Homeಮುಖಪುಟಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

- Advertisement -
- Advertisement -

ಪಿಎಂ ಕೇರ್ಸ್ ಫಂಡ್‌ನ ಪ್ರಸ್ತುತ ಸ್ಥಿತಿ ಮತ್ತು ಭಾರತ ಸರ್ಕಾರದೊಂದಿಗಿನ ಸಂಬಂಧಗಳ ಬಗ್ಗೆ ವಿವರಗಳನ್ನು ಬಹಿರಂಗ ಪಡಿಸುವಂತೆ ನಿರ್ದೇಶನ ಕೋರಿ ಉನ್ನತ ನ್ಯಾಯಾಲಯಕ್ಕೆ ಸಾಮಾಜಿಕ ಕಾರ್ಯಕರ್ತ, ಮಾಜಿ ಪತ್ರಕರ್ತ ಸಾಕತ್ ಗೋಖಲೆ ಪಿಐಎಲ್ ಸಲ್ಲಿಸಿದ್ದಾರೆ.

ಅರ್ಜಿದಾರ ಸಾಕೇತ್ ಗೋಖಲೆ, ಪಿಎಂ ಕೇರ್ಸ್ ಫಂಡ್‌ಗಳ ಹಂಚಿಕೆ ಮತ್ತು ಕೊರೊನಾ ಪರಿಹಾರ ಮತ್ತು ಪ್ರಗತಿಯ ಅನುಮೋದಿತ ಯೋಜನೆಗಳ ಸ್ಥಿತಿಗತಿಗಳ ಬಗ್ಗೆ ವಿವರಗಳನ್ನು ನೀಡುವಂತೆ ಅವರ ಅರ್ಜಿಯಲ್ಲಿ ನಿರ್ದೇಶನ ಕೋರಿದ್ದಾರೆ.

ಪಿಎಂ ಕೇರ್ಸ್ ಫಂಡ್ ಸರ್ಕಾರೇತರ ಪಾಲುದಾರರಾಗಿದ್ದು, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಸರ್ಕಾರದೊಂದಿಗೆ ಅಗತ್ಯ ವಸ್ತುಗಳ ವಿತರಣೆ ಮತ್ತು ಸರಬರಾಜಿಗೆ ನಿಕಟ ಸಂಬಂಧ ಹೊಂದಿರುವ ನಿರ್ಧಾರಗಳು ಮತ್ತು ಯೋಜನೆಗಳಲ್ಲಿ ನಿಕಟವಾಗಿ ತೊಡಗಿಸಿಕೊಂಡಿದೆ. ಹೀಗಾಗಿ ಇದರ ಮಾಹಿತಿಯನ್ನು ಬಹಿರಂಗ ಪಡಿಸಿ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್‌, ಕಾರ್ಪೋರೇಟ್‌ ಜವಾಬ್ದಾರಿಯ CSR ಮತ್ತು ಖಾಸಗಿ ಲಾಬಿ: ನಾವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವೆ

“PM CARES ನಿಧಿಯಿಂದಾಗುವ ಹಂಚಿಕೆಗಳ ಬಗ್ಗೆ ಸಾರ್ವಜನಿಕರು ತಿಳಿದುಕೊಳ್ಳಬೇಕೆಂದರೇ, ಅದಕ್ಕೆ ಪ್ರಧಾನ ಮಂತ್ರಿಗಳ ಕಚೇರಿ (PMO) ಹೊರಡಿಸಿದ ಹೇಳಿಕೆಗಳು ಮತ್ತು ಪತ್ರಿಕಾ ಪ್ರಕಟಣೆಗಳನ್ನು ಅವಲಂಬಿಸಬೇಕಾಗುತ್ತದೆ. ಸಾರ್ವಜನಿಕವಾಗಿ ಘೋಷಿಸಲಾದ ಹಂಚಿಕೆಗಳ ಜೊತೆಗೆ, ಇತರ ಕೊರೊನಾ ಸಂಬಂಧಿತ ವೆಚ್ಚಗಳಿಗೂ ಹಂಚಿಕೆಗಳನ್ನು ಮಾಡಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ” ಎಂದು ಗೋಖಲೆ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಲಸಿಕೆಗಳ ವಿಷಯದಲ್ಲಿ, ಕೋವಿಡ್ ಲಸಿಕೆ ಅಭಿವೃದ್ಧಿಗೆ ಭಾರತ ಸರ್ಕಾರವು ಯಾವುದೇ ಹಣವನ್ನು ವಿನಿಯೋಗಿಸಿಲ್ಲ ಅಥವಾ ಖರ್ಚು ಮಾಡಿಲ್ಲ ಎಂದು ಯೂನಿಯನ್ ಆಫ್ ಇಂಡಿಯಾ (ಯುಒಐ) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ. ಹೀಗಾಗಿಯೇ ಕೊರೊನಾ ಲಸಿಕೆಗಳ ಬೆಲೆಯನ್ನು ನಿರ್ಧರಿಸುವಲ್ಲಿ ಸರ್ಕಾರಕ್ಕೆ ಯಾವುದೇ ನಿಯಂತ್ರಣವಿಲ್ಲ ಎಂದು ಗೋಖಲೆ ಹೇಳಿದ್ದಾರೆ.

“ಇನ್ನು, ಪಿಎಂ ಕೇರ್ಸ್ ಫಂಡ್ ಸ್ವತಃ ಲಸಿಕೆ ಅಭಿವೃದ್ಧಿಗೆ ಸುಮಾರು 100 ಕೋಟಿ ರೂ.ಗಳ ಹಂಚಿಕೆಯನ್ನು ಘೋಷಿಸಿದೆ. ಆದರೆ ಇದಕ್ಕೆ ಯಾವುದಾದರೂ ಹೆಚ್ಚುವರಿ ಹಣವನ್ನು ವಿನಿಯೋಗಿಸಲಾಗಿದೆಯೆ ಎಂಬುದು ಸ್ಪಷ್ಟವಾಗಿಲ್ಲ, ಯಾವ ಮಾಹಿತಿಗಾಗಿ ಸಾರ್ವಜನಿಕ ವಲಯದಲ್ಲಿ ಲಭ್ಯವಿಲ್ಲ” ಎಂದು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಗಳಲ್ಲಿ, ಪಿಎಂ ಕೇರ್ಸ್ ಫಂಡ್ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮಾಡಿದ ವಿವಿಧ ಹಂಚಿಕೆಗಳು ಮತ್ತು ಯೋಜನೆಗಳ ಪ್ರಗತಿಯನ್ನು ಹೇಗೆ ಮೇಲ್ವಿಚಾರಣೆ ಮಾಡಿದೆ ಎಂಬುದರ ಕುರಿತು ಸುಪ್ರೀಂ ಕೋರ್ಟ್‌ಗೆ ಎಲ್ಲಾ ಮಾಹಿತಿಯನ್ನು ಲಭ್ಯವಾಗುವಂತೆ ಮಾಡುವುದು ಮುಖ್ಯ ಅರ್ಜಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಎರಡು ವಾರಗಳಲ್ಲಿ ಪಿಎಂ ಕೇರ್ಸ್ ವಿವರ ನೀಡಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...