Homeಮುಖಪುಟ'ಬುಲ್ಡೋಝರ್ ಕಾರ್ಯಾಚರಣೆ' ವಿರುದ್ದ ತುರ್ತು ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

‘ಬುಲ್ಡೋಝರ್ ಕಾರ್ಯಾಚರಣೆ’ ವಿರುದ್ದ ತುರ್ತು ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಅಧಿಕಾರಿಗಳು ಬುಲ್ಡೋಝರ್ ಕಾರ್ಯಾಚರಣೆ ಅಥವಾ ಮನೆಗಳ ಧ್ವಂಸ ನಡೆಸುತ್ತಿರುವುದರ ವಿರುದ್ದ ತುರ್ತು ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಇಂದು ಎರಡು ಅರ್ಜಿಗಳು ಸಲ್ಲಿಕೆಯಾಗಿದೆ. ಈ ಅರ್ಜಿಗಳ ವಿಚಾರಣೆ ಸೆಪ್ಟೆಂಬರ್ 2 ರಂದು ನಡೆಯಲಿದೆ.

ಒಂದು ಅರ್ಜಿಯನ್ನು ಹಿರಿಯ ವಕೀಲ ಸಿಯು ಸಿಂಗ್ ಅವರು, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠದ ಮುಂದೆ ಪ್ರಸ್ತಾಪಿಸಿದ್ದು, ಅದನ್ನು ಬೃಂದಾ ಕಾರಟ್ VS ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಇತರರು ಪ್ರಕರಣದ ಮುಂದಿನ ವಿಚಾರಣೆಯ ವೇಳೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ 2022ರಲ್ಲಿ ಕೈಗೊಂಡ ಧ್ವಂಸ ಕಾರ್ಯಾಚರಣೆ ಪ್ರಶ್ನಿಸಿ ಬೃಂದಾ ಕಾರಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಯುತ್ತಿದೆ.

ಮತ್ತೊಂದು ಅರ್ಜಿಯನ್ನು ಅಡ್ವೊಕೇಟ್ ಪೌಝಿಯಾ ಶಕೀಲ್ ಸಲ್ಲಿಸಿದ್ದಾರೆ. ಈ ಅರ್ಜಿ ರಾಜಸ್ಥಾನದ ಉದಯಪುರದಲ್ಲಿ ಬಾಡಿಗೆದಾರನ ಮಗನ ಮೇಲೆ ಕ್ರಿಮಿನಲ್ ಪ್ರಕರಣವಿದೆ ಎಂಬ ಕಾರಣಕ್ಕೆ ತನ್ನ ಮನೆಯನ್ನು ಕೆಡವಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದಾಗಿದೆ. ಈ ಅರ್ಜಿಯಲ್ಲಿ ಮಧ್ಯಂತರ ಆದೇಶಕ್ಕೆ ಅರ್ಜಿದಾರ ಕೋರಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ನ್ಯಾಯಾಧೀಶರು ಎರಡೂ ಪ್ರಕರಣಗಳನ್ನು ಸೆಪ್ಟೆಂಬರ್ 2ರಂದು ವಿಚಾರಣೆಗೆ ಪಟ್ಟಿ ಮಾಡುವಂತೆ ಸೂಚಿಸಿದ್ದಾಗಿ ಲೈವ್ ಲಾ ವರದಿ ಮಾಡಿದೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಏಪ್ರಿಲ್ 2022ರಲ್ಲಿ ಕಟ್ಟಡಗಳ ಧ್ವಂಸ ಕಾರ್ಯಾಚರಣೆಗೆ ಮುಂದಾಗಿದ್ದ ಅಧಿಕಾರಿಗಳ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಧ್ವಂಸ ಕಾರ್ಯಾಚರಣೆಗೆ ತಡೆ ನೀಡಿದೆ. ಆದರೆ, ಅರ್ಜಿದಾರರು ಆರೋಪ ಕೇಳಿ ಬಂದ ತಕ್ಷಣ ಬುಲ್ಡೋಝರ್ ಮೂಲಕ ಕಟ್ಟಡ ಕೆಡವುವ ಕ್ರಮವನ್ನು ತಡೆಯುಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಅರ್ಜಿದಾರರಲ್ಲಿ ಒಬ್ಬರಾದ ಮಾಜಿ ರಾಜ್ಯಸಭಾ ಸಂಸದೆ ಮತ್ತು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಅವರು, ಏಪ್ರಿಲ್‌ 2022ರಲ್ಲಿ ಶೋಭಾ ಯಾತ್ರೆಯ ಮೆರವಣಿಗೆ ಮೇಲೆ ಕಲ್ಲು ತೂರಾಟದಿಂದ ಉಂಟಾದ ಕೋಮು ಹಿಂಸಾಚಾರದ ಬಳಿಕ, ಜಹಾಂಗೀರ್‌ಪುರಿ ಪ್ರದೇಶದಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಟ್ಟಡಗಳನ್ನು ನೆಲಸಮ ಮಾಡಿದ್ದನ್ನು ಪ್ರಶ್ನಿಸಿದ್ದರು.

2023ರ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆದಾಗ, ಹಿರಿಯ ವಕೀಲ ದುಶ್ಯಂತ್ ದವೆ (ಕೆಲ ಅರ್ಜಿದಾರರ ಪರ ವಾದ ಮಂಡಿಸಿದವರು) ರಾಜ್ಯ ಸರ್ಕಾರಗಳು ಅಪರಾಧಗಳ ಆಪಾದಿತ ಜನರ ಮನೆಗಳನ್ನು ಕೆಡವುವ ಪ್ರವೃತ್ತಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ‘ಮನೆ’ ಎಂಬುವುದು ಜನರ ಹಕ್ಕು ಎಂದು ಒತ್ತಿ ಹೇಳಿದ್ದರು. ಅದು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಬದುಕುವ ಹಕ್ಕಿನ ಭಾಗ ಎಂದು ವಾದಿಸಿದ್ದರು. ಅಲ್ಲದೆ ಕೆಡವಿದ ಮನೆಗಳ ಪುನರ್ ನಿರ್ಮಾಣಕ್ಕೆ ನ್ಯಾಯಾಲಯ ಆದೇಶ ನೀಡಬೇಕು ಎಂದು ಕೋರಿದ್ದರು.

ಇದನ್ನೂ ಓದಿ : ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...