Homeಅಂತರಾಷ್ಟ್ರೀಯಯೆಮೆನ್‌ನಲ್ಲಿ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಯೆಮೆನ್‌ನಲ್ಲಿ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಜುಲೈ 16ರಂದು ಯೆಮೆನ್‌ನಲ್ಲಿ ಮರಣದಂಡನೆ ಜಾರಿಯಾಗಲಿದೆ. ಅದನ್ನು ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಪೀಠದ ಮುಂದೆ ಹಿರಿಯ ವಕೀಲ ರಾಗೇಂತ್ ಬಸಂತ್ ಈ ವಿಷಯವನ್ನು ಪ್ರಸ್ತಾಪಿಸಿ, ತುರ್ತು ವಿಚಾರಣೆಗೆ ಕೋರಿದ್ದಾರೆ. ಯೆಮನ್‌ನ ಶರಿಯತ್ ಕಾನೂನಿನ ಪ್ರಕಾರ ಮೃತರ ಸಂಬಂಧಿಕರು ಬ್ಲಡ್ ಮನಿ ಸ್ವೀಕರಿಸಿ ಕ್ಷಮೆ ನೀಡಲು ಒಪ್ಪಿಕೊಂಡರೆ ಅಪರಾಧಿ ಶಿಕ್ಷೆಯಿಂದ ಪಾರಾಗುತ್ತಾರೆ. ಹಾಗಾಗಿ, ಆ ಆಯ್ಕೆಯನ್ನು ಅನ್ವೇಷಿಸಲು ಮಾತುಕತೆ ನಡೆಸಬಹುದು ಎಂದು ವಾದಿಸಿದ್ದಾರೆ. ಬಸಂತ್ ಅವರಿಗೆ ವಕೀಲ ಕೆ ಸುಭಾಷ್ ಚಂದ್ರನ್ ಸಹಕಾರ ನೀಡಿದ್ದಾರೆ.

‘ಸೇವ್ ನಿಮಿಷಾ ಪ್ರಿಯಾ ಆಕ್ಷನ್ ಕೌನ್ಸಿಲ್’ ಎಂಬ ಹೆಸರಿನ ಸಮಿತಿಯ ಪರವಾಗಿ ಸಲ್ಲಿಕೆಯಾದ ಅರ್ಜಿಯಲ್ಲಿ, ರಾಜತಾಂತ್ರಿಕ ಮಾರ್ಗಗಳ ಮೂಲಕ ನಿಮಿಷಾ ಪ್ರಿಯಾ ಅವರನ್ನು ಮರಣದಂಡನೆಯಿಂದ ಪಾರು ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಲಾಗಿದೆ.

ನಿಮಿಷಾ ಅವರಿಗೆ ಏಕೆ ಮರಣದಂಡನೆ ವಿಧಿಸಲಾಗಿದೆ? ಎಂಬ ನ್ಯಾಯಮೂರ್ತಿ ಧುಲಿಯಾ ಅವರ ಪ್ರಶ್ನೆಗೆ ಉತ್ತರಿಸಿದ ವಕೀಲ ಬಸಂತ್, “ಕೇರಳದ ನರ್ಸ್ ನಿಮಿಷಾ ಅವರು ಕೆಲಸಕ್ಕಾಗಿ ಯೆಮನ್‌ಗೆ ಹೋಗಿದ್ದರು. ಅಲ್ಲಿ ಸ್ಥಳೀಯ ವ್ಯಕ್ತಿಯೊಬ್ಬ ಅವರಿಗೆ ಕಿರುಕುಳ ಕೊಡುತ್ತಿದ್ದ. ಈ ಕಾರಣಕ್ಕೆ ಆತನನ್ನು ಕೊಲೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಈ ವೇಳೆ, ಜುಲೈ 14ರಂದು ಅರ್ಜಿ ವಿಚಾರಣೆ ಮಾಡುವುದಾಗಿ ಪೀಠ ಹೇಳಿದೆ. ತಕ್ಷಣ ಮಧ್ಯಪ್ರವೇಶಿಸಿದ ವಕೀಲ ಬಸಂತ್, “ಜುಲೈ 16ರಕ್ಕೆ ಮರಣದಂಡನೆ ನಿಗದಿಯಾಗಿರುವ ಕಾರಣ, ಎರಡು ದಿನ ಮುಂಚೆ ವಿಚಾರಣೆ ಕೈಗೆತ್ತಿಕೊಂಡರೆ ಪರಿಣಾಮ ಬೀರದಿರಬಹುದು. ರಾಜತಾಂತ್ರಿಕ ಮಾತುಕತೆಗೆ ಸಮಯ ಬೇಕಿದೆ. ಹಾಗಾಗಿ, ಇಂದು ಅಥವಾ ನಾಳೆ ವಿಚಾರಣೆ ನಡೆಸುವಂತೆ ಕೋರಿದ್ದಾರೆ.

2017ರ ಜುಲೈನಲ್ಲಿ ಯೆಮನ್‌ ಪ್ರಜೆ ತಲಾಲ್ ಅಬ್ದೋ ಮಹದಿ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ನಿಮಿಷಾ ಪ್ರಿಯಾ ಮರಣದಂಡನೆಗೆ ಗುರಿಯಾಗಿದ್ದಾರೆ. ಮೃತ ಅಬ್ದೋ ಮಹದಿ ನಿಮಿಷಾ ಅವರ ಪಾಸ್‌ಪೋರ್ಟ್ ತನ್ನ ಬಳಿ ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ನಿಮಿಷಾ ಅವರು, ಆತನಿಗೆ ನಿದ್ರೆ ಬರುವ ಚುಚ್ಚುಮದ್ದನ್ನು ಚುಚ್ಚಿ ಪಾಸ್‌ಪೋರ್ಟ್ ತೆಗೆದುಕೊಳ್ಳುವ ಪ್ಲಾನ್ ಮಾಡಿದ್ದರು. ಆದರೆ ಚುಚ್ಚುಮದ್ದು ಚುಚ್ಚಿದ ಬಳಿಕ ಅಬ್ದೋ ಮೃತಪಟ್ಟಿದ್ದ.

ಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...