Homeಕರ್ನಾಟಕಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ 'ನಾವು ಭಾರತೀಯರು' ಮನವಿ

ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ ‘ನಾವು ಭಾರತೀಯರು’ ಮನವಿ

ಪ್ರವಾದಿ ಮುಹಮ್ಮದರ ಮೇಲೆ ಮಾಡಿದ ಅವಹೇಳನಕಾರಿ, ಅವಮಾನಕರ ಸಾಮಾಜಿಕ ಮಾಧ್ಯಮದ ಪೋಸ್ಟನ್ನು ನಾವು ಖಂಡಿಸುತ್ತೇವೆ. ಕಾನೂನುರೀತಿ ಕ್ರಮ ಜರುಗಲಿ ಎಂದು ನಾವು ಭಾರತೀಯರು ಸಂಘಟನೆ ಹೇಳಿಕೆಯಲ್ಲಿ ಒತ್ತಾಯಿಸಿದೆ.

- Advertisement -
- Advertisement -

ಡಿಜೆ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ. ಮಾಧ್ಯಮಗಳು ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡುವಂತೆ ಮತ್ತು ಉದ್ರಿಕ್ತತೆಯನ್ನು ಇನ್ನಷ್ಟು ಹೆಚ್ಚಿಸುವ ಅಭಿಪ್ರಾಯಗಳನ್ನು ಹಂಚಿಕೊಳ್ಳಬಾರದೆಂದು ಮನವಿ ಮಾಡುತ್ತೇವೆ ಎಂದು ನಾವು ಭಾರತೀಯರು ಸಂಘಟನೆ ತಿಳಿಸಿದೆ.

ಪ್ರವಾದಿ ಮುಹಮ್ಮದರ ಮೇಲೆ ಮಾಡಿದ ಅವಹೇಳನಕಾರಿ, ಅವಮಾನಕರ ಸಾಮಾಜಿಕ ಮಾಧ್ಯಮದ ಪೋಸ್ಟನ್ನು ನಾವು ಖಂಡಿಸುತ್ತೇವೆ. ಕಾನೂನುರೀತಿ ಕ್ರಮ ಜರುಗಲಿ ಎಂದು ನಾವು ಭಾರತೀಯರು ಸಂಘಟನೆ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಪ್ರವಾದಿ ಮುಹಮ್ಮದರ ಕುರಿತ ಅತ್ಯಂತ ಖಂಡನೀಯ ಅವಹೇಳನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟಿನ ಕಾರಣದಿಂದ ಗಲಭೆ ನಡೆಯಿತು ಎಂದು ಹೇಳಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಯಾವುದೇ ಕೃತ್ಯವು ಅಸ್ವೀಕಾರಾರ್ಹ ಮತ್ತು ಶಾಂತಿಗೆ ಹಾನಿಕಾರಕವಾಗಿದ್ದು, ಕಾನೂನು ಅನುಷ್ಟಾನ ಸಂಸ್ಥೆಗಳು ಅಂತವುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲಾ ಧರ್ಮಗಳನ್ನು ಗೌರವಿಸುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಾವೀಗ ಶಾಂತಿಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಇಡೀ ಬೆಂಗಳೂರು ಕೊರೋನ ಪಿಡುಗು ಮತ್ತು ಅಯೋಜಿತ ಲಾಕ್‌ಡೌನ್ ಕಾರಣದಿಂದ ಈಗಾಗಲೇ ಕಷ್ಟಕ್ಕೆ ಗುರಿಯಾಗಿರುವಾಗ, ಈ ರೀತಿಯ ಘಟನೆಗಳು ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತವೆ. ನಾವು ಎಲ್ಲಾ ಬೆಂಗಳೂರಿಗರಿಗೆ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡುತ್ತೇವೆ. ಪ್ರಜಾಸತ್ತಾತ್ಮಕ ಸಮಾಜವೊಂದರಲ್ಲಿ ಹಿಂಸಾಚಾರವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂದು ಹೇಳಲಾಗಿದೆ.


ಇದನ್ನೂ ಓದಿ; ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು


ಮೌಲಾನಾ ಮಝಾಮಿಲ್ ಸಾಬ್, ಅಮೀರ್ ಎ ಶರಿಯತ್ ಮೌಲಾನಾ ಹಜ್ರತ್ ಸಗೀರ್ ಆಹ್ಮದ್ ಸಾಬ್ ಅವರಂತಹ ಹಲವಾರು ಹಿರಿಯ ಧಾರ್ಮಿಕ ನಾಯಕರು, ಹಲವಾರು ಜನ ಸಾಮಾನ್ಯರು ಮತ್ತು ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಕೂಡಾ ನಿನ್ನೆ ರಾತ್ರಿಯೇ ಶಾಂತಿಗಾಗಿ ಕರೆಗಳನ್ನು ನೀಡಿದ್ದಾರೆ. ಹಲವಾರು ಮುಸ್ಲಿಮ್ ಯುವಕರು ಇತರ ಧಾರ್ಮಿಕ ಸ್ಥಳಗಳನ್ನು ಕೂಡ ರಕ್ಷಿಸಲು ಮಾನವ ಸರಪಳಿಗಳನ್ನು ರಚಿಸಿದ್ದಾರೆ ಈ ಮಾದರಿ ನಮ್ಮದಾಗಲಿ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವದಂತಿಗಳು ಮತ್ತು ಪ್ರಚೋದನೆಗಳಿಗೆ ಬಲಿ ಬೀಳಬಾರದು ಎಂದು  ಜನರಿಗೆ ಮನವಿ ಮಾಡುತ್ತೇವೆ. ಮತ್ತು ನಿನ್ನೆಯ ಎಲ್ಲಾ ಘಟನೆಗಳ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಹಾಗೂ ಯಾವುದೇ ಮುಗ್ಧ ವ್ಯಕ್ತಿಯನ್ನು ಶಿಕ್ಷೆಗೆ ಗುರಿಪಡಿಸದಂತೆ ಖಾತರಿಗೊಳಿಸಬೇಕು ಎಂದು ಪೊಲೀಸರಿಗೆ ನಾವು ಮನವಿ ಮಾಡುತ್ತೇವೆ. ನಾವೆಲ್ಲರೂ ಶಾಂತಿಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ಎಲ್ಲವೂ ತಕ್ಷಣ ಸಾಮಾನ್ಯ ಸ್ಥಿತಿಗೆ ಮರಳುವಂತೆ ಮಾಡಲು ಶ್ರಮಿಸೋಣ. ನಾವೆಲ್ಲರೂ ಜೊತೆಸೇರಿ ಸಾಂಕ್ರಾಮಿಕ ಪಿಡುಗು ಮತ್ತು ಯಾವುದೇ ವಿಭಜನಕಾರಿ ಪ್ರಯತ್ನಗಳ ವಿರುದ್ಧ ಹೋರಾಡೋಣ. ಯಾವುದೇ ಹಿಂಸಾಚಾರವು ನಮ್ಮ ಸಮಾಜದ ಶಾಂತಿಯ ಹಾದಿಯಲ್ಲಿ ಅಡ್ಡನಿಲ್ಲಲು ಬಿಡದಿರೋಣ  ದಯವಿಟ್ಟು ಶಾಂತಿಗಾಗಿ ಕೈಜೋಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...