Homeಮುಖಪುಟ'ದಯವಿಟ್ಟು ನ್ಯಾಯ ಕೊಡಿಸಿ, ನೀವೇ ನಮ್ಮ ಕೊನೆಯ ಭರವಸೆ..'; ಪ್ರಧಾನಿ ಮೋದಿಗೆ ಮನವಿ ಮಾಡಿದ ನೀಟ್...

‘ದಯವಿಟ್ಟು ನ್ಯಾಯ ಕೊಡಿಸಿ, ನೀವೇ ನಮ್ಮ ಕೊನೆಯ ಭರವಸೆ..’; ಪ್ರಧಾನಿ ಮೋದಿಗೆ ಮನವಿ ಮಾಡಿದ ನೀಟ್ ಆಕಾಂಕ್ಷಿಗಳು

- Advertisement -
- Advertisement -

ನೀಟ್-ಯುಜಿ ಪತ್ರಿಕೆ ಸೋರಿಕೆ ವಿವಾದ ದೆಶದಾದ್ಯಂತ ತೀವ್ರಗೊಳ್ಳುತ್ತಿದ್ದು, ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮತ್ತೆ ನಡೆಸುವಂತೆ ಒತ್ತಾಯಿಸಿ ನೀಟ್ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಜಂತರ್ ಮಂತರ್‌ನಲ್ಲಿ ಭಾನುವಾರ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಜಂತರ್ ಮಂತರ್‌ನಿಂದ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದವರೆಗೆ ಮೆರವಣಿಗೆ ನಡೆಸಿದರು. ಆದರೆ, ಪೊಲೀಸರು ಅವರನ್ನು ಮಾರ್ಗ ಮಧ್ಯದಲ್ಲೇ ತಡೆದರು.

ಪ್ರತಿಭಟನಾಕಾರರು ಪ್ರಧಾನಿ ಭೇಟಿಗೆ ಒತ್ತಾಯಿಸಿದ್ದು, ಪೊಲೀಸರು ಅನುಮತಿ ನಿರಾಕರಿಸಿದರು. ಮನವಿ ಪತ್ರ ಬರೆಯುವಂತೆ ಪ್ರತಿಭಟನಾಕಾರರನ್ನು ಕೇಳಿದರು. ನಂತರ ಪ್ರತಿಭಟನಾಕಾರರು ಪೊಲೀಸರಿಗೆ ಮನವಿ ಪತ್ರ ನೀಡಿ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು. ತಮ್ಮ ಜ್ಞಾಪಕ ಪತ್ರದಲ್ಲಿ, ವಿದ್ಯಾರ್ಥಿಗಳು ಸೋರಿಕೆಯನ್ನು ಬಿಹಾರ ಪೊಲೀಸರ ಇಒಯು ತನಿಖೆಯಿಂದ ಕಂಡುಕೊಳ್ಳಲಾಗಿದೆ, ಆದ್ದರಿಂದ ಕೌನ್ಸೆಲಿಂಗ್ ಅನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಿ ಹೇಳಿದರು. “ದಯವಿಟ್ಟು ನ್ಯಾಯ ಒದಗಿಸಿ, ನೀವು ನಮ್ಮ ಕೊನೆಯ ಭರವಸೆ” ಎಂದು ವಿದ್ಯಾರ್ಥಿಗಳು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

ವಿಶೇಷವೆಂದರೆ, ಮೇ 5 ರಂದು ಪರೀಕ್ಷೆ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ಜೂನ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಆದರೆ, ಅದರ ನಂತರ ಬಿಹಾರದಂತಹ ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ಇತರ ಅಕ್ರಮಗಳ ಆರೋಪಗಳು ಕೇಳಿಬಂದವು. ನಂತರ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಿಲ್ಲಿಸಿ ಮರು ಪರೀಕ್ಷೆ ನಡೆಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಪರೀಕ್ಷೆ ಸುಧಾರಣೆಗಾಗಿ ಸಮಿತಿ ರಚನೆ

ಭಾರೀ ಸಾರ್ವಜನಿಕ ಪ್ರತಿಭಟನೆಯ ನಂತರ, ಶಿಕ್ಷಣ ಸಚಿವಾಲಯವು ಪರೀಕ್ಷಾ ಪ್ರಕ್ರಿಯೆಯ ಕಾರ್ಯವಿಧಾನದಲ್ಲಿ ಸುಧಾರಣೆ, ಡೇಟಾ ಭದ್ರತಾ ಪ್ರೋಟೋಕಾಲ್‌ಗಳಲ್ಲಿ ಸುಧಾರಣೆ ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಕಾರ್ಯನಿರ್ವಹಣೆಯ ಕುರಿತು ಶಿಫಾರಸುಗಳನ್ನು ಮಾಡಲು ತಜ್ಞರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತು. ಇಸ್ರೋ ಮಾಜಿ ಅಧ್ಯಕ್ಷ ಡಾ ಕೆ ರಾಧಾಕೃಷ್ಣನ್ ನೇತೃತ್ವದ 7 ಸದಸ್ಯರ ಸಮಿತಿಯು ಇನ್ನೆರಡು ತಿಂಗಳಲ್ಲಿ ತನ್ನ ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸಲಿದೆ.

ನೀಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿತು. ಈ ಮಧ್ಯೆ, ಪೇಪರ್ ಸೋರಿಕೆಯ ವರದಿಗಳು ಹೊರಹೊಮ್ಮಿದ ನಂತರ ಯುಜಿಸಿ ನೆಟ್ ಪರೀಕ್ಷೆಯನ್ನು ಸಹ ರದ್ದುಗೊಳಿಸಲಾಯಿತು, ಇದು ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆಯ ಮೇಲಿನ ಕಳವಳವನ್ನು ಇನ್ನಷ್ಟು ಉಲ್ಬಣಗೊಳಿಸಿತು. ಮತ್ತಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದ್ದು, ಇಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆಯನ್ನು ಜೂನ್ 22ರ ರಾತ್ರಿ ರದ್ದುಗೊಳಿಸಲಾಗಿದೆ.

ಇದನ್ನೂ ಓದಿ; ನೀಟ್-ಪಿಜಿ ಪರೀಕ್ಷೆ ಮುಂದೂಡಿದ ಎನ್‌ಟಿಎ; ಸರ್ಕಾರದ ನಡೆಗೆ ಆಕಾಂಕ್ಷಿಗಳ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...