Homeಮುಖಪುಟಔರಂಗಜೇಬ್ ಸಮಾಧಿ ಕೆಡವುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಪಿಐಎಲ್‌!

ಔರಂಗಜೇಬ್ ಸಮಾಧಿ ಕೆಡವುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಪಿಐಎಲ್‌!

- Advertisement -
- Advertisement -

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ದಾಬಾದ್‌ನಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿ ಕೆಡವಲು ಮತ್ತು ರಾಷ್ಟ್ರೀಯ ಸ್ಮಾರಕಗಳ ಪಟ್ಟಿಯಿಂದ ಸಮಾಧಿಯನ್ನು ಕೈಬಿಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಆದೇಶಿಸುವಂತೆ ಕೋರಿ ಬಾಂಬೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಕೇತನ್ ತಿರೋಡ್ಕರ್ ಎಂಬಾತ ಪಿಐಎಲ್‌ ಸಲ್ಲಿಸಿದ್ದು, ಕೆಲವು ಪುರಾತನ ಸ್ಮಾರಕಗಳನ್ನು ರಾಷ್ಟ್ರೀಯ ಪ್ರಾಮುಖ್ಯತೆ ಎಂದು ಗೊತ್ತುಪಡಿಸುವ ಎಎಸ್‌ಐ ಕಾಯ್ದೆ-1958ರ ವಿಭಾಗ 3ರೊಂದಿಗೆ ಔರಂಗಜೇಬ್ ಸಮಾಧಿ ಹೊಂದಿಕೆಯಾಗುವುದಿಲ್ಲ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಔರಂಗಜೇಬ್‌ ಸಮಾಧಿಯು 14 ನೇ ಶತಮಾನದ ಚಿಸ್ತಿ ಪಂಥದ ಸೂಫಿ ಸಂತ ಶೈಖ್ ಝೈನುದ್ದೀನ್ ಅವರ ದರ್ಗಾ ಸಂಕೀರ್ಣದಲ್ಲಿದೆ. ಹತ್ತಿರದಲ್ಲಿ ಔರಂಗಜೇಬ್‌ ಅವರ ಪುತ್ರರಲ್ಲಿ ಒಬ್ಬರಾದ ಹೈದರಾಬಾದ್‌ನ ಮೊದಲ ನಿಝಾಮ್ ಆಸಫ್ ಜಾ I ಮತ್ತು ಅವರ ಮಗ ನಾಸಿರ್ ಜಂಗ್ ಅವರ ಸಮಾಧಿಗಳಿವೆ. ಈ ಸಮಾಧಿಗಳನ್ನೂ ಕೆಡವಲು ಅರ್ಜಿಯಲ್ಲಿ ಕೋರಲಾಗಿದೆ.

“ಒಂದು ನಿರ್ದಿಷ್ಟ ಪ್ರದೇಶ ಅಥವಾ ಗುಂಪಿನ ಬದಲು, ಇಡೀ ದೇಶಕ್ಕೆ ಮೌಲ್ಯಯುತವಾದದ್ದನ್ನು ರಾಷ್ಟ್ರೀಯ ಪ್ರಾಮುಖ್ಯತೆ ಎನ್ನಲಾಗುತ್ತದೆ. ಏಕೆಂದರೆ, ಅದು ಇಡೀ ರಾಷ್ಟ್ರದ ಮೇಲೆ ಪರಿಣಾಮ ಬೀರುತ್ತದೆ. ಈ ಪರಿಣಾಮವನ್ನು ಭವಿಷ್ಯದ ಪೀಳಿಗೆ ಸಕಾರಾತ್ಮಕ ರೀತಿಯಲ್ಲಿ ಅರ್ಥಮಾಡಿಕೊಳ್ಳಬೇಕು” ಎಂದು ಅರ್ಜಿದಾರ ಕೇತನ್ ತಿರೋಡ್ಕರ್ ಪರವಾಗಿ ಅರ್ಜಿ ಸಲ್ಲಿಸಿರುವ ವಕೀಲ ರಾಜಭಾವು ಚೌಧರಿ ಹೇಳಿದ್ದಾರೆ.

“ಔರಂಗಜೇಬ್‌ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಿದ್ದು, ರಾಷ್ಟ್ರೀಯ ಮಹತ್ವವನ್ನು ಸೂಚಿಸುತ್ತದೆ ಎಂಬುದು ಸ್ವಯಂ ಮಾಡಿಕೊಂಡ ಅವಮಾನ.ಭಾರತದಲ್ಲಿ ಚೆಂಗಿಸ್‌ ಖಾನ್, ಮೊಹಮ್ಮದ್ ಘೋರಿ ಅಥವಾ ರಾಜ ಅಲೆಕ್ಸಾಂಡರ್‌ನಂತಹ ವ್ಯಕ್ತಿಗಳಿಗೆ ನಾವು ಎಂದಿಗೂ ಸ್ಮಾರಕಗಳನ್ನು ಸ್ಥಾಪಿಸಿಲ್ಲ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ನ್ಯಾಯಾಲಯವು ಸೂಕ್ತ ಸಮಯದಲ್ಲಿ ಅರ್ಜಿಯನ್ನು ವಿಚಾರಣೆ ನಡೆಸಲಿದೆ.

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...