Homeಮುಖಪುಟಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

ಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿದೆ.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು.

ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

“ನಮ್ಮ ಕುಟುಂಬಕ್ಕೆ 100 ವರ್ಷಗಳ ಕಾಲ ಭೂಮಿಯನ್ನು ಗುತ್ತಿಗೆ ನೀಡಲಾಗಿದೆ. ಅದರಲ್ಲಿ ಕೆಲವನ್ನು ನನ್ನ ತಂದೆ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಮಾರುಕಟ್ಟೆಯಿಂದ ಖರೀದಿಸಿದ್ದಾರೆ” ಎಂದು ಸೇನ್ ಹೇಳಿಕೊಂಡಿದ್ದರು.

“ಕ್ಯಾಂಪಸ್‌ನಲ್ಲಿರುವ ನಮ್ಮ ಆಸ್ತಿಯನ್ನು ಹಿಂದಿರುಗಿಸುವಂತೆ ಕೇಳುತ್ತಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಉದ್ದೇಶ ಅರ್ಥವಾಗುತ್ತಿಲ್ಲ” ಎಂದು ಸೇನ್‌ ದೂರಿದ್ದಾರೆ.

“ಅವರ [ವಿಶ್ವವಿದ್ಯಾಲಯದ ಅಧಿಕಾರಿಗಳ] ಚಿಂತನೆಯಲ್ಲಿ ನನಗೆ ಯಾವುದೇ ಸೂಕ್ಷ್ಮತೆ ಕಾಣುತ್ತಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ವಿಶ್ವಭಾರತಿ ವಿಶ್ವವಿದ್ಯಾಲಯದ ಈ ಧೋರಣೆಯ ಹಿಂದಿನ ರಾಜಕೀಯ ನನಗೂ ಅರ್ಥವಾಗುತ್ತಿಲ್ಲ. ಇದು 1940 ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನಮ್ಮ ನಿವಾಸ ಇದಾಗಿದೆ” ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...