Homeಮುಖಪುಟಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಶೇಕಡ 20 ಎಥೆನಾಲ್ (E20) ಬೆರೆಸಿದ ಪೆಟ್ರೋಲ್ ಮಾರಾಟವನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಅಕ್ಷಯ್ ಮಲ್ಹೋತ್ರಾ ಎಂಬ ವಕೀಲ ಅರ್ಜಿ ಸಲ್ಲಿಸಿದ್ದು, ಗ್ರಾಹಕರಿಗೆ ಎಥೆನಾಲ್ ಮುಕ್ತ ಪೆಟ್ರೋಲ್ (E0) ಆಯ್ಕೆಯನ್ನು ಒದಗಿಸದೆ E20 ಪೆಟ್ರೋಲ್ ಅನ್ನು ಮಾತ್ರ ಲಭ್ಯವಾಗುವಂತೆ ಮಾಡುವುದು, ಹೆಚ್ಚಿನ ಎಥೆನಾಲ್ ಮಿಶ್ರಣದೊಂದಿಗೆ ಹೊಂದಿಕೆಯಾಗದ ಲಕ್ಷಾಂತರ ವಾಹನ ಮಾಲೀಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಅಲ್ಲದೆ, ಸಾರ್ವಜನಿಕ ಜಾಗೃತಿ ಮೂಡಿಸದೆ ಇಂತಹ ಯೋಜನೆ ಜಾರಿಗೊಳಿಸುವುದು ಗ್ರಾಹಕ ಸಂರಕ್ಷಣಾ ಕಾಯ್ದೆ, 2019ರ ಪ್ರಕಾರ ಮಾಹಿತಿಯುಕ್ತ ಆಯ್ಕೆಯನ್ನು ಹೊಂದುವ ಗ್ರಾಹಕರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಲಕ್ಷಾಂತರ ಭಾರತೀಯರಿಗೆ ತಮ್ಮ ವಾಹನಗಳಲ್ಲಿರುವ ಪೆಟ್ರೋಲ್ 100% ಪೆಟ್ರೋಲ್ ಅಲ್ಲ, ಬದಲಾಗಿ ಎಥೆನಾಲ್ ಮತ್ತು ಪೆಟ್ರೋಲ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ ಎಂದು ಅರ್ಜಿದಾರ ವಾದಿಸಿದ್ದಾರೆ. ಗ್ರಾಹಕರಿಗೆ ಯಾವುದೇ ವಾಸ್ತವಾಂಶವನ್ನು ಬಹಿರಂಗಪಡಿಸದ ಕಾರಣ ‘ತಿಳುವಳಿಕೆಯುಳ್ಳ ಗ್ರಾಹಕ’ ಆಯ್ಕೆಯ ಮೂಲ ಅಂಶವನ್ನು ಇದು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

E20 ಪೆಟ್ರೋಲ್ ಬಳಕೆಯು ಇಂಧನ ದಕ್ಷತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ವಿವಿಧ ವಾಹನ ಘಟಕಗಳ ಸವೆತಕ್ಕೆ ಕಾರಣವಾಗಬಹುದು. ಇದರಿಂದಾಗಿ ಗ್ರಾಹಕರ ಮೇಲೆ ಹೆಚ್ಚುವರಿ ವೆಚ್ಚಗಳು ಮತ್ತು ಸುರಕ್ಷತಾ ಕಾಳಜಿಗಳನ್ನು ಹೇರಿದಂತಾಗುತ್ತದೆ. E20ಗೆ ಅನುಗುಣವಾಗಿ ವಾಹನಗಳನ್ನು ವಿನ್ಯಾಸಗೊಳಿಸಲು ಮತ್ತು ಬಿಡುಗಡೆ ಮಾಡಲು ಆಟೋಮೊಬೈಲ್ ತಯಾರಕರಿಗೆ ಸಾಕಷ್ಟು ಅವಕಾಶವನ್ನು ನೀಡದೆ ನೀತಿಯನ್ನು ಜಾರಿಗೆ ತರುವ ಕೇಂದ್ರದ ಕ್ರಮವು ‘ಅಸಮಂಜಸ ಮತ್ತು ಅನಿಯಂತ್ರಿತ’ ಎಂದು ಅರ್ಜಿದಾರ ಹೇಳಿದ್ದಾರೆ.

ಏಪ್ರಿಲ್ 2023ರ ಮೊದಲು ಭಾರತದಲ್ಲಿ ತಯಾರಾದ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುವುದಿಲ್ಲ. ಅಲ್ಲದೆ, 2 ವರ್ಷ ಹಳೆಯದಾದ ಈ ವಾಹನಗಳು, BS-VI ಗೆ ಅನುಗುಣವಾಗಿದ್ದರೂ, ಶೇ. 20 ಎಥೆನಾಲ್‌ಗೆ ಹೊಂದಿಕೆಯಾಗುವುದಿಲ್ಲ, ಅವು E-10ಗೆ ಹೊಂದಿಕೆಯಾಗಬಹುದು ಎಂದಿದ್ದಾರೆ.

ಪೆಟ್ರೋಲ್‌ನಲ್ಲಿರುವ ಎಥೆನಾಲ್ ಅಂಶವು ಎಂಜಿನ್ ಭಾಗಗಳ ಸವೆತಕ್ಕೆ ಕಾರಣವಾಗುತ್ತದೆ. ಇದು ಇಂಧನ ದಕ್ಷತೆಯನ್ನು ಕಡಿಮೆ ಮಾಡುತ್ತದೆ. ವಾಹನಗಳ ಅಕಾಲಿಕ ಹಾನಿಗೊಳಗಾಗಲು ಕಾರಣವಾಗುತ್ತದೆ. ಇಂಧನ ಮಾರ್ಗಗಳು, ಪ್ಲಾಸ್ಟಿಕ್/ರಬ್ಬರ್ ಘಟಕಗಳು ಇತ್ಯಾದಿಗಳಿಗೆ ಹಾನಿ ಮಾಡುತ್ತದೆ. ವಾಹನದ ಕಡಿಮೆ ದಕ್ಷತೆಯಿಂದಾಗಿ ಪೆಟ್ರೋಲ್ ಬಳಕೆ ಹೆಚ್ಚಾಗಿರುತ್ತದೆ. ಎಂಜಿನ್‌ಗಳು ಹಾನಿಗೊಳಗಾಗುತ್ತವೆ. ಮೈಲೇಜ್ ಕಡಿಮೆಯಾಗುತ್ತದೆ. ಮಾಲಿನ್ಯವನ್ನು ಹೆಚ್ಚಿಸುತ್ತದೆ. ಕಾರುಗಳ ದುರಸ್ತಿ ಬಿಲ್‌ಗಳು ಹೆಚ್ಚಾಗುತ್ತವೆ ಮತ್ತು ವಿಮಾ ಹಕ್ಕುಗಳನ್ನು ನಿರಾಕರಿಸಲಾಗುತ್ತದೆ ಎಮದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ಮಾರುಕಟ್ಟೆಯಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0) ಲಭ್ಯವಾಗುವಂತೆ ನೋಡಿಕೊಳ್ಳಲು ಮತ್ತು ಮಾರಾಟವಾಗುತ್ತಿರುವ ಪೆಟ್ರೋಲ್ E20 ಎಂದು ಸ್ಪಷ್ಟವಾಗಿ ಸೂಚಿಸುವ ಲೇಬಲ್‌ಗಳನ್ನು ಇಂಧನ ಪಂಪ್‌ಗಳಲ್ಲಿ ಅಳವಡಿಸಲು ನಿರ್ದೇಶನಗಳನ್ನು ನೀಡುವಂತೆ ಪಿಐಎಲ್‌ ಕೋರಿದೆ.

ಪೆಟ್ರೋಲ್‌ಗೆ ಶೇ. 20 ಎಥೆನಾಲ್ ಬೆರೆಸುತ್ತಿದ್ದರೂ, ಪೆಟ್ರೋಲ್ ಬೆಲೆ ಕಡಿಮೆಯಾಗಿಲ್ಲ ಎಂದು ಅರ್ಜಿದಾರರು ಗಮನಸೆಳೆದಿದ್ದಾರೆ. ಪೆಟ್ರೋಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಕಂಪನಿಗಳು ಗಳಿಸುವ ಲಾಭವನ್ನು ಅಂತಿಮವಾಗಿ ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ, ಅವರು ಅದೇ ಮೊತ್ತವನ್ನು ಪಾವತಿಸುತ್ತಲೇ ಇರುತ್ತಾರೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಪೆಟ್ರೋಲ್‌ನೊಂದಿಗೆ ಎಥೆನಾಲ್ ಬೆರೆಸುವ ಯೋಜನೆಯು ಜಾಗತಿಕ ಪದ್ಧತಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಪಿಐಎಲ್ ಎತ್ತಿ ತೋರಿಸಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟದಲ್ಲಿ, ಎಥೆನಾಲ್ ಮುಕ್ತ ಪೆಟ್ರೋಲ್ ಇನ್ನೂ ಲಭ್ಯವಿದೆ. ಮಿಶ್ರಿತ ಇಂಧನವನ್ನು ಪೆಟ್ರೋಲ್ ಬಂಕ್‌ಗಳಲ್ಲಿ ಸ್ಪಷ್ಟ ಲೇಬಲ್‌ಗಳೊಂದಿಗೆ ನೀಡಲಾಗುತ್ತಿದೆ. ಆದ್ದರಿಂದ ಗ್ರಾಹಕರು ಮಾಹಿತಿಯುಕ್ತ ಆಯ್ಕೆ ಮಾಡಬಹುದು. ಆದರೆ, ಭಾರತದಲ್ಲಿ, ವಾಹನ ಚಾಲಕರ ಕಣ್ಣಿಗೆ ಮಣ್ಣೆಚರಲಾಗುತ್ತುದೆ. ಪೆಟ್ರೋಲ್ ಪಂಪ್‌ಗಳು ತಮ್ಮ ವಾಹನಗಳಿಗೆ ಏನು ತುಂಬಿಸುತ್ತಿವೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡದೆ ಎಥೆನಾಲ್-ಮಿಶ್ರಿತ ಇಂಧನವನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ಅರ್ಜಿದಾರ ಹೇಳಿದ್ದಾರೆ.

ಎಲ್ಲಾ ಇಂಧನ ಕೇಂದ್ರಗಳಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0)ಆಯ್ಕೆಯನ್ನೂ ನೀಡಬೇಕು. ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸ್ಪಷ್ಟ ಲೇಬಲ್ ಹಾಕಿ ಗ್ರಾಹಕರಿಗೆ ಮಾಹಿತಿ ನೀಡಬೇಕು. ಇಂಧನ ತುಂಬಿಸುವ ಸಮಯದಲ್ಲಿ ಗ್ರಾಹಕರಿಗೆ ಅವರ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುತ್ತವೆಯೇ ಎಂದು ತಿಳಿಸಬೇಕು. ಗ್ರಾಹಕ ವ್ಯವಹಾರಗಳ ಸಚಿವಾಲಯವು ಎಥೆನಾಲ್ ಮಿಶ್ರಿತ ಇಂಧನಗಳಿಗೆ ಗ್ರಾಹಕ ರಕ್ಷಣಾ ನಿಯಮಗಳನ್ನು ಜಾರಿಗೊಳಿಸಬೇಕು ಮತ್ತು ಸರಿಯಾದ ಸಲಹೆಗಳನ್ನು ನೀಡಬೇಕು. ಇಂಧನ ದಕ್ಷತೆ ಮತ್ತು ಹೊಂದಾಣಿಕೆಯಾಗದ ವಾಹನಗಳಲ್ಲಿ ಸವೆತಗಳ ಮೇಲೆ ಶೇ. 20 ಎಥೆನಾಲ್-ಮಿಶ್ರಿತ ಪೆಟ್ರೋಲ್ (E20) ಪ್ರಭಾವದ ಕುರಿತು ರಾಷ್ಟ್ರವ್ಯಾಪಿ ಅಧ್ಯಯನ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...