Homeಮುಖಪುಟವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಅರ್ಜಿ: ಕೇಂದ್ರದಿಂದ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಕೆ

ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಅರ್ಜಿ: ಕೇಂದ್ರದಿಂದ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಕೆ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಕಾಯ್ದೆ,2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಏಪ್ರಿಲ್ 15 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರ ಮಂಗಳವಾರ (ಏ.8) ಕೇವಿಯಟ್ ಸಲ್ಲಿಸಿದ್ದು, ವಕ್ಫ್‌ ಅರ್ಜಿಗಳ ಸಂಬಂಧ ಯಾವುದೇ ಆದೇಶ ಹೊರಡಿಸುವ ಮುನ್ನ ತನ್ನ ವಾದವನ್ನು ಆಲಿಸುವಂತೆ ಕೋರಿದೆ.

ತಮ್ಮ ವಾದವನ್ನು ಆಲಿಸದೆ ಆದೇಶ ನೀಡದಂತೆ ಕೋರಿ ಹೈಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ಯಾವುದೇ ಪಕ್ಷಕಾರರು ಸಲ್ಲಿಸುವ ಅರ್ಜಿಯನ್ನು ಕೇವಿಯೆಟ್ ಎನ್ನಲಾಗುತ್ತದೆ.

ಈ ಮಧ್ಯೆ, ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಮಂಗಳವಾರದಿಂದ ಜಾರಿಗೆ ಬರಲಿದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ.

ವಕ್ಫ್‌ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಜಮಿಯತ್ ಉಲಮಾ-ಇ-ಹಿಂದ್, ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ, ಸಂಸದರಾದ ಅಸಾದುದ್ದೀನ್ ಓವೈಸಿ, ಮೊಹಮ್ಮದ್ ಜಾವೆದ್, ಅಮಾನುಲ್ಲಾ ಖಾನ್ ಸೇರಿದಂತೆ 10ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿವೆ.

ಈ ಅರ್ಜಿಗಳಿಗೆ ಸಂಬಂಧಿತ ಬೆಳವಣಿಗೆಗಳ ಬಗ್ಗೆ ಮಾಹಿತಿಯಿರುವ ವಕೀಲರು, ಏಪ್ರಿಲ್ 15ರಂದು ಅರ್ಜಿಗಳು ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ, ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅರ್ಜಿಗಳ ವಿಚಾರಣೆ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ.

ವಕ್ಫ್‌ ಕಾಯ್ದೆ ಸಂಬಂಧಿತ ಅರ್ಜಿಗಳನ್ನು ತುರ್ತು ವಿಚಾರಣೆ ನಡೆಸುವಂತೆ ಜಮಿಯತ್ ಉಲಮಾ-ಇ-ಹಿಂದ್ ಪರ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು. ಆದರೆ, ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸರಿಯಾದ ಸಮಯಕ್ಕೆ ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಏಪ್ರಿಲ್ 7ರಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಭರವಸೆ ನೀಡಿದೆ.

ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರ ಪಡೆದ ವಕ್ಫ್‌ (ತಿದ್ದುಪಡಿ) ಮಸೂದೆಗೆ ಏಪ್ರಿಲ್ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದಾರೆ. ಹಾಗಾಗಿ, ಮಸೂದೆ ಈಗ ಕಾಯ್ದೆ ಆಗಿ ಮಾರ್ಪಟ್ಟಿದೆ.

ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...