Homeಮುಖಪುಟಔರಂಗಜೇಬ್ ಸಮಾಧಿ ಕೆಡವುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಪಿಐಎಲ್‌!

ಔರಂಗಜೇಬ್ ಸಮಾಧಿ ಕೆಡವುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಪಿಐಎಲ್‌!

- Advertisement -
- Advertisement -

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ದಾಬಾದ್‌ನಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿ ಕೆಡವಲು ಮತ್ತು ರಾಷ್ಟ್ರೀಯ ಸ್ಮಾರಕಗಳ ಪಟ್ಟಿಯಿಂದ ಸಮಾಧಿಯನ್ನು ಕೈಬಿಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಆದೇಶಿಸುವಂತೆ ಕೋರಿ ಬಾಂಬೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಕೇತನ್ ತಿರೋಡ್ಕರ್ ಎಂಬಾತ ಪಿಐಎಲ್‌ ಸಲ್ಲಿಸಿದ್ದು, ಕೆಲವು ಪುರಾತನ ಸ್ಮಾರಕಗಳನ್ನು ರಾಷ್ಟ್ರೀಯ ಪ್ರಾಮುಖ್ಯತೆ ಎಂದು ಗೊತ್ತುಪಡಿಸುವ ಎಎಸ್‌ಐ ಕಾಯ್ದೆ-1958ರ ವಿಭಾಗ 3ರೊಂದಿಗೆ ಔರಂಗಜೇಬ್ ಸಮಾಧಿ ಹೊಂದಿಕೆಯಾಗುವುದಿಲ್ಲ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಔರಂಗಜೇಬ್‌ ಸಮಾಧಿಯು 14 ನೇ ಶತಮಾನದ ಚಿಸ್ತಿ ಪಂಥದ ಸೂಫಿ ಸಂತ ಶೈಖ್ ಝೈನುದ್ದೀನ್ ಅವರ ದರ್ಗಾ ಸಂಕೀರ್ಣದಲ್ಲಿದೆ. ಹತ್ತಿರದಲ್ಲಿ ಔರಂಗಜೇಬ್‌ ಅವರ ಪುತ್ರರಲ್ಲಿ ಒಬ್ಬರಾದ ಹೈದರಾಬಾದ್‌ನ ಮೊದಲ ನಿಝಾಮ್ ಆಸಫ್ ಜಾ I ಮತ್ತು ಅವರ ಮಗ ನಾಸಿರ್ ಜಂಗ್ ಅವರ ಸಮಾಧಿಗಳಿವೆ. ಈ ಸಮಾಧಿಗಳನ್ನೂ ಕೆಡವಲು ಅರ್ಜಿಯಲ್ಲಿ ಕೋರಲಾಗಿದೆ.

“ಒಂದು ನಿರ್ದಿಷ್ಟ ಪ್ರದೇಶ ಅಥವಾ ಗುಂಪಿನ ಬದಲು, ಇಡೀ ದೇಶಕ್ಕೆ ಮೌಲ್ಯಯುತವಾದದ್ದನ್ನು ರಾಷ್ಟ್ರೀಯ ಪ್ರಾಮುಖ್ಯತೆ ಎನ್ನಲಾಗುತ್ತದೆ. ಏಕೆಂದರೆ, ಅದು ಇಡೀ ರಾಷ್ಟ್ರದ ಮೇಲೆ ಪರಿಣಾಮ ಬೀರುತ್ತದೆ. ಈ ಪರಿಣಾಮವನ್ನು ಭವಿಷ್ಯದ ಪೀಳಿಗೆ ಸಕಾರಾತ್ಮಕ ರೀತಿಯಲ್ಲಿ ಅರ್ಥಮಾಡಿಕೊಳ್ಳಬೇಕು” ಎಂದು ಅರ್ಜಿದಾರ ಕೇತನ್ ತಿರೋಡ್ಕರ್ ಪರವಾಗಿ ಅರ್ಜಿ ಸಲ್ಲಿಸಿರುವ ವಕೀಲ ರಾಜಭಾವು ಚೌಧರಿ ಹೇಳಿದ್ದಾರೆ.

“ಔರಂಗಜೇಬ್‌ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಿದ್ದು, ರಾಷ್ಟ್ರೀಯ ಮಹತ್ವವನ್ನು ಸೂಚಿಸುತ್ತದೆ ಎಂಬುದು ಸ್ವಯಂ ಮಾಡಿಕೊಂಡ ಅವಮಾನ.ಭಾರತದಲ್ಲಿ ಚೆಂಗಿಸ್‌ ಖಾನ್, ಮೊಹಮ್ಮದ್ ಘೋರಿ ಅಥವಾ ರಾಜ ಅಲೆಕ್ಸಾಂಡರ್‌ನಂತಹ ವ್ಯಕ್ತಿಗಳಿಗೆ ನಾವು ಎಂದಿಗೂ ಸ್ಮಾರಕಗಳನ್ನು ಸ್ಥಾಪಿಸಿಲ್ಲ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ನ್ಯಾಯಾಲಯವು ಸೂಕ್ತ ಸಮಯದಲ್ಲಿ ಅರ್ಜಿಯನ್ನು ವಿಚಾರಣೆ ನಡೆಸಲಿದೆ.

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...