Homeಕರ್ನಾಟಕಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಸೋಮವಾರ (ಡಿಸೆಂಬರ್ 8) ನೋಟಿಸ್‌ ನೀಡಿದೆ.

ವರುಣಾ ಕ್ಷೇತ್ರದ ಮತದಾರ ಕೂಡನಹಳ್ಳಿಯ ಕೆ. ಶಂಕರ್ ಎಂಬವರು ಅರ್ಜಿ ಸಲ್ಲಿಸಿದ್ದಾರೆ. ಶಂಕರ್ ಅವರು ಸಲ್ಲಿಸಿದ್ದ ಇದೇ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಕಳೆದ ಏಪ್ರಿಲ್‌ನಲ್ಲಿ ವಜಾಗೊಳಿಸಿತ್ತು.

2023ರ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾದ ಐದು ಚುನಾವಣಾ ಭರವಸೆಗಳು (ಗ್ಯಾರಂಟಿಗಳು) ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಪ್ರಕಾರ ಲಂಚ ಮತ್ತು ಭ್ರಷ್ಟಾಚಾರ ಎನಿಸಿಕೊಳ್ಳುತ್ತವೆ ಎಂದು ಶಂಕರ್‌‌ ವಾದಿಸಿದ್ದರು.

ಸಿದ್ದರಾಮಯ್ಯ ಅವರ ಒಪ್ಪಿಗೆಯೊಂದಿಗೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದರಿಂದ, ಅವರು ಕೂಡ ಭ್ರಷ್ಟಾಚಾರ ನಡೆಸಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು ಮತ್ತು ಆರು ವರ್ಷಗಳ ಕಾಲ ಅವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ವಿಧಿಸಬೇಕು ಎಂದು ಕೋರಿದ್ದರು.

ಈ ವಾದವನ್ನು ತಿರಸ್ಕರಿಸಿದ್ದ ಹೈಕೋರ್ಟ್‌ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರು, ಚುನಾವಣಾ ಭರವಸೆಗಳನ್ನು ಭ್ರಷ್ಟಾಚಾರ ಎನ್ನಲಾಗದು ಎಂದಿದ್ದರು. ಅರ್ಜಿಯಲ್ಲಿನ ಪ್ಯಾರಾಗಳ ಸಂಖ್ಯೆ ಮತ್ತು ಪರಿಶೀಲನಾ ಅಫಿಡವಿಟ್‌ ನಡುವೆ ವ್ಯತ್ಯಾಸಗಳಿವೆ. ಜೊತೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯ ಹೆಸರನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ ಎಂದಿದ್ದರು.

“ಗ್ಯಾರಂಟಿಗಳನ್ನು ಒಳಗೊಂಡ ಪ್ರಣಾಳಿಕೆ ಪಕ್ಷಕ್ಕೆ ಸೇರಿದ್ದು, ಇದನ್ನು ನನ್ನ ವೆಚ್ಚಕ್ಕೆ ಸೇರಿಸಬಹುದೇ? ಗ್ಯಾರಂಟಿ ಯೋಜನೆ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಇದು ನನ್ನ ಚುನಾವಣಾ ವೆಚ್ಚಕ್ಕೆ ಸೇರುತ್ತದೆಯೇ, ನಾನು ಮುಖ್ಯಮಂತ್ರಿಯಾದ ಮೇಲೆ ಇದು ಅನ್ವಯಿಸುವುದೇ?” ಎಂದು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

"ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ" ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ...

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಡಿಸೆಂಬರ್ 8) ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ....

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆ ಇಂದಿನಿಂದ (ಡಿಸೆಂಬರ್ 8) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭಗೊಂಡಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ ಏರಿಕೆಯ ವಿಷಯಗಳನ್ನು ಮುಂದಿಟ್ಟುಕೊಂಡು...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...