Homeಮುಖಪುಟಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಶೇಕಡ 20 ಎಥೆನಾಲ್ (E20) ಬೆರೆಸಿದ ಪೆಟ್ರೋಲ್ ಮಾರಾಟವನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಅಕ್ಷಯ್ ಮಲ್ಹೋತ್ರಾ ಎಂಬ ವಕೀಲ ಅರ್ಜಿ ಸಲ್ಲಿಸಿದ್ದು, ಗ್ರಾಹಕರಿಗೆ ಎಥೆನಾಲ್ ಮುಕ್ತ ಪೆಟ್ರೋಲ್ (E0) ಆಯ್ಕೆಯನ್ನು ಒದಗಿಸದೆ E20 ಪೆಟ್ರೋಲ್ ಅನ್ನು ಮಾತ್ರ ಲಭ್ಯವಾಗುವಂತೆ ಮಾಡುವುದು, ಹೆಚ್ಚಿನ ಎಥೆನಾಲ್ ಮಿಶ್ರಣದೊಂದಿಗೆ ಹೊಂದಿಕೆಯಾಗದ ಲಕ್ಷಾಂತರ ವಾಹನ ಮಾಲೀಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಅಲ್ಲದೆ, ಸಾರ್ವಜನಿಕ ಜಾಗೃತಿ ಮೂಡಿಸದೆ ಇಂತಹ ಯೋಜನೆ ಜಾರಿಗೊಳಿಸುವುದು ಗ್ರಾಹಕ ಸಂರಕ್ಷಣಾ ಕಾಯ್ದೆ, 2019ರ ಪ್ರಕಾರ ಮಾಹಿತಿಯುಕ್ತ ಆಯ್ಕೆಯನ್ನು ಹೊಂದುವ ಗ್ರಾಹಕರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಲಕ್ಷಾಂತರ ಭಾರತೀಯರಿಗೆ ತಮ್ಮ ವಾಹನಗಳಲ್ಲಿರುವ ಪೆಟ್ರೋಲ್ 100% ಪೆಟ್ರೋಲ್ ಅಲ್ಲ, ಬದಲಾಗಿ ಎಥೆನಾಲ್ ಮತ್ತು ಪೆಟ್ರೋಲ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ ಎಂದು ಅರ್ಜಿದಾರ ವಾದಿಸಿದ್ದಾರೆ. ಗ್ರಾಹಕರಿಗೆ ಯಾವುದೇ ವಾಸ್ತವಾಂಶವನ್ನು ಬಹಿರಂಗಪಡಿಸದ ಕಾರಣ ‘ತಿಳುವಳಿಕೆಯುಳ್ಳ ಗ್ರಾಹಕ’ ಆಯ್ಕೆಯ ಮೂಲ ಅಂಶವನ್ನು ಇದು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

E20 ಪೆಟ್ರೋಲ್ ಬಳಕೆಯು ಇಂಧನ ದಕ್ಷತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ವಿವಿಧ ವಾಹನ ಘಟಕಗಳ ಸವೆತಕ್ಕೆ ಕಾರಣವಾಗಬಹುದು. ಇದರಿಂದಾಗಿ ಗ್ರಾಹಕರ ಮೇಲೆ ಹೆಚ್ಚುವರಿ ವೆಚ್ಚಗಳು ಮತ್ತು ಸುರಕ್ಷತಾ ಕಾಳಜಿಗಳನ್ನು ಹೇರಿದಂತಾಗುತ್ತದೆ. E20ಗೆ ಅನುಗುಣವಾಗಿ ವಾಹನಗಳನ್ನು ವಿನ್ಯಾಸಗೊಳಿಸಲು ಮತ್ತು ಬಿಡುಗಡೆ ಮಾಡಲು ಆಟೋಮೊಬೈಲ್ ತಯಾರಕರಿಗೆ ಸಾಕಷ್ಟು ಅವಕಾಶವನ್ನು ನೀಡದೆ ನೀತಿಯನ್ನು ಜಾರಿಗೆ ತರುವ ಕೇಂದ್ರದ ಕ್ರಮವು ‘ಅಸಮಂಜಸ ಮತ್ತು ಅನಿಯಂತ್ರಿತ’ ಎಂದು ಅರ್ಜಿದಾರ ಹೇಳಿದ್ದಾರೆ.

ಏಪ್ರಿಲ್ 2023ರ ಮೊದಲು ಭಾರತದಲ್ಲಿ ತಯಾರಾದ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುವುದಿಲ್ಲ. ಅಲ್ಲದೆ, 2 ವರ್ಷ ಹಳೆಯದಾದ ಈ ವಾಹನಗಳು, BS-VI ಗೆ ಅನುಗುಣವಾಗಿದ್ದರೂ, ಶೇ. 20 ಎಥೆನಾಲ್‌ಗೆ ಹೊಂದಿಕೆಯಾಗುವುದಿಲ್ಲ, ಅವು E-10ಗೆ ಹೊಂದಿಕೆಯಾಗಬಹುದು ಎಂದಿದ್ದಾರೆ.

ಪೆಟ್ರೋಲ್‌ನಲ್ಲಿರುವ ಎಥೆನಾಲ್ ಅಂಶವು ಎಂಜಿನ್ ಭಾಗಗಳ ಸವೆತಕ್ಕೆ ಕಾರಣವಾಗುತ್ತದೆ. ಇದು ಇಂಧನ ದಕ್ಷತೆಯನ್ನು ಕಡಿಮೆ ಮಾಡುತ್ತದೆ. ವಾಹನಗಳ ಅಕಾಲಿಕ ಹಾನಿಗೊಳಗಾಗಲು ಕಾರಣವಾಗುತ್ತದೆ. ಇಂಧನ ಮಾರ್ಗಗಳು, ಪ್ಲಾಸ್ಟಿಕ್/ರಬ್ಬರ್ ಘಟಕಗಳು ಇತ್ಯಾದಿಗಳಿಗೆ ಹಾನಿ ಮಾಡುತ್ತದೆ. ವಾಹನದ ಕಡಿಮೆ ದಕ್ಷತೆಯಿಂದಾಗಿ ಪೆಟ್ರೋಲ್ ಬಳಕೆ ಹೆಚ್ಚಾಗಿರುತ್ತದೆ. ಎಂಜಿನ್‌ಗಳು ಹಾನಿಗೊಳಗಾಗುತ್ತವೆ. ಮೈಲೇಜ್ ಕಡಿಮೆಯಾಗುತ್ತದೆ. ಮಾಲಿನ್ಯವನ್ನು ಹೆಚ್ಚಿಸುತ್ತದೆ. ಕಾರುಗಳ ದುರಸ್ತಿ ಬಿಲ್‌ಗಳು ಹೆಚ್ಚಾಗುತ್ತವೆ ಮತ್ತು ವಿಮಾ ಹಕ್ಕುಗಳನ್ನು ನಿರಾಕರಿಸಲಾಗುತ್ತದೆ ಎಮದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ಮಾರುಕಟ್ಟೆಯಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0) ಲಭ್ಯವಾಗುವಂತೆ ನೋಡಿಕೊಳ್ಳಲು ಮತ್ತು ಮಾರಾಟವಾಗುತ್ತಿರುವ ಪೆಟ್ರೋಲ್ E20 ಎಂದು ಸ್ಪಷ್ಟವಾಗಿ ಸೂಚಿಸುವ ಲೇಬಲ್‌ಗಳನ್ನು ಇಂಧನ ಪಂಪ್‌ಗಳಲ್ಲಿ ಅಳವಡಿಸಲು ನಿರ್ದೇಶನಗಳನ್ನು ನೀಡುವಂತೆ ಪಿಐಎಲ್‌ ಕೋರಿದೆ.

ಪೆಟ್ರೋಲ್‌ಗೆ ಶೇ. 20 ಎಥೆನಾಲ್ ಬೆರೆಸುತ್ತಿದ್ದರೂ, ಪೆಟ್ರೋಲ್ ಬೆಲೆ ಕಡಿಮೆಯಾಗಿಲ್ಲ ಎಂದು ಅರ್ಜಿದಾರರು ಗಮನಸೆಳೆದಿದ್ದಾರೆ. ಪೆಟ್ರೋಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಕಂಪನಿಗಳು ಗಳಿಸುವ ಲಾಭವನ್ನು ಅಂತಿಮವಾಗಿ ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ, ಅವರು ಅದೇ ಮೊತ್ತವನ್ನು ಪಾವತಿಸುತ್ತಲೇ ಇರುತ್ತಾರೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಪೆಟ್ರೋಲ್‌ನೊಂದಿಗೆ ಎಥೆನಾಲ್ ಬೆರೆಸುವ ಯೋಜನೆಯು ಜಾಗತಿಕ ಪದ್ಧತಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಪಿಐಎಲ್ ಎತ್ತಿ ತೋರಿಸಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟದಲ್ಲಿ, ಎಥೆನಾಲ್ ಮುಕ್ತ ಪೆಟ್ರೋಲ್ ಇನ್ನೂ ಲಭ್ಯವಿದೆ. ಮಿಶ್ರಿತ ಇಂಧನವನ್ನು ಪೆಟ್ರೋಲ್ ಬಂಕ್‌ಗಳಲ್ಲಿ ಸ್ಪಷ್ಟ ಲೇಬಲ್‌ಗಳೊಂದಿಗೆ ನೀಡಲಾಗುತ್ತಿದೆ. ಆದ್ದರಿಂದ ಗ್ರಾಹಕರು ಮಾಹಿತಿಯುಕ್ತ ಆಯ್ಕೆ ಮಾಡಬಹುದು. ಆದರೆ, ಭಾರತದಲ್ಲಿ, ವಾಹನ ಚಾಲಕರ ಕಣ್ಣಿಗೆ ಮಣ್ಣೆಚರಲಾಗುತ್ತುದೆ. ಪೆಟ್ರೋಲ್ ಪಂಪ್‌ಗಳು ತಮ್ಮ ವಾಹನಗಳಿಗೆ ಏನು ತುಂಬಿಸುತ್ತಿವೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡದೆ ಎಥೆನಾಲ್-ಮಿಶ್ರಿತ ಇಂಧನವನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ಅರ್ಜಿದಾರ ಹೇಳಿದ್ದಾರೆ.

ಎಲ್ಲಾ ಇಂಧನ ಕೇಂದ್ರಗಳಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0)ಆಯ್ಕೆಯನ್ನೂ ನೀಡಬೇಕು. ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸ್ಪಷ್ಟ ಲೇಬಲ್ ಹಾಕಿ ಗ್ರಾಹಕರಿಗೆ ಮಾಹಿತಿ ನೀಡಬೇಕು. ಇಂಧನ ತುಂಬಿಸುವ ಸಮಯದಲ್ಲಿ ಗ್ರಾಹಕರಿಗೆ ಅವರ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುತ್ತವೆಯೇ ಎಂದು ತಿಳಿಸಬೇಕು. ಗ್ರಾಹಕ ವ್ಯವಹಾರಗಳ ಸಚಿವಾಲಯವು ಎಥೆನಾಲ್ ಮಿಶ್ರಿತ ಇಂಧನಗಳಿಗೆ ಗ್ರಾಹಕ ರಕ್ಷಣಾ ನಿಯಮಗಳನ್ನು ಜಾರಿಗೊಳಿಸಬೇಕು ಮತ್ತು ಸರಿಯಾದ ಸಲಹೆಗಳನ್ನು ನೀಡಬೇಕು. ಇಂಧನ ದಕ್ಷತೆ ಮತ್ತು ಹೊಂದಾಣಿಕೆಯಾಗದ ವಾಹನಗಳಲ್ಲಿ ಸವೆತಗಳ ಮೇಲೆ ಶೇ. 20 ಎಥೆನಾಲ್-ಮಿಶ್ರಿತ ಪೆಟ್ರೋಲ್ (E20) ಪ್ರಭಾವದ ಕುರಿತು ರಾಷ್ಟ್ರವ್ಯಾಪಿ ಅಧ್ಯಯನ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...