Homeಮುಖಪುಟಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಶೇಕಡ 20 ಎಥೆನಾಲ್ (E20) ಬೆರೆಸಿದ ಪೆಟ್ರೋಲ್ ಮಾರಾಟವನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಅಕ್ಷಯ್ ಮಲ್ಹೋತ್ರಾ ಎಂಬ ವಕೀಲ ಅರ್ಜಿ ಸಲ್ಲಿಸಿದ್ದು, ಗ್ರಾಹಕರಿಗೆ ಎಥೆನಾಲ್ ಮುಕ್ತ ಪೆಟ್ರೋಲ್ (E0) ಆಯ್ಕೆಯನ್ನು ಒದಗಿಸದೆ E20 ಪೆಟ್ರೋಲ್ ಅನ್ನು ಮಾತ್ರ ಲಭ್ಯವಾಗುವಂತೆ ಮಾಡುವುದು, ಹೆಚ್ಚಿನ ಎಥೆನಾಲ್ ಮಿಶ್ರಣದೊಂದಿಗೆ ಹೊಂದಿಕೆಯಾಗದ ಲಕ್ಷಾಂತರ ವಾಹನ ಮಾಲೀಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಅಲ್ಲದೆ, ಸಾರ್ವಜನಿಕ ಜಾಗೃತಿ ಮೂಡಿಸದೆ ಇಂತಹ ಯೋಜನೆ ಜಾರಿಗೊಳಿಸುವುದು ಗ್ರಾಹಕ ಸಂರಕ್ಷಣಾ ಕಾಯ್ದೆ, 2019ರ ಪ್ರಕಾರ ಮಾಹಿತಿಯುಕ್ತ ಆಯ್ಕೆಯನ್ನು ಹೊಂದುವ ಗ್ರಾಹಕರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಲಕ್ಷಾಂತರ ಭಾರತೀಯರಿಗೆ ತಮ್ಮ ವಾಹನಗಳಲ್ಲಿರುವ ಪೆಟ್ರೋಲ್ 100% ಪೆಟ್ರೋಲ್ ಅಲ್ಲ, ಬದಲಾಗಿ ಎಥೆನಾಲ್ ಮತ್ತು ಪೆಟ್ರೋಲ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ ಎಂದು ಅರ್ಜಿದಾರ ವಾದಿಸಿದ್ದಾರೆ. ಗ್ರಾಹಕರಿಗೆ ಯಾವುದೇ ವಾಸ್ತವಾಂಶವನ್ನು ಬಹಿರಂಗಪಡಿಸದ ಕಾರಣ ‘ತಿಳುವಳಿಕೆಯುಳ್ಳ ಗ್ರಾಹಕ’ ಆಯ್ಕೆಯ ಮೂಲ ಅಂಶವನ್ನು ಇದು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

E20 ಪೆಟ್ರೋಲ್ ಬಳಕೆಯು ಇಂಧನ ದಕ್ಷತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ವಿವಿಧ ವಾಹನ ಘಟಕಗಳ ಸವೆತಕ್ಕೆ ಕಾರಣವಾಗಬಹುದು. ಇದರಿಂದಾಗಿ ಗ್ರಾಹಕರ ಮೇಲೆ ಹೆಚ್ಚುವರಿ ವೆಚ್ಚಗಳು ಮತ್ತು ಸುರಕ್ಷತಾ ಕಾಳಜಿಗಳನ್ನು ಹೇರಿದಂತಾಗುತ್ತದೆ. E20ಗೆ ಅನುಗುಣವಾಗಿ ವಾಹನಗಳನ್ನು ವಿನ್ಯಾಸಗೊಳಿಸಲು ಮತ್ತು ಬಿಡುಗಡೆ ಮಾಡಲು ಆಟೋಮೊಬೈಲ್ ತಯಾರಕರಿಗೆ ಸಾಕಷ್ಟು ಅವಕಾಶವನ್ನು ನೀಡದೆ ನೀತಿಯನ್ನು ಜಾರಿಗೆ ತರುವ ಕೇಂದ್ರದ ಕ್ರಮವು ‘ಅಸಮಂಜಸ ಮತ್ತು ಅನಿಯಂತ್ರಿತ’ ಎಂದು ಅರ್ಜಿದಾರ ಹೇಳಿದ್ದಾರೆ.

ಏಪ್ರಿಲ್ 2023ರ ಮೊದಲು ಭಾರತದಲ್ಲಿ ತಯಾರಾದ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುವುದಿಲ್ಲ. ಅಲ್ಲದೆ, 2 ವರ್ಷ ಹಳೆಯದಾದ ಈ ವಾಹನಗಳು, BS-VI ಗೆ ಅನುಗುಣವಾಗಿದ್ದರೂ, ಶೇ. 20 ಎಥೆನಾಲ್‌ಗೆ ಹೊಂದಿಕೆಯಾಗುವುದಿಲ್ಲ, ಅವು E-10ಗೆ ಹೊಂದಿಕೆಯಾಗಬಹುದು ಎಂದಿದ್ದಾರೆ.

ಪೆಟ್ರೋಲ್‌ನಲ್ಲಿರುವ ಎಥೆನಾಲ್ ಅಂಶವು ಎಂಜಿನ್ ಭಾಗಗಳ ಸವೆತಕ್ಕೆ ಕಾರಣವಾಗುತ್ತದೆ. ಇದು ಇಂಧನ ದಕ್ಷತೆಯನ್ನು ಕಡಿಮೆ ಮಾಡುತ್ತದೆ. ವಾಹನಗಳ ಅಕಾಲಿಕ ಹಾನಿಗೊಳಗಾಗಲು ಕಾರಣವಾಗುತ್ತದೆ. ಇಂಧನ ಮಾರ್ಗಗಳು, ಪ್ಲಾಸ್ಟಿಕ್/ರಬ್ಬರ್ ಘಟಕಗಳು ಇತ್ಯಾದಿಗಳಿಗೆ ಹಾನಿ ಮಾಡುತ್ತದೆ. ವಾಹನದ ಕಡಿಮೆ ದಕ್ಷತೆಯಿಂದಾಗಿ ಪೆಟ್ರೋಲ್ ಬಳಕೆ ಹೆಚ್ಚಾಗಿರುತ್ತದೆ. ಎಂಜಿನ್‌ಗಳು ಹಾನಿಗೊಳಗಾಗುತ್ತವೆ. ಮೈಲೇಜ್ ಕಡಿಮೆಯಾಗುತ್ತದೆ. ಮಾಲಿನ್ಯವನ್ನು ಹೆಚ್ಚಿಸುತ್ತದೆ. ಕಾರುಗಳ ದುರಸ್ತಿ ಬಿಲ್‌ಗಳು ಹೆಚ್ಚಾಗುತ್ತವೆ ಮತ್ತು ವಿಮಾ ಹಕ್ಕುಗಳನ್ನು ನಿರಾಕರಿಸಲಾಗುತ್ತದೆ ಎಮದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ಮಾರುಕಟ್ಟೆಯಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0) ಲಭ್ಯವಾಗುವಂತೆ ನೋಡಿಕೊಳ್ಳಲು ಮತ್ತು ಮಾರಾಟವಾಗುತ್ತಿರುವ ಪೆಟ್ರೋಲ್ E20 ಎಂದು ಸ್ಪಷ್ಟವಾಗಿ ಸೂಚಿಸುವ ಲೇಬಲ್‌ಗಳನ್ನು ಇಂಧನ ಪಂಪ್‌ಗಳಲ್ಲಿ ಅಳವಡಿಸಲು ನಿರ್ದೇಶನಗಳನ್ನು ನೀಡುವಂತೆ ಪಿಐಎಲ್‌ ಕೋರಿದೆ.

ಪೆಟ್ರೋಲ್‌ಗೆ ಶೇ. 20 ಎಥೆನಾಲ್ ಬೆರೆಸುತ್ತಿದ್ದರೂ, ಪೆಟ್ರೋಲ್ ಬೆಲೆ ಕಡಿಮೆಯಾಗಿಲ್ಲ ಎಂದು ಅರ್ಜಿದಾರರು ಗಮನಸೆಳೆದಿದ್ದಾರೆ. ಪೆಟ್ರೋಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಕಂಪನಿಗಳು ಗಳಿಸುವ ಲಾಭವನ್ನು ಅಂತಿಮವಾಗಿ ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ, ಅವರು ಅದೇ ಮೊತ್ತವನ್ನು ಪಾವತಿಸುತ್ತಲೇ ಇರುತ್ತಾರೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಪೆಟ್ರೋಲ್‌ನೊಂದಿಗೆ ಎಥೆನಾಲ್ ಬೆರೆಸುವ ಯೋಜನೆಯು ಜಾಗತಿಕ ಪದ್ಧತಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಪಿಐಎಲ್ ಎತ್ತಿ ತೋರಿಸಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟದಲ್ಲಿ, ಎಥೆನಾಲ್ ಮುಕ್ತ ಪೆಟ್ರೋಲ್ ಇನ್ನೂ ಲಭ್ಯವಿದೆ. ಮಿಶ್ರಿತ ಇಂಧನವನ್ನು ಪೆಟ್ರೋಲ್ ಬಂಕ್‌ಗಳಲ್ಲಿ ಸ್ಪಷ್ಟ ಲೇಬಲ್‌ಗಳೊಂದಿಗೆ ನೀಡಲಾಗುತ್ತಿದೆ. ಆದ್ದರಿಂದ ಗ್ರಾಹಕರು ಮಾಹಿತಿಯುಕ್ತ ಆಯ್ಕೆ ಮಾಡಬಹುದು. ಆದರೆ, ಭಾರತದಲ್ಲಿ, ವಾಹನ ಚಾಲಕರ ಕಣ್ಣಿಗೆ ಮಣ್ಣೆಚರಲಾಗುತ್ತುದೆ. ಪೆಟ್ರೋಲ್ ಪಂಪ್‌ಗಳು ತಮ್ಮ ವಾಹನಗಳಿಗೆ ಏನು ತುಂಬಿಸುತ್ತಿವೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡದೆ ಎಥೆನಾಲ್-ಮಿಶ್ರಿತ ಇಂಧನವನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ಅರ್ಜಿದಾರ ಹೇಳಿದ್ದಾರೆ.

ಎಲ್ಲಾ ಇಂಧನ ಕೇಂದ್ರಗಳಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0)ಆಯ್ಕೆಯನ್ನೂ ನೀಡಬೇಕು. ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸ್ಪಷ್ಟ ಲೇಬಲ್ ಹಾಕಿ ಗ್ರಾಹಕರಿಗೆ ಮಾಹಿತಿ ನೀಡಬೇಕು. ಇಂಧನ ತುಂಬಿಸುವ ಸಮಯದಲ್ಲಿ ಗ್ರಾಹಕರಿಗೆ ಅವರ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುತ್ತವೆಯೇ ಎಂದು ತಿಳಿಸಬೇಕು. ಗ್ರಾಹಕ ವ್ಯವಹಾರಗಳ ಸಚಿವಾಲಯವು ಎಥೆನಾಲ್ ಮಿಶ್ರಿತ ಇಂಧನಗಳಿಗೆ ಗ್ರಾಹಕ ರಕ್ಷಣಾ ನಿಯಮಗಳನ್ನು ಜಾರಿಗೊಳಿಸಬೇಕು ಮತ್ತು ಸರಿಯಾದ ಸಲಹೆಗಳನ್ನು ನೀಡಬೇಕು. ಇಂಧನ ದಕ್ಷತೆ ಮತ್ತು ಹೊಂದಾಣಿಕೆಯಾಗದ ವಾಹನಗಳಲ್ಲಿ ಸವೆತಗಳ ಮೇಲೆ ಶೇ. 20 ಎಥೆನಾಲ್-ಮಿಶ್ರಿತ ಪೆಟ್ರೋಲ್ (E20) ಪ್ರಭಾವದ ಕುರಿತು ರಾಷ್ಟ್ರವ್ಯಾಪಿ ಅಧ್ಯಯನ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...