Homeಮುಖಪುಟ'ಬುಲ್ಡೋಝರ್ ಕಾರ್ಯಾಚರಣೆ' ವಿರುದ್ದ ತುರ್ತು ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

‘ಬುಲ್ಡೋಝರ್ ಕಾರ್ಯಾಚರಣೆ’ ವಿರುದ್ದ ತುರ್ತು ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಅಧಿಕಾರಿಗಳು ಬುಲ್ಡೋಝರ್ ಕಾರ್ಯಾಚರಣೆ ಅಥವಾ ಮನೆಗಳ ಧ್ವಂಸ ನಡೆಸುತ್ತಿರುವುದರ ವಿರುದ್ದ ತುರ್ತು ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಇಂದು ಎರಡು ಅರ್ಜಿಗಳು ಸಲ್ಲಿಕೆಯಾಗಿದೆ. ಈ ಅರ್ಜಿಗಳ ವಿಚಾರಣೆ ಸೆಪ್ಟೆಂಬರ್ 2 ರಂದು ನಡೆಯಲಿದೆ.

ಒಂದು ಅರ್ಜಿಯನ್ನು ಹಿರಿಯ ವಕೀಲ ಸಿಯು ಸಿಂಗ್ ಅವರು, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠದ ಮುಂದೆ ಪ್ರಸ್ತಾಪಿಸಿದ್ದು, ಅದನ್ನು ಬೃಂದಾ ಕಾರಟ್ VS ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಇತರರು ಪ್ರಕರಣದ ಮುಂದಿನ ವಿಚಾರಣೆಯ ವೇಳೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ 2022ರಲ್ಲಿ ಕೈಗೊಂಡ ಧ್ವಂಸ ಕಾರ್ಯಾಚರಣೆ ಪ್ರಶ್ನಿಸಿ ಬೃಂದಾ ಕಾರಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಯುತ್ತಿದೆ.

ಮತ್ತೊಂದು ಅರ್ಜಿಯನ್ನು ಅಡ್ವೊಕೇಟ್ ಪೌಝಿಯಾ ಶಕೀಲ್ ಸಲ್ಲಿಸಿದ್ದಾರೆ. ಈ ಅರ್ಜಿ ರಾಜಸ್ಥಾನದ ಉದಯಪುರದಲ್ಲಿ ಬಾಡಿಗೆದಾರನ ಮಗನ ಮೇಲೆ ಕ್ರಿಮಿನಲ್ ಪ್ರಕರಣವಿದೆ ಎಂಬ ಕಾರಣಕ್ಕೆ ತನ್ನ ಮನೆಯನ್ನು ಕೆಡವಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದಾಗಿದೆ. ಈ ಅರ್ಜಿಯಲ್ಲಿ ಮಧ್ಯಂತರ ಆದೇಶಕ್ಕೆ ಅರ್ಜಿದಾರ ಕೋರಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ನ್ಯಾಯಾಧೀಶರು ಎರಡೂ ಪ್ರಕರಣಗಳನ್ನು ಸೆಪ್ಟೆಂಬರ್ 2ರಂದು ವಿಚಾರಣೆಗೆ ಪಟ್ಟಿ ಮಾಡುವಂತೆ ಸೂಚಿಸಿದ್ದಾಗಿ ಲೈವ್ ಲಾ ವರದಿ ಮಾಡಿದೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಏಪ್ರಿಲ್ 2022ರಲ್ಲಿ ಕಟ್ಟಡಗಳ ಧ್ವಂಸ ಕಾರ್ಯಾಚರಣೆಗೆ ಮುಂದಾಗಿದ್ದ ಅಧಿಕಾರಿಗಳ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಧ್ವಂಸ ಕಾರ್ಯಾಚರಣೆಗೆ ತಡೆ ನೀಡಿದೆ. ಆದರೆ, ಅರ್ಜಿದಾರರು ಆರೋಪ ಕೇಳಿ ಬಂದ ತಕ್ಷಣ ಬುಲ್ಡೋಝರ್ ಮೂಲಕ ಕಟ್ಟಡ ಕೆಡವುವ ಕ್ರಮವನ್ನು ತಡೆಯುಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಅರ್ಜಿದಾರರಲ್ಲಿ ಒಬ್ಬರಾದ ಮಾಜಿ ರಾಜ್ಯಸಭಾ ಸಂಸದೆ ಮತ್ತು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಅವರು, ಏಪ್ರಿಲ್‌ 2022ರಲ್ಲಿ ಶೋಭಾ ಯಾತ್ರೆಯ ಮೆರವಣಿಗೆ ಮೇಲೆ ಕಲ್ಲು ತೂರಾಟದಿಂದ ಉಂಟಾದ ಕೋಮು ಹಿಂಸಾಚಾರದ ಬಳಿಕ, ಜಹಾಂಗೀರ್‌ಪುರಿ ಪ್ರದೇಶದಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಟ್ಟಡಗಳನ್ನು ನೆಲಸಮ ಮಾಡಿದ್ದನ್ನು ಪ್ರಶ್ನಿಸಿದ್ದರು.

2023ರ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆದಾಗ, ಹಿರಿಯ ವಕೀಲ ದುಶ್ಯಂತ್ ದವೆ (ಕೆಲ ಅರ್ಜಿದಾರರ ಪರ ವಾದ ಮಂಡಿಸಿದವರು) ರಾಜ್ಯ ಸರ್ಕಾರಗಳು ಅಪರಾಧಗಳ ಆಪಾದಿತ ಜನರ ಮನೆಗಳನ್ನು ಕೆಡವುವ ಪ್ರವೃತ್ತಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ‘ಮನೆ’ ಎಂಬುವುದು ಜನರ ಹಕ್ಕು ಎಂದು ಒತ್ತಿ ಹೇಳಿದ್ದರು. ಅದು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಬದುಕುವ ಹಕ್ಕಿನ ಭಾಗ ಎಂದು ವಾದಿಸಿದ್ದರು. ಅಲ್ಲದೆ ಕೆಡವಿದ ಮನೆಗಳ ಪುನರ್ ನಿರ್ಮಾಣಕ್ಕೆ ನ್ಯಾಯಾಲಯ ಆದೇಶ ನೀಡಬೇಕು ಎಂದು ಕೋರಿದ್ದರು.

ಇದನ್ನೂ ಓದಿ : ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...