Homeಮುಖಪುಟಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಶೇಕಡ 20 ಎಥೆನಾಲ್ (E20) ಬೆರೆಸಿದ ಪೆಟ್ರೋಲ್ ಮಾರಾಟವನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಅಕ್ಷಯ್ ಮಲ್ಹೋತ್ರಾ ಎಂಬ ವಕೀಲ ಅರ್ಜಿ ಸಲ್ಲಿಸಿದ್ದು, ಗ್ರಾಹಕರಿಗೆ ಎಥೆನಾಲ್ ಮುಕ್ತ ಪೆಟ್ರೋಲ್ (E0) ಆಯ್ಕೆಯನ್ನು ಒದಗಿಸದೆ E20 ಪೆಟ್ರೋಲ್ ಅನ್ನು ಮಾತ್ರ ಲಭ್ಯವಾಗುವಂತೆ ಮಾಡುವುದು, ಹೆಚ್ಚಿನ ಎಥೆನಾಲ್ ಮಿಶ್ರಣದೊಂದಿಗೆ ಹೊಂದಿಕೆಯಾಗದ ಲಕ್ಷಾಂತರ ವಾಹನ ಮಾಲೀಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಅಲ್ಲದೆ, ಸಾರ್ವಜನಿಕ ಜಾಗೃತಿ ಮೂಡಿಸದೆ ಇಂತಹ ಯೋಜನೆ ಜಾರಿಗೊಳಿಸುವುದು ಗ್ರಾಹಕ ಸಂರಕ್ಷಣಾ ಕಾಯ್ದೆ, 2019ರ ಪ್ರಕಾರ ಮಾಹಿತಿಯುಕ್ತ ಆಯ್ಕೆಯನ್ನು ಹೊಂದುವ ಗ್ರಾಹಕರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಲಕ್ಷಾಂತರ ಭಾರತೀಯರಿಗೆ ತಮ್ಮ ವಾಹನಗಳಲ್ಲಿರುವ ಪೆಟ್ರೋಲ್ 100% ಪೆಟ್ರೋಲ್ ಅಲ್ಲ, ಬದಲಾಗಿ ಎಥೆನಾಲ್ ಮತ್ತು ಪೆಟ್ರೋಲ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ ಎಂದು ಅರ್ಜಿದಾರ ವಾದಿಸಿದ್ದಾರೆ. ಗ್ರಾಹಕರಿಗೆ ಯಾವುದೇ ವಾಸ್ತವಾಂಶವನ್ನು ಬಹಿರಂಗಪಡಿಸದ ಕಾರಣ ‘ತಿಳುವಳಿಕೆಯುಳ್ಳ ಗ್ರಾಹಕ’ ಆಯ್ಕೆಯ ಮೂಲ ಅಂಶವನ್ನು ಇದು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

E20 ಪೆಟ್ರೋಲ್ ಬಳಕೆಯು ಇಂಧನ ದಕ್ಷತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ವಿವಿಧ ವಾಹನ ಘಟಕಗಳ ಸವೆತಕ್ಕೆ ಕಾರಣವಾಗಬಹುದು. ಇದರಿಂದಾಗಿ ಗ್ರಾಹಕರ ಮೇಲೆ ಹೆಚ್ಚುವರಿ ವೆಚ್ಚಗಳು ಮತ್ತು ಸುರಕ್ಷತಾ ಕಾಳಜಿಗಳನ್ನು ಹೇರಿದಂತಾಗುತ್ತದೆ. E20ಗೆ ಅನುಗುಣವಾಗಿ ವಾಹನಗಳನ್ನು ವಿನ್ಯಾಸಗೊಳಿಸಲು ಮತ್ತು ಬಿಡುಗಡೆ ಮಾಡಲು ಆಟೋಮೊಬೈಲ್ ತಯಾರಕರಿಗೆ ಸಾಕಷ್ಟು ಅವಕಾಶವನ್ನು ನೀಡದೆ ನೀತಿಯನ್ನು ಜಾರಿಗೆ ತರುವ ಕೇಂದ್ರದ ಕ್ರಮವು ‘ಅಸಮಂಜಸ ಮತ್ತು ಅನಿಯಂತ್ರಿತ’ ಎಂದು ಅರ್ಜಿದಾರ ಹೇಳಿದ್ದಾರೆ.

ಏಪ್ರಿಲ್ 2023ರ ಮೊದಲು ಭಾರತದಲ್ಲಿ ತಯಾರಾದ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುವುದಿಲ್ಲ. ಅಲ್ಲದೆ, 2 ವರ್ಷ ಹಳೆಯದಾದ ಈ ವಾಹನಗಳು, BS-VI ಗೆ ಅನುಗುಣವಾಗಿದ್ದರೂ, ಶೇ. 20 ಎಥೆನಾಲ್‌ಗೆ ಹೊಂದಿಕೆಯಾಗುವುದಿಲ್ಲ, ಅವು E-10ಗೆ ಹೊಂದಿಕೆಯಾಗಬಹುದು ಎಂದಿದ್ದಾರೆ.

ಪೆಟ್ರೋಲ್‌ನಲ್ಲಿರುವ ಎಥೆನಾಲ್ ಅಂಶವು ಎಂಜಿನ್ ಭಾಗಗಳ ಸವೆತಕ್ಕೆ ಕಾರಣವಾಗುತ್ತದೆ. ಇದು ಇಂಧನ ದಕ್ಷತೆಯನ್ನು ಕಡಿಮೆ ಮಾಡುತ್ತದೆ. ವಾಹನಗಳ ಅಕಾಲಿಕ ಹಾನಿಗೊಳಗಾಗಲು ಕಾರಣವಾಗುತ್ತದೆ. ಇಂಧನ ಮಾರ್ಗಗಳು, ಪ್ಲಾಸ್ಟಿಕ್/ರಬ್ಬರ್ ಘಟಕಗಳು ಇತ್ಯಾದಿಗಳಿಗೆ ಹಾನಿ ಮಾಡುತ್ತದೆ. ವಾಹನದ ಕಡಿಮೆ ದಕ್ಷತೆಯಿಂದಾಗಿ ಪೆಟ್ರೋಲ್ ಬಳಕೆ ಹೆಚ್ಚಾಗಿರುತ್ತದೆ. ಎಂಜಿನ್‌ಗಳು ಹಾನಿಗೊಳಗಾಗುತ್ತವೆ. ಮೈಲೇಜ್ ಕಡಿಮೆಯಾಗುತ್ತದೆ. ಮಾಲಿನ್ಯವನ್ನು ಹೆಚ್ಚಿಸುತ್ತದೆ. ಕಾರುಗಳ ದುರಸ್ತಿ ಬಿಲ್‌ಗಳು ಹೆಚ್ಚಾಗುತ್ತವೆ ಮತ್ತು ವಿಮಾ ಹಕ್ಕುಗಳನ್ನು ನಿರಾಕರಿಸಲಾಗುತ್ತದೆ ಎಮದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ಮಾರುಕಟ್ಟೆಯಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0) ಲಭ್ಯವಾಗುವಂತೆ ನೋಡಿಕೊಳ್ಳಲು ಮತ್ತು ಮಾರಾಟವಾಗುತ್ತಿರುವ ಪೆಟ್ರೋಲ್ E20 ಎಂದು ಸ್ಪಷ್ಟವಾಗಿ ಸೂಚಿಸುವ ಲೇಬಲ್‌ಗಳನ್ನು ಇಂಧನ ಪಂಪ್‌ಗಳಲ್ಲಿ ಅಳವಡಿಸಲು ನಿರ್ದೇಶನಗಳನ್ನು ನೀಡುವಂತೆ ಪಿಐಎಲ್‌ ಕೋರಿದೆ.

ಪೆಟ್ರೋಲ್‌ಗೆ ಶೇ. 20 ಎಥೆನಾಲ್ ಬೆರೆಸುತ್ತಿದ್ದರೂ, ಪೆಟ್ರೋಲ್ ಬೆಲೆ ಕಡಿಮೆಯಾಗಿಲ್ಲ ಎಂದು ಅರ್ಜಿದಾರರು ಗಮನಸೆಳೆದಿದ್ದಾರೆ. ಪೆಟ್ರೋಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಕಂಪನಿಗಳು ಗಳಿಸುವ ಲಾಭವನ್ನು ಅಂತಿಮವಾಗಿ ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ, ಅವರು ಅದೇ ಮೊತ್ತವನ್ನು ಪಾವತಿಸುತ್ತಲೇ ಇರುತ್ತಾರೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಪೆಟ್ರೋಲ್‌ನೊಂದಿಗೆ ಎಥೆನಾಲ್ ಬೆರೆಸುವ ಯೋಜನೆಯು ಜಾಗತಿಕ ಪದ್ಧತಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಪಿಐಎಲ್ ಎತ್ತಿ ತೋರಿಸಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟದಲ್ಲಿ, ಎಥೆನಾಲ್ ಮುಕ್ತ ಪೆಟ್ರೋಲ್ ಇನ್ನೂ ಲಭ್ಯವಿದೆ. ಮಿಶ್ರಿತ ಇಂಧನವನ್ನು ಪೆಟ್ರೋಲ್ ಬಂಕ್‌ಗಳಲ್ಲಿ ಸ್ಪಷ್ಟ ಲೇಬಲ್‌ಗಳೊಂದಿಗೆ ನೀಡಲಾಗುತ್ತಿದೆ. ಆದ್ದರಿಂದ ಗ್ರಾಹಕರು ಮಾಹಿತಿಯುಕ್ತ ಆಯ್ಕೆ ಮಾಡಬಹುದು. ಆದರೆ, ಭಾರತದಲ್ಲಿ, ವಾಹನ ಚಾಲಕರ ಕಣ್ಣಿಗೆ ಮಣ್ಣೆಚರಲಾಗುತ್ತುದೆ. ಪೆಟ್ರೋಲ್ ಪಂಪ್‌ಗಳು ತಮ್ಮ ವಾಹನಗಳಿಗೆ ಏನು ತುಂಬಿಸುತ್ತಿವೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡದೆ ಎಥೆನಾಲ್-ಮಿಶ್ರಿತ ಇಂಧನವನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ಅರ್ಜಿದಾರ ಹೇಳಿದ್ದಾರೆ.

ಎಲ್ಲಾ ಇಂಧನ ಕೇಂದ್ರಗಳಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0)ಆಯ್ಕೆಯನ್ನೂ ನೀಡಬೇಕು. ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸ್ಪಷ್ಟ ಲೇಬಲ್ ಹಾಕಿ ಗ್ರಾಹಕರಿಗೆ ಮಾಹಿತಿ ನೀಡಬೇಕು. ಇಂಧನ ತುಂಬಿಸುವ ಸಮಯದಲ್ಲಿ ಗ್ರಾಹಕರಿಗೆ ಅವರ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುತ್ತವೆಯೇ ಎಂದು ತಿಳಿಸಬೇಕು. ಗ್ರಾಹಕ ವ್ಯವಹಾರಗಳ ಸಚಿವಾಲಯವು ಎಥೆನಾಲ್ ಮಿಶ್ರಿತ ಇಂಧನಗಳಿಗೆ ಗ್ರಾಹಕ ರಕ್ಷಣಾ ನಿಯಮಗಳನ್ನು ಜಾರಿಗೊಳಿಸಬೇಕು ಮತ್ತು ಸರಿಯಾದ ಸಲಹೆಗಳನ್ನು ನೀಡಬೇಕು. ಇಂಧನ ದಕ್ಷತೆ ಮತ್ತು ಹೊಂದಾಣಿಕೆಯಾಗದ ವಾಹನಗಳಲ್ಲಿ ಸವೆತಗಳ ಮೇಲೆ ಶೇ. 20 ಎಥೆನಾಲ್-ಮಿಶ್ರಿತ ಪೆಟ್ರೋಲ್ (E20) ಪ್ರಭಾವದ ಕುರಿತು ರಾಷ್ಟ್ರವ್ಯಾಪಿ ಅಧ್ಯಯನ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...