Homeಮುಖಪುಟಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಶೇಕಡ 20 ಎಥೆನಾಲ್ (E20) ಬೆರೆಸಿದ ಪೆಟ್ರೋಲ್ ಮಾರಾಟವನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಅಕ್ಷಯ್ ಮಲ್ಹೋತ್ರಾ ಎಂಬ ವಕೀಲ ಅರ್ಜಿ ಸಲ್ಲಿಸಿದ್ದು, ಗ್ರಾಹಕರಿಗೆ ಎಥೆನಾಲ್ ಮುಕ್ತ ಪೆಟ್ರೋಲ್ (E0) ಆಯ್ಕೆಯನ್ನು ಒದಗಿಸದೆ E20 ಪೆಟ್ರೋಲ್ ಅನ್ನು ಮಾತ್ರ ಲಭ್ಯವಾಗುವಂತೆ ಮಾಡುವುದು, ಹೆಚ್ಚಿನ ಎಥೆನಾಲ್ ಮಿಶ್ರಣದೊಂದಿಗೆ ಹೊಂದಿಕೆಯಾಗದ ಲಕ್ಷಾಂತರ ವಾಹನ ಮಾಲೀಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಅಲ್ಲದೆ, ಸಾರ್ವಜನಿಕ ಜಾಗೃತಿ ಮೂಡಿಸದೆ ಇಂತಹ ಯೋಜನೆ ಜಾರಿಗೊಳಿಸುವುದು ಗ್ರಾಹಕ ಸಂರಕ್ಷಣಾ ಕಾಯ್ದೆ, 2019ರ ಪ್ರಕಾರ ಮಾಹಿತಿಯುಕ್ತ ಆಯ್ಕೆಯನ್ನು ಹೊಂದುವ ಗ್ರಾಹಕರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಲಕ್ಷಾಂತರ ಭಾರತೀಯರಿಗೆ ತಮ್ಮ ವಾಹನಗಳಲ್ಲಿರುವ ಪೆಟ್ರೋಲ್ 100% ಪೆಟ್ರೋಲ್ ಅಲ್ಲ, ಬದಲಾಗಿ ಎಥೆನಾಲ್ ಮತ್ತು ಪೆಟ್ರೋಲ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ ಎಂದು ಅರ್ಜಿದಾರ ವಾದಿಸಿದ್ದಾರೆ. ಗ್ರಾಹಕರಿಗೆ ಯಾವುದೇ ವಾಸ್ತವಾಂಶವನ್ನು ಬಹಿರಂಗಪಡಿಸದ ಕಾರಣ ‘ತಿಳುವಳಿಕೆಯುಳ್ಳ ಗ್ರಾಹಕ’ ಆಯ್ಕೆಯ ಮೂಲ ಅಂಶವನ್ನು ಇದು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

E20 ಪೆಟ್ರೋಲ್ ಬಳಕೆಯು ಇಂಧನ ದಕ್ಷತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ವಿವಿಧ ವಾಹನ ಘಟಕಗಳ ಸವೆತಕ್ಕೆ ಕಾರಣವಾಗಬಹುದು. ಇದರಿಂದಾಗಿ ಗ್ರಾಹಕರ ಮೇಲೆ ಹೆಚ್ಚುವರಿ ವೆಚ್ಚಗಳು ಮತ್ತು ಸುರಕ್ಷತಾ ಕಾಳಜಿಗಳನ್ನು ಹೇರಿದಂತಾಗುತ್ತದೆ. E20ಗೆ ಅನುಗುಣವಾಗಿ ವಾಹನಗಳನ್ನು ವಿನ್ಯಾಸಗೊಳಿಸಲು ಮತ್ತು ಬಿಡುಗಡೆ ಮಾಡಲು ಆಟೋಮೊಬೈಲ್ ತಯಾರಕರಿಗೆ ಸಾಕಷ್ಟು ಅವಕಾಶವನ್ನು ನೀಡದೆ ನೀತಿಯನ್ನು ಜಾರಿಗೆ ತರುವ ಕೇಂದ್ರದ ಕ್ರಮವು ‘ಅಸಮಂಜಸ ಮತ್ತು ಅನಿಯಂತ್ರಿತ’ ಎಂದು ಅರ್ಜಿದಾರ ಹೇಳಿದ್ದಾರೆ.

ಏಪ್ರಿಲ್ 2023ರ ಮೊದಲು ಭಾರತದಲ್ಲಿ ತಯಾರಾದ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುವುದಿಲ್ಲ. ಅಲ್ಲದೆ, 2 ವರ್ಷ ಹಳೆಯದಾದ ಈ ವಾಹನಗಳು, BS-VI ಗೆ ಅನುಗುಣವಾಗಿದ್ದರೂ, ಶೇ. 20 ಎಥೆನಾಲ್‌ಗೆ ಹೊಂದಿಕೆಯಾಗುವುದಿಲ್ಲ, ಅವು E-10ಗೆ ಹೊಂದಿಕೆಯಾಗಬಹುದು ಎಂದಿದ್ದಾರೆ.

ಪೆಟ್ರೋಲ್‌ನಲ್ಲಿರುವ ಎಥೆನಾಲ್ ಅಂಶವು ಎಂಜಿನ್ ಭಾಗಗಳ ಸವೆತಕ್ಕೆ ಕಾರಣವಾಗುತ್ತದೆ. ಇದು ಇಂಧನ ದಕ್ಷತೆಯನ್ನು ಕಡಿಮೆ ಮಾಡುತ್ತದೆ. ವಾಹನಗಳ ಅಕಾಲಿಕ ಹಾನಿಗೊಳಗಾಗಲು ಕಾರಣವಾಗುತ್ತದೆ. ಇಂಧನ ಮಾರ್ಗಗಳು, ಪ್ಲಾಸ್ಟಿಕ್/ರಬ್ಬರ್ ಘಟಕಗಳು ಇತ್ಯಾದಿಗಳಿಗೆ ಹಾನಿ ಮಾಡುತ್ತದೆ. ವಾಹನದ ಕಡಿಮೆ ದಕ್ಷತೆಯಿಂದಾಗಿ ಪೆಟ್ರೋಲ್ ಬಳಕೆ ಹೆಚ್ಚಾಗಿರುತ್ತದೆ. ಎಂಜಿನ್‌ಗಳು ಹಾನಿಗೊಳಗಾಗುತ್ತವೆ. ಮೈಲೇಜ್ ಕಡಿಮೆಯಾಗುತ್ತದೆ. ಮಾಲಿನ್ಯವನ್ನು ಹೆಚ್ಚಿಸುತ್ತದೆ. ಕಾರುಗಳ ದುರಸ್ತಿ ಬಿಲ್‌ಗಳು ಹೆಚ್ಚಾಗುತ್ತವೆ ಮತ್ತು ವಿಮಾ ಹಕ್ಕುಗಳನ್ನು ನಿರಾಕರಿಸಲಾಗುತ್ತದೆ ಎಮದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ಮಾರುಕಟ್ಟೆಯಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0) ಲಭ್ಯವಾಗುವಂತೆ ನೋಡಿಕೊಳ್ಳಲು ಮತ್ತು ಮಾರಾಟವಾಗುತ್ತಿರುವ ಪೆಟ್ರೋಲ್ E20 ಎಂದು ಸ್ಪಷ್ಟವಾಗಿ ಸೂಚಿಸುವ ಲೇಬಲ್‌ಗಳನ್ನು ಇಂಧನ ಪಂಪ್‌ಗಳಲ್ಲಿ ಅಳವಡಿಸಲು ನಿರ್ದೇಶನಗಳನ್ನು ನೀಡುವಂತೆ ಪಿಐಎಲ್‌ ಕೋರಿದೆ.

ಪೆಟ್ರೋಲ್‌ಗೆ ಶೇ. 20 ಎಥೆನಾಲ್ ಬೆರೆಸುತ್ತಿದ್ದರೂ, ಪೆಟ್ರೋಲ್ ಬೆಲೆ ಕಡಿಮೆಯಾಗಿಲ್ಲ ಎಂದು ಅರ್ಜಿದಾರರು ಗಮನಸೆಳೆದಿದ್ದಾರೆ. ಪೆಟ್ರೋಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಕಂಪನಿಗಳು ಗಳಿಸುವ ಲಾಭವನ್ನು ಅಂತಿಮವಾಗಿ ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ, ಅವರು ಅದೇ ಮೊತ್ತವನ್ನು ಪಾವತಿಸುತ್ತಲೇ ಇರುತ್ತಾರೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಪೆಟ್ರೋಲ್‌ನೊಂದಿಗೆ ಎಥೆನಾಲ್ ಬೆರೆಸುವ ಯೋಜನೆಯು ಜಾಗತಿಕ ಪದ್ಧತಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಪಿಐಎಲ್ ಎತ್ತಿ ತೋರಿಸಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟದಲ್ಲಿ, ಎಥೆನಾಲ್ ಮುಕ್ತ ಪೆಟ್ರೋಲ್ ಇನ್ನೂ ಲಭ್ಯವಿದೆ. ಮಿಶ್ರಿತ ಇಂಧನವನ್ನು ಪೆಟ್ರೋಲ್ ಬಂಕ್‌ಗಳಲ್ಲಿ ಸ್ಪಷ್ಟ ಲೇಬಲ್‌ಗಳೊಂದಿಗೆ ನೀಡಲಾಗುತ್ತಿದೆ. ಆದ್ದರಿಂದ ಗ್ರಾಹಕರು ಮಾಹಿತಿಯುಕ್ತ ಆಯ್ಕೆ ಮಾಡಬಹುದು. ಆದರೆ, ಭಾರತದಲ್ಲಿ, ವಾಹನ ಚಾಲಕರ ಕಣ್ಣಿಗೆ ಮಣ್ಣೆಚರಲಾಗುತ್ತುದೆ. ಪೆಟ್ರೋಲ್ ಪಂಪ್‌ಗಳು ತಮ್ಮ ವಾಹನಗಳಿಗೆ ಏನು ತುಂಬಿಸುತ್ತಿವೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡದೆ ಎಥೆನಾಲ್-ಮಿಶ್ರಿತ ಇಂಧನವನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ಅರ್ಜಿದಾರ ಹೇಳಿದ್ದಾರೆ.

ಎಲ್ಲಾ ಇಂಧನ ಕೇಂದ್ರಗಳಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0)ಆಯ್ಕೆಯನ್ನೂ ನೀಡಬೇಕು. ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸ್ಪಷ್ಟ ಲೇಬಲ್ ಹಾಕಿ ಗ್ರಾಹಕರಿಗೆ ಮಾಹಿತಿ ನೀಡಬೇಕು. ಇಂಧನ ತುಂಬಿಸುವ ಸಮಯದಲ್ಲಿ ಗ್ರಾಹಕರಿಗೆ ಅವರ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುತ್ತವೆಯೇ ಎಂದು ತಿಳಿಸಬೇಕು. ಗ್ರಾಹಕ ವ್ಯವಹಾರಗಳ ಸಚಿವಾಲಯವು ಎಥೆನಾಲ್ ಮಿಶ್ರಿತ ಇಂಧನಗಳಿಗೆ ಗ್ರಾಹಕ ರಕ್ಷಣಾ ನಿಯಮಗಳನ್ನು ಜಾರಿಗೊಳಿಸಬೇಕು ಮತ್ತು ಸರಿಯಾದ ಸಲಹೆಗಳನ್ನು ನೀಡಬೇಕು. ಇಂಧನ ದಕ್ಷತೆ ಮತ್ತು ಹೊಂದಾಣಿಕೆಯಾಗದ ವಾಹನಗಳಲ್ಲಿ ಸವೆತಗಳ ಮೇಲೆ ಶೇ. 20 ಎಥೆನಾಲ್-ಮಿಶ್ರಿತ ಪೆಟ್ರೋಲ್ (E20) ಪ್ರಭಾವದ ಕುರಿತು ರಾಷ್ಟ್ರವ್ಯಾಪಿ ಅಧ್ಯಯನ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...