರಿಯ CSR ಮತ್ತು ಖಾಸಗಿ ಲಾಬಿ: ನಾವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವೆ

“PM CARES ನಿಧಿಯಿಂದಾಗುವ ಹಂಚಿಕೆಗಳ ಬಗ್ಗೆ ಸಾರ್ವಜನಿಕರು ತಿಳಿದುಕೊಳ್ಳಬೇಕೆಂದರೇ, ಅದಕ್ಕೆ ಪ್ರಧಾನ ಮಂತ್ರಿಗಳ ಕಚೇರಿ (PMO) ಹೊರಡಿಸಿದ ಹೇಳಿಕೆಗಳು ಮತ್ತು ಪತ್ರಿಕಾ ಪ್ರಕಟಣೆಗಳನ್ನು ಅವಲಂಬಿಸಬೇಕಾಗುತ್ತದೆ. ಸಾರ್ವಜನಿಕವಾಗಿ ಘೋಷಿಸಲಾದ ಹಂಚಿಕೆಗಳ ಜೊತೆಗೆ, ಇತರ ಕೊರೊನಾ ಸಂಬಂಧಿತ ವೆಚ್ಚಗಳಿಗೂ ಹಂಚಿಕೆಗಳನ್ನು ಮಾಡಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ” ಎಂದು ಗೋಖಲೆ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಲಸಿಕೆಗಳ ವಿಷಯದಲ್ಲಿ, ಕೋವಿಡ್ ಲಸಿಕೆ ಅಭಿವೃದ್ಧಿಗೆ ಭಾರತ ಸರ್ಕಾರವು ಯಾವುದೇ ಹಣವನ್ನು ವಿನಿಯೋಗಿಸಿಲ್ಲ ಅಥವಾ ಖರ್ಚು ಮಾಡಿಲ್ಲ ಎಂದು ಯೂನಿಯನ್ ಆಫ್ ಇಂಡಿಯಾ (ಯುಒಐ) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ. ಹೀಗಾಗಿಯೇ ಕೊರೊನಾ ಲಸಿಕೆಗಳ ಬೆಲೆಯನ್ನು ನಿರ್ಧರಿಸುವಲ್ಲಿ ಸರ್ಕಾರಕ್ಕೆ ಯಾವುದೇ ನಿಯಂತ್ರಣವಿಲ್ಲ ಎಂದು ಗೋಖಲೆ ಹೇಳಿದ್ದಾರೆ.

“ಇನ್ನು, ಪಿಎಂ ಕೇರ್ಸ್ ಫಂಡ್ ಸ್ವತಃ ಲಸಿಕೆ ಅಭಿವೃದ್ಧಿಗೆ ಸುಮಾರು 100 ಕೋಟಿ ರೂ.ಗಳ ಹಂಚಿಕೆಯನ್ನು ಘೋಷಿಸಿದೆ. ಆದರೆ ಇದಕ್ಕೆ ಯಾವುದಾದರೂ ಹೆಚ್ಚುವರಿ ಹಣವನ್ನು ವಿನಿಯೋಗಿಸಲಾಗಿದೆಯೆ ಎಂಬುದು ಸ್ಪಷ್ಟವಾಗಿಲ್ಲ, ಯಾವ ಮಾಹಿತಿಗಾಗಿ ಸಾರ್ವಜನಿಕ ವಲಯದಲ್ಲಿ ಲಭ್ಯವಿಲ್ಲ” ಎಂದು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಗಳಲ್ಲಿ, ಪಿಎಂ ಕೇರ್ಸ್ ಫಂಡ್ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮಾಡಿದ ವಿವಿಧ ಹಂಚಿಕೆಗಳು ಮತ್ತು ಯೋಜನೆಗಳ ಪ್ರಗತಿಯನ್ನು ಹೇಗೆ ಮೇಲ್ವಿಚಾರಣೆ ಮಾಡಿದೆ ಎಂಬುದರ ಕುರಿತು ಸುಪ್ರೀಂ ಕೋರ್ಟ್‌ಗೆ ಎಲ್ಲಾ ಮಾಹಿತಿಯನ್ನು ಲಭ್ಯವಾಗುವಂತೆ ಮಾಡುವುದು ಮುಖ್ಯ ಅರ್ಜಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಎರಡು ವಾರಗಳಲ್ಲಿ ಪಿಎಂ ಕೇರ್ಸ್ ವಿವರ ನೀಡಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...