Homeಮುಖಪುಟಧಾರ್ಮಿಕ ಸ್ಥಳ ಸಮೀಕ್ಷೆ : ಅರ್ಜಿ ಪರಿಗಣಿಸದಂತೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ

ಧಾರ್ಮಿಕ ಸ್ಥಳ ಸಮೀಕ್ಷೆ : ಅರ್ಜಿ ಪರಿಗಣಿಸದಂತೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ

- Advertisement -
- Advertisement -

ಧಾರ್ಮಿಕ ಸ್ಥಳಗಳಲ್ಲಿ ಸಮೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಗಣಿಸದಂತೆ ಮತ್ತು ಈಗಾಗಲೇ ನಡೆಯುತ್ತಿರುವ ಸಮೀಕ್ಷೆಗಳನ್ನು ನಿಲ್ಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಒಂದು ಧರ್ಮದ ಧಾರ್ಮಿಕ ಸ್ಥಳ ತಮಗೆ ಸೇರಿದ್ದು ಎಂದು ಇನ್ನೊಂದು ಧರ್ಮದ ಅನುಯಾಯಿಗಳು ಅರ್ಜಿ ಹಾಕಿದಾಗ ಸಮೀಕ್ಷೆಗೆ ಆದೇಶಿಸದೆ 1991ರ ಆರಾಧನಾ ಸ್ಥಳಗಳ ಕಾಯ್ದೆ ಪಾಲಿಸುವಂತೆ ಕೆಳ ನ್ಯಾಯಾಲಯಗಳಿಗೆ ನಿರ್ದೇಶನ ನೀಡಬೇಕು. ಸಮೀಕ್ಷೆ ನಡೆಸುವಂತೆ ನ್ಯಾಯಾಲಯಗಳು ನೀಡಿರುವ ಆದೇಶಗಳನ್ನು ಕಾರ್ಯಗತಗೊಳಿಸದಂತೆ ಸರ್ಕಾರಗಳಿಗೆ ಸೂಚಿಸಬೇಕು ಎಂದು ಅಲೋಕ್ ಶರ್ಮಾ ಮತ್ತು ಪ್ರಿಯಾ ಮಿಶ್ರಾ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿದೆ.

ಹೈಕೋರ್ಟ್, ವಿಚಾರಣಾ ನ್ಯಾಯಾಲಯ ಸೇರಿದಂತೆ ಕೆಳ ನ್ಯಾಯಾಲಯಗಳು 1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಅನುಸರಿಸುವಂತೆ ಮತ್ತು ಸಮೀಕ್ಷೆ ಆದೇಶಿಸದಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಶಾಂತಿ, ಸೌಹಾರ್ದತೆಯನ್ನು ಕಾಪಾಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಬೇಕು. ಸಿವಿಲ್ ನ್ಯಾಯಾಲಯಗಳು ಸಮೀಕ್ಷೆಗೆ ಆದೇಶಿಸಿದ ತಕ್ಷಣ ತರಾತುರಿ ಮಾಡದೆ, ಪ್ರಕರಣ ಸಂಬಂಧ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ಗೆ ಹೋಗಲು ಸಮಯ ನೀಡುವಂತೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಜ್ಮೀರ್ ದರ್ಗಾ ಷರೀಫ್, ಭೋಜಶಾಲಾ, ಸಂಭಾಲ್ ಜಾಮಾ ಮಸೀದಿ, ಮಥುರಾ ಶ್ರೀಕೃಷ್ಣ ಜನ್ಮಭೂಮಿ-ಶಾಹೀ ಈದ್ಗಾ ಮಸೀದಿ ಮತ್ತು ಜ್ಞಾನವಾಪಿಗೆ ಸಂಬಂಧಿಸಿದ ಪ್ರಕರಣಗಳು ದೇಶದ ಕೋಮು ವಾತಾವರಣವನ್ನು ಹಾಳು ಮಾಡುತ್ತಿದ್ದು, ಈ ಎಲ್ಲಾ ಪ್ರಕರಣಗಳಿಗೆ ಕಡಿವಾಣ ಹಾಕಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯ್ದೆ, ದೇಶಕ್ಕೆ ಸ್ವಾಂತತ್ರ್ಯ ಬರುವಾಗ ಇದ್ದ ಹಾಗೆಯೇ ಧಾರ್ಮಿಕ ಸ್ಥಳ, ನಿರ್ಮಾಣಗಳು ಮುಂದುವರಿಸಬೇಕು. ಅದರ ಸ್ವರೂಪದಲ್ಲಿ ಬದಲಾವಣೆ ಮಾಡಬಾರದು ಎಂದು ಹೇಳುತ್ತದೆ. ಹೀಗಿರುವಾಗ, ಧಾರ್ಮಿಕ ಸ್ಥಳಗಳ ಹಕ್ಕು ಪ್ರತಿಪಾದಿಸಿ ಅರ್ಜಿ ಸಲ್ಲಿಸುವುದು. ಅದನ್ನು ಪರಿಗಣಿಸಿ ನ್ಯಾಯಾಲಯಗಳು ಸಮೀಕ್ಷೆಗೆ ಆದೇಶಿಸುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...