Homeಕರ್ನಾಟಕಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ 'ನಾವು ಭಾರತೀಯರು' ಮನವಿ

ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ ‘ನಾವು ಭಾರತೀಯರು’ ಮನವಿ

ಪ್ರವಾದಿ ಮುಹಮ್ಮದರ ಮೇಲೆ ಮಾಡಿದ ಅವಹೇಳನಕಾರಿ, ಅವಮಾನಕರ ಸಾಮಾಜಿಕ ಮಾಧ್ಯಮದ ಪೋಸ್ಟನ್ನು ನಾವು ಖಂಡಿಸುತ್ತೇವೆ. ಕಾನೂನುರೀತಿ ಕ್ರಮ ಜರುಗಲಿ ಎಂದು ನಾವು ಭಾರತೀಯರು ಸಂಘಟನೆ ಹೇಳಿಕೆಯಲ್ಲಿ ಒತ್ತಾಯಿಸಿದೆ.

- Advertisement -
- Advertisement -

ಡಿಜೆ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ. ಮಾಧ್ಯಮಗಳು ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡುವಂತೆ ಮತ್ತು ಉದ್ರಿಕ್ತತೆಯನ್ನು ಇನ್ನಷ್ಟು ಹೆಚ್ಚಿಸುವ ಅಭಿಪ್ರಾಯಗಳನ್ನು ಹಂಚಿಕೊಳ್ಳಬಾರದೆಂದು ಮನವಿ ಮಾಡುತ್ತೇವೆ ಎಂದು ನಾವು ಭಾರತೀಯರು ಸಂಘಟನೆ ತಿಳಿಸಿದೆ.

ಪ್ರವಾದಿ ಮುಹಮ್ಮದರ ಮೇಲೆ ಮಾಡಿದ ಅವಹೇಳನಕಾರಿ, ಅವಮಾನಕರ ಸಾಮಾಜಿಕ ಮಾಧ್ಯಮದ ಪೋಸ್ಟನ್ನು ನಾವು ಖಂಡಿಸುತ್ತೇವೆ. ಕಾನೂನುರೀತಿ ಕ್ರಮ ಜರುಗಲಿ ಎಂದು ನಾವು ಭಾರತೀಯರು ಸಂಘಟನೆ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಪ್ರವಾದಿ ಮುಹಮ್ಮದರ ಕುರಿತ ಅತ್ಯಂತ ಖಂಡನೀಯ ಅವಹೇಳನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟಿನ ಕಾರಣದಿಂದ ಗಲಭೆ ನಡೆಯಿತು ಎಂದು ಹೇಳಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಯಾವುದೇ ಕೃತ್ಯವು ಅಸ್ವೀಕಾರಾರ್ಹ ಮತ್ತು ಶಾಂತಿಗೆ ಹಾನಿಕಾರಕವಾಗಿದ್ದು, ಕಾನೂನು ಅನುಷ್ಟಾನ ಸಂಸ್ಥೆಗಳು ಅಂತವುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲಾ ಧರ್ಮಗಳನ್ನು ಗೌರವಿಸುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಾವೀಗ ಶಾಂತಿಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಇಡೀ ಬೆಂಗಳೂರು ಕೊರೋನ ಪಿಡುಗು ಮತ್ತು ಅಯೋಜಿತ ಲಾಕ್‌ಡೌನ್ ಕಾರಣದಿಂದ ಈಗಾಗಲೇ ಕಷ್ಟಕ್ಕೆ ಗುರಿಯಾಗಿರುವಾಗ, ಈ ರೀತಿಯ ಘಟನೆಗಳು ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತವೆ. ನಾವು ಎಲ್ಲಾ ಬೆಂಗಳೂರಿಗರಿಗೆ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡುತ್ತೇವೆ. ಪ್ರಜಾಸತ್ತಾತ್ಮಕ ಸಮಾಜವೊಂದರಲ್ಲಿ ಹಿಂಸಾಚಾರವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂದು ಹೇಳಲಾಗಿದೆ.


ಇದನ್ನೂ ಓದಿ; ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು


ಮೌಲಾನಾ ಮಝಾಮಿಲ್ ಸಾಬ್, ಅಮೀರ್ ಎ ಶರಿಯತ್ ಮೌಲಾನಾ ಹಜ್ರತ್ ಸಗೀರ್ ಆಹ್ಮದ್ ಸಾಬ್ ಅವರಂತಹ ಹಲವಾರು ಹಿರಿಯ ಧಾರ್ಮಿಕ ನಾಯಕರು, ಹಲವಾರು ಜನ ಸಾಮಾನ್ಯರು ಮತ್ತು ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಕೂಡಾ ನಿನ್ನೆ ರಾತ್ರಿಯೇ ಶಾಂತಿಗಾಗಿ ಕರೆಗಳನ್ನು ನೀಡಿದ್ದಾರೆ. ಹಲವಾರು ಮುಸ್ಲಿಮ್ ಯುವಕರು ಇತರ ಧಾರ್ಮಿಕ ಸ್ಥಳಗಳನ್ನು ಕೂಡ ರಕ್ಷಿಸಲು ಮಾನವ ಸರಪಳಿಗಳನ್ನು ರಚಿಸಿದ್ದಾರೆ ಈ ಮಾದರಿ ನಮ್ಮದಾಗಲಿ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವದಂತಿಗಳು ಮತ್ತು ಪ್ರಚೋದನೆಗಳಿಗೆ ಬಲಿ ಬೀಳಬಾರದು ಎಂದು  ಜನರಿಗೆ ಮನವಿ ಮಾಡುತ್ತೇವೆ. ಮತ್ತು ನಿನ್ನೆಯ ಎಲ್ಲಾ ಘಟನೆಗಳ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಹಾಗೂ ಯಾವುದೇ ಮುಗ್ಧ ವ್ಯಕ್ತಿಯನ್ನು ಶಿಕ್ಷೆಗೆ ಗುರಿಪಡಿಸದಂತೆ ಖಾತರಿಗೊಳಿಸಬೇಕು ಎಂದು ಪೊಲೀಸರಿಗೆ ನಾವು ಮನವಿ ಮಾಡುತ್ತೇವೆ. ನಾವೆಲ್ಲರೂ ಶಾಂತಿಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ಎಲ್ಲವೂ ತಕ್ಷಣ ಸಾಮಾನ್ಯ ಸ್ಥಿತಿಗೆ ಮರಳುವಂತೆ ಮಾಡಲು ಶ್ರಮಿಸೋಣ. ನಾವೆಲ್ಲರೂ ಜೊತೆಸೇರಿ ಸಾಂಕ್ರಾಮಿಕ ಪಿಡುಗು ಮತ್ತು ಯಾವುದೇ ವಿಭಜನಕಾರಿ ಪ್ರಯತ್ನಗಳ ವಿರುದ್ಧ ಹೋರಾಡೋಣ. ಯಾವುದೇ ಹಿಂಸಾಚಾರವು ನಮ್ಮ ಸಮಾಜದ ಶಾಂತಿಯ ಹಾದಿಯಲ್ಲಿ ಅಡ್ಡನಿಲ್ಲಲು ಬಿಡದಿರೋಣ  ದಯವಿಟ್ಟು ಶಾಂತಿಗಾಗಿ ಕೈಜೋಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...