Homeಕರ್ನಾಟಕಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ 'ನಾವು ಭಾರತೀಯರು' ಮನವಿ

ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ ‘ನಾವು ಭಾರತೀಯರು’ ಮನವಿ

ಪ್ರವಾದಿ ಮುಹಮ್ಮದರ ಮೇಲೆ ಮಾಡಿದ ಅವಹೇಳನಕಾರಿ, ಅವಮಾನಕರ ಸಾಮಾಜಿಕ ಮಾಧ್ಯಮದ ಪೋಸ್ಟನ್ನು ನಾವು ಖಂಡಿಸುತ್ತೇವೆ. ಕಾನೂನುರೀತಿ ಕ್ರಮ ಜರುಗಲಿ ಎಂದು ನಾವು ಭಾರತೀಯರು ಸಂಘಟನೆ ಹೇಳಿಕೆಯಲ್ಲಿ ಒತ್ತಾಯಿಸಿದೆ.

- Advertisement -
- Advertisement -

ಡಿಜೆ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ. ಮಾಧ್ಯಮಗಳು ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡುವಂತೆ ಮತ್ತು ಉದ್ರಿಕ್ತತೆಯನ್ನು ಇನ್ನಷ್ಟು ಹೆಚ್ಚಿಸುವ ಅಭಿಪ್ರಾಯಗಳನ್ನು ಹಂಚಿಕೊಳ್ಳಬಾರದೆಂದು ಮನವಿ ಮಾಡುತ್ತೇವೆ ಎಂದು ನಾವು ಭಾರತೀಯರು ಸಂಘಟನೆ ತಿಳಿಸಿದೆ.

ಪ್ರವಾದಿ ಮುಹಮ್ಮದರ ಮೇಲೆ ಮಾಡಿದ ಅವಹೇಳನಕಾರಿ, ಅವಮಾನಕರ ಸಾಮಾಜಿಕ ಮಾಧ್ಯಮದ ಪೋಸ್ಟನ್ನು ನಾವು ಖಂಡಿಸುತ್ತೇವೆ. ಕಾನೂನುರೀತಿ ಕ್ರಮ ಜರುಗಲಿ ಎಂದು ನಾವು ಭಾರತೀಯರು ಸಂಘಟನೆ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಪ್ರವಾದಿ ಮುಹಮ್ಮದರ ಕುರಿತ ಅತ್ಯಂತ ಖಂಡನೀಯ ಅವಹೇಳನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟಿನ ಕಾರಣದಿಂದ ಗಲಭೆ ನಡೆಯಿತು ಎಂದು ಹೇಳಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಯಾವುದೇ ಕೃತ್ಯವು ಅಸ್ವೀಕಾರಾರ್ಹ ಮತ್ತು ಶಾಂತಿಗೆ ಹಾನಿಕಾರಕವಾಗಿದ್ದು, ಕಾನೂನು ಅನುಷ್ಟಾನ ಸಂಸ್ಥೆಗಳು ಅಂತವುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲಾ ಧರ್ಮಗಳನ್ನು ಗೌರವಿಸುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಾವೀಗ ಶಾಂತಿಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಇಡೀ ಬೆಂಗಳೂರು ಕೊರೋನ ಪಿಡುಗು ಮತ್ತು ಅಯೋಜಿತ ಲಾಕ್‌ಡೌನ್ ಕಾರಣದಿಂದ ಈಗಾಗಲೇ ಕಷ್ಟಕ್ಕೆ ಗುರಿಯಾಗಿರುವಾಗ, ಈ ರೀತಿಯ ಘಟನೆಗಳು ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತವೆ. ನಾವು ಎಲ್ಲಾ ಬೆಂಗಳೂರಿಗರಿಗೆ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡುತ್ತೇವೆ. ಪ್ರಜಾಸತ್ತಾತ್ಮಕ ಸಮಾಜವೊಂದರಲ್ಲಿ ಹಿಂಸಾಚಾರವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂದು ಹೇಳಲಾಗಿದೆ.


ಇದನ್ನೂ ಓದಿ; ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು


ಮೌಲಾನಾ ಮಝಾಮಿಲ್ ಸಾಬ್, ಅಮೀರ್ ಎ ಶರಿಯತ್ ಮೌಲಾನಾ ಹಜ್ರತ್ ಸಗೀರ್ ಆಹ್ಮದ್ ಸಾಬ್ ಅವರಂತಹ ಹಲವಾರು ಹಿರಿಯ ಧಾರ್ಮಿಕ ನಾಯಕರು, ಹಲವಾರು ಜನ ಸಾಮಾನ್ಯರು ಮತ್ತು ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಕೂಡಾ ನಿನ್ನೆ ರಾತ್ರಿಯೇ ಶಾಂತಿಗಾಗಿ ಕರೆಗಳನ್ನು ನೀಡಿದ್ದಾರೆ. ಹಲವಾರು ಮುಸ್ಲಿಮ್ ಯುವಕರು ಇತರ ಧಾರ್ಮಿಕ ಸ್ಥಳಗಳನ್ನು ಕೂಡ ರಕ್ಷಿಸಲು ಮಾನವ ಸರಪಳಿಗಳನ್ನು ರಚಿಸಿದ್ದಾರೆ ಈ ಮಾದರಿ ನಮ್ಮದಾಗಲಿ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವದಂತಿಗಳು ಮತ್ತು ಪ್ರಚೋದನೆಗಳಿಗೆ ಬಲಿ ಬೀಳಬಾರದು ಎಂದು  ಜನರಿಗೆ ಮನವಿ ಮಾಡುತ್ತೇವೆ. ಮತ್ತು ನಿನ್ನೆಯ ಎಲ್ಲಾ ಘಟನೆಗಳ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಹಾಗೂ ಯಾವುದೇ ಮುಗ್ಧ ವ್ಯಕ್ತಿಯನ್ನು ಶಿಕ್ಷೆಗೆ ಗುರಿಪಡಿಸದಂತೆ ಖಾತರಿಗೊಳಿಸಬೇಕು ಎಂದು ಪೊಲೀಸರಿಗೆ ನಾವು ಮನವಿ ಮಾಡುತ್ತೇವೆ. ನಾವೆಲ್ಲರೂ ಶಾಂತಿಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ಎಲ್ಲವೂ ತಕ್ಷಣ ಸಾಮಾನ್ಯ ಸ್ಥಿತಿಗೆ ಮರಳುವಂತೆ ಮಾಡಲು ಶ್ರಮಿಸೋಣ. ನಾವೆಲ್ಲರೂ ಜೊತೆಸೇರಿ ಸಾಂಕ್ರಾಮಿಕ ಪಿಡುಗು ಮತ್ತು ಯಾವುದೇ ವಿಭಜನಕಾರಿ ಪ್ರಯತ್ನಗಳ ವಿರುದ್ಧ ಹೋರಾಡೋಣ. ಯಾವುದೇ ಹಿಂಸಾಚಾರವು ನಮ್ಮ ಸಮಾಜದ ಶಾಂತಿಯ ಹಾದಿಯಲ್ಲಿ ಅಡ್ಡನಿಲ್ಲಲು ಬಿಡದಿರೋಣ  ದಯವಿಟ್ಟು ಶಾಂತಿಗಾಗಿ ಕೈಜೋಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಆರೋಪ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...