Homeಮುಖಪುಟಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್‌ ಸಮ್ಮತಿ

ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್‌ ಸಮ್ಮತಿ

- Advertisement -
- Advertisement -

2023ರಲ್ಲಿ ಜಾರಿಗೆ ತಂದ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಯಡಿಯಲ್ಲಿ ಕೇಂದ್ರ ಸರ್ಕಾರವು ಹೊಸ ಚುನಾವಣಾ ಆಯುಕ್ತರ ನೇಮಕ ಮಾಡುವುದನ್ನು ತಡೆಯುವಂತೆ ಕೋರಿ ಸಲ್ಲಿಸಿದ ಅರ್ಜಿಯ ಪರಿಶೀಲನೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

ಅರುಣ್ ಗೋಯೆಲ್ ಅವರು ಚುನಾವಣಾ ಆಯುಕ್ತ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ  ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ಈ ಕುರಿತು ಅರ್ಜಿಯನ್ನು ಸಲ್ಲಿಸಿದ್ದಾರೆ.  ಲೋಕಸಭೆ ಚುನಾವಣೆಗೆ ಮುನ್ನ ಮೂರು ಸದಸ್ಯರ ಕೇಂದ್ರ ಚುನಾವಣಾ ಸಮಿತಿಯಲ್ಲಿ ಈಗ ಓರ್ವ ಸದಸ್ಯರು ಮಾತ್ರ ಇದ್ದಾರೆ. ಅರುಣ್ ಗೋಯೆಲ್  ರಾಜೀನಾಮೆ ಮತ್ತು ಅನೂಪ್ ಚಂದ್ರ ಪಾಂಡೆ ನಿವೃತ್ತರಾದ ಹಿನ್ನೆಲೆಯಲ್ಲಿ ಚುನಾವಣಾ ಸಮಿತಿಯ ಸದಸ್ಯರ ಸಂಖ್ಯೆ 1ಕ್ಕೆ ಇಳಿದಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಹಾಗೂ ನ್ಯಾಯಮೂರ್ತಿಗಳಾದ ಜೆ.ಪಿ. ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ, ಅರ್ಜಿದಾರರಿಗೆ ಈ ಮೇಲ್ ಕಳುಹಿಸಿ. ನಾವು ಪರಿಶೀಲಿಸುತ್ತೇವೆ ಎಂದು ಹೇಳಿದೆ. ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಪರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಹಿರಿಯ ನ್ಯಾಯವಾದಿ ವಿಕಾಸ್ ಸಿಂಗ್ ಹಾಗೂ ನ್ಯಾಯವಾದಿ ವರುಣ್ ಠಾಕೂರ್ ಅವರು ಅರ್ಜಿಯನ್ನು ತುರ್ತು ಪಟ್ಟಿ ಮಾಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಹಿಂದೆ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದ್ದ ಮಾರ್ಗಸೂಚಿಗಳನ್ನು ಅನುಸರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಠಾಕೂರ್ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ. ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಚುನಾವಣಾ ಆಯುಕ್ತರನ್ನು ನೇಮಿಸಬೇಕು ಎಂದು ತೀರ್ಪು ಹೇಳಿತ್ತು.

ಡಿಸೆಂಬರ್ 2023 ರಲ್ಲಿಸಂಸತ್ತು ಅಂಗೀಕರಿಸಿದ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವಾ ಷರತ್ತುಗಳು) ಕಾಯಿದೆಯಲ್ಲಿ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನು ಆಯ್ಕೆ ಸಮಿತಿಯಿಂದ ಹೊರಗಿಟ್ಟು ಕ್ಯಾಬಿನೆಟ್ ಸಚಿವರನ್ನು ಸೇರಿಸಲಾಗಿದೆ.

ಸರ್ಕಾರ ಹೊಸ ಕಾಯ್ದೆಯ ವಿರುದ್ದ ಜಯ ಠಾಕೂರ್ ಈ ಹಿಂದೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಸುಪ್ರೀಂ ಕೋರ್ಟ್ ಕಾಯ್ದೆಗೆ ತಡೆ ನೀಡಲು ನಿರಾಕರಿಸಿತ್ತು. ಕಾಯ್ದೆಯ ವಿರುದ್ದ ಸಲ್ಲಿಕೆಯಾಗಿರುವ ಹಲವು ಅರ್ಜಿಗಳು ಮುಂದಿನ ಏಪ್ರಿಲ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಹೊಸ ಕಾಯ್ದೆ ಪ್ರಕಾರ, ಪ್ರಧಾನಿ ನೇತೃತ್ವದ ಸಮಿತಿಯಲ್ಲಿ ಒಬ್ಬರು ಕೇಂದ್ರ ಸಚಿವರು ಮತ್ತು ಪ್ರತಿಪಕ್ಷದ ನಾಯಕರು ಇರಲಿದ್ದಾರೆ. ಪ್ರಸ್ತುತ, ಪ್ರಧಾನಿ ಮೋದಿ ನೇತೃತ್ವದ ಸಮಿತಿಯಲ್ಲಿ ಲೋಕಸಭೆಯ ಕಾಂಗ್ರೆಸ್ ಅಧೀರ್ ರಂಜನ್ ಚೌಧರಿ ಮತ್ತು ಒಬ್ಬರು ಕೇಂದ್ರ ಸಚಿವರು ಇದ್ದಾರೆ.

ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ಮತ್ತು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿಯಿಂದ ತೆರವಾಗಿರುವ ಎರಡು ಚುನಾವಣಾ ಆಯುಕ್ತರ ಹುದ್ದೆಗಳನ್ನು ಈ ವಾರಾಂತ್ಯದಲ್ಲಿ ಭರ್ತಿ ಮಾಡಲು ಮೋದಿ ಸರ್ಕಾರ ಮುಂದಾಗಿದ್ದು, ಈ ಮಧ್ಯೆ  ನಿರ್ಬಂಧವನ್ನು ಕೋರಿ ಕಾಂಗ್ರೆಸ್‌ ನಾಯಕಿ ಸುಪ್ರೀಂಕೋರ್ಟ್ ಮೊರೆ ಹೋಗಿರುವುದು ಮಹತ್ವವನ್ನು ಪಡೆದುಕೊಂಡಿದೆ.

ಇದನ್ನು ಓದಿ: ಮಮತಾ ಬ್ಯಾನರ್ಜಿ ನನ್ನ ವಿರುದ್ಧ ಒಮ್ಮೆ ಸ್ಪರ್ಧಿಸಲಿ: ಅಧೀರ್ ರಂಜನ್ ಚೌಧರಿ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...