Homeಮುಖಪುಟಕಂಗನಾ ಟ್ವಿಟರ್ ಖಾತೆ ಅಮಾನತುಗೊಳಿಸಿ ಅರ್ಜಿ: ಮಾರ್ಚ್ 9 ರಂದು ವಿಚಾರಣೆ

ಕಂಗನಾ ಟ್ವಿಟರ್ ಖಾತೆ ಅಮಾನತುಗೊಳಿಸಿ ಅರ್ಜಿ: ಮಾರ್ಚ್ 9 ರಂದು ವಿಚಾರಣೆ

ದ್ವೇಷ ಹರಡಿದ ಆರೋಪದ ಮೇಲೆ ಕಂಗನಾ ಸಹೋದರಿ ರಂಗೋಲಿ ಚಾಂಡೆಲ್‌ರ ಟ್ವಿಟರ್ ಖಾತೆಯನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.

- Advertisement -
- Advertisement -

ಪ್ರತಿಭಟನಾ ನಿರತ ರೈತರನ್ನು ಭಯೋತ್ಪಾದಕರು ಎಂದು ಟ್ವೀಟ್ ಮಾಡಿರುವ ನಟಿ ಕಂಗನಾ ರಾಣಾವತ್‌ರವರ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಬೇಕೆಂದು ಸಲ್ಲಿಸಲಾಗಿರುವ ಅರ್ಜಿಯನ್ನು ಮಾರ್ಚ್ 09 ರಂದು ವಿಚಾರಣೆ ನಡೆಸುವುದಾಗಿ ಬಾಂಬೆ ಹೈಕೋರ್ಟ್ ಹೇಳಿದೆ.

ವಕೀಲರೊಬ್ಬರು ಸಲ್ಲಿಸಿರುವ ಅರ್ಜಿಯಲ್ಲಿ “ರೈತರು ಭಯೋತ್ಪಾದಕರು, ಭಾರತವನ್ನು ವಿಭಜಿಸುತ್ತಿದ್ದಾರೆ, ಚೀನಾದಿಂದ ಪ್ರೇರಿತರಾಗಿದ್ದಾರೆ ಎಂದು ನಟಿ ಎಗ್ಗಿಲ್ಲದೆ ಟ್ವೀಟ್ ಮಾಡಿದ್ದಾರೆ. ಈ ಕುರಿತು 2020ರ ಡಿಸೆಂಬರ್‌ನಲ್ಲಿಯೇ ದೂರು ದಾಖಲಿಸಲಾಗಿದೆ. ಆದರೂ ಅವರು ತಮ್ಮ ರೈತರನ್ನು ಹಣಿಯುವ ಪ್ರವೃತ್ತಿಯನ್ನು ನಿಲ್ಲಿಸಿಲ್ಲ. ಹಾಗಾಗಿ  ಕೂಡಲೇ ಅವರ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ವಕೀಲರಾದ ಅಲಿ ಕಾಶಿಫ್ ದೇಶ್ಮುಖ್‌ರವರು ಸಲ್ಲಿಸರುವ ಅರ್ಜಿಯನ್ನು ಜಸ್ಟಿಸ್ ಎಸ್ಎಸ್‌ ಶಿಂಧೆ ಮತ್ತು ಮನಿಶ್ ಪಿತಾಲೆ ಅವರ ಪೀಠವು ಆಲಿಸುತ್ತಿದ್ದು, ಮುಂದಿನ ವಾದಕ್ಕಾಗಿ ಮಾರ್ಚ್ 09ಕ್ಕೆ ಮುಂದೂಡಿದೆ.

ಕೋರ್ಟ್ ವಿಚಾರಣೆಗೆ ಅನುಮತಿ ನೀಡಿದೆ. ಆದರೆ ನನ್ನ ಅರ್ಜಿಯನ್ನು ರಿಟ್ ಆಗಿ ಪರಿಗಣಿಸಿದೆಯೇ ಅಥವಾ ಪಿಐಎಲ್ ಆಗಿ ಪರಿಗಣಿಸಿದೆಯೇ ಗೊತ್ತಿಲ್ಲ ಎಂದು ಅಲಿ ಕಾಶಿಫ್ ದೇಶ್ಮುಖ್ ತಿಳಿಸಿದ್ದಾರೆ. ಕಂಗನಾ ರಾಣಾವತ್ ನನಗೆ ಮಾತ್ರವಲ್ಲದೆ ಇಡೀ ನನ್ನ ಸಮುದಾಯಕ್ಕೆ ಅವಮಾನವಾಗುವಂತೆ ಸಂದೇಶ ಕಳಿಸಿದ್ದಾರೆ ಮತ್ತು ಬೆದರಿಕೆ ಹಾಕಿದ್ದಾರೆ ಎಂದು ಅವರು ದೂರಿದ್ದಾರೆ.

ಕಂಗನಾ ಸಹೋದರಿ ರಂಗೋಲಿ ಚಾಂಡೆಲ್ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುವ ಮತ್ತು ಸಾಮರಸ್ಯ ಕದಡುವ ಸಂದೇಶಗಳನ್ನು ಕಳಿಸಿದ್ದರು. ಹಾಗಾಗಿ ಅವರ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಅದೇ ಮಾದರಿಯಲ್ಲಿ ಕಂಗನಾ ಖಾತೆಯನ್ನು ಸಹ ಅಮಾನತು ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ವಿರುದ್ಧ ನಡೆಯುತ್ತಿರುವ ತನಿಖೆಯ ವರದಿ ಸಲ್ಲಿಸುವಂತೆ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.


ಇದನ್ನೂ ಓದಿ; ಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...