Homeಮುಖಪುಟಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

- Advertisement -
- Advertisement -

ಪಿಎಂ ಕೇರ್ಸ್ ಫಂಡ್‌ನ ಪ್ರಸ್ತುತ ಸ್ಥಿತಿ ಮತ್ತು ಭಾರತ ಸರ್ಕಾರದೊಂದಿಗಿನ ಸಂಬಂಧಗಳ ಬಗ್ಗೆ ವಿವರಗಳನ್ನು ಬಹಿರಂಗ ಪಡಿಸುವಂತೆ ನಿರ್ದೇಶನ ಕೋರಿ ಉನ್ನತ ನ್ಯಾಯಾಲಯಕ್ಕೆ ಸಾಮಾಜಿಕ ಕಾರ್ಯಕರ್ತ, ಮಾಜಿ ಪತ್ರಕರ್ತ ಸಾಕತ್ ಗೋಖಲೆ ಪಿಐಎಲ್ ಸಲ್ಲಿಸಿದ್ದಾರೆ.

ಅರ್ಜಿದಾರ ಸಾಕೇತ್ ಗೋಖಲೆ, ಪಿಎಂ ಕೇರ್ಸ್ ಫಂಡ್‌ಗಳ ಹಂಚಿಕೆ ಮತ್ತು ಕೊರೊನಾ ಪರಿಹಾರ ಮತ್ತು ಪ್ರಗತಿಯ ಅನುಮೋದಿತ ಯೋಜನೆಗಳ ಸ್ಥಿತಿಗತಿಗಳ ಬಗ್ಗೆ ವಿವರಗಳನ್ನು ನೀಡುವಂತೆ ಅವರ ಅರ್ಜಿಯಲ್ಲಿ ನಿರ್ದೇಶನ ಕೋರಿದ್ದಾರೆ.

ಪಿಎಂ ಕೇರ್ಸ್ ಫಂಡ್ ಸರ್ಕಾರೇತರ ಪಾಲುದಾರರಾಗಿದ್ದು, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಸರ್ಕಾರದೊಂದಿಗೆ ಅಗತ್ಯ ವಸ್ತುಗಳ ವಿತರಣೆ ಮತ್ತು ಸರಬರಾಜಿಗೆ ನಿಕಟ ಸಂಬಂಧ ಹೊಂದಿರುವ ನಿರ್ಧಾರಗಳು ಮತ್ತು ಯೋಜನೆಗಳಲ್ಲಿ ನಿಕಟವಾಗಿ ತೊಡಗಿಸಿಕೊಂಡಿದೆ. ಹೀಗಾಗಿ ಇದರ ಮಾಹಿತಿಯನ್ನು ಬಹಿರಂಗ ಪಡಿಸಿ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್‌, ಕಾರ್ಪೋರೇಟ್‌ ಜವಾಬ್ದಾರಿಯ CSR ಮತ್ತು ಖಾಸಗಿ ಲಾಬಿ: ನಾವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವೆ

“PM CARES ನಿಧಿಯಿಂದಾಗುವ ಹಂಚಿಕೆಗಳ ಬಗ್ಗೆ ಸಾರ್ವಜನಿಕರು ತಿಳಿದುಕೊಳ್ಳಬೇಕೆಂದರೇ, ಅದಕ್ಕೆ ಪ್ರಧಾನ ಮಂತ್ರಿಗಳ ಕಚೇರಿ (PMO) ಹೊರಡಿಸಿದ ಹೇಳಿಕೆಗಳು ಮತ್ತು ಪತ್ರಿಕಾ ಪ್ರಕಟಣೆಗಳನ್ನು ಅವಲಂಬಿಸಬೇಕಾಗುತ್ತದೆ. ಸಾರ್ವಜನಿಕವಾಗಿ ಘೋಷಿಸಲಾದ ಹಂಚಿಕೆಗಳ ಜೊತೆಗೆ, ಇತರ ಕೊರೊನಾ ಸಂಬಂಧಿತ ವೆಚ್ಚಗಳಿಗೂ ಹಂಚಿಕೆಗಳನ್ನು ಮಾಡಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ” ಎಂದು ಗೋಖಲೆ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಲಸಿಕೆಗಳ ವಿಷಯದಲ್ಲಿ, ಕೋವಿಡ್ ಲಸಿಕೆ ಅಭಿವೃದ್ಧಿಗೆ ಭಾರತ ಸರ್ಕಾರವು ಯಾವುದೇ ಹಣವನ್ನು ವಿನಿಯೋಗಿಸಿಲ್ಲ ಅಥವಾ ಖರ್ಚು ಮಾಡಿಲ್ಲ ಎಂದು ಯೂನಿಯನ್ ಆಫ್ ಇಂಡಿಯಾ (ಯುಒಐ) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ. ಹೀಗಾಗಿಯೇ ಕೊರೊನಾ ಲಸಿಕೆಗಳ ಬೆಲೆಯನ್ನು ನಿರ್ಧರಿಸುವಲ್ಲಿ ಸರ್ಕಾರಕ್ಕೆ ಯಾವುದೇ ನಿಯಂತ್ರಣವಿಲ್ಲ ಎಂದು ಗೋಖಲೆ ಹೇಳಿದ್ದಾರೆ.

“ಇನ್ನು, ಪಿಎಂ ಕೇರ್ಸ್ ಫಂಡ್ ಸ್ವತಃ ಲಸಿಕೆ ಅಭಿವೃದ್ಧಿಗೆ ಸುಮಾರು 100 ಕೋಟಿ ರೂ.ಗಳ ಹಂಚಿಕೆಯನ್ನು ಘೋಷಿಸಿದೆ. ಆದರೆ ಇದಕ್ಕೆ ಯಾವುದಾದರೂ ಹೆಚ್ಚುವರಿ ಹಣವನ್ನು ವಿನಿಯೋಗಿಸಲಾಗಿದೆಯೆ ಎಂಬುದು ಸ್ಪಷ್ಟವಾಗಿಲ್ಲ, ಯಾವ ಮಾಹಿತಿಗಾಗಿ ಸಾರ್ವಜನಿಕ ವಲಯದಲ್ಲಿ ಲಭ್ಯವಿಲ್ಲ” ಎಂದು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಗಳಲ್ಲಿ, ಪಿಎಂ ಕೇರ್ಸ್ ಫಂಡ್ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮಾಡಿದ ವಿವಿಧ ಹಂಚಿಕೆಗಳು ಮತ್ತು ಯೋಜನೆಗಳ ಪ್ರಗತಿಯನ್ನು ಹೇಗೆ ಮೇಲ್ವಿಚಾರಣೆ ಮಾಡಿದೆ ಎಂಬುದರ ಕುರಿತು ಸುಪ್ರೀಂ ಕೋರ್ಟ್‌ಗೆ ಎಲ್ಲಾ ಮಾಹಿತಿಯನ್ನು ಲಭ್ಯವಾಗುವಂತೆ ಮಾಡುವುದು ಮುಖ್ಯ ಅರ್ಜಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಎರಡು ವಾರಗಳಲ್ಲಿ ಪಿಎಂ ಕೇರ್ಸ್ ವಿವರ ನೀಡಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....