Homeಮುಖಪುಟಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

ಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿದೆ.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು.

ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

“ನಮ್ಮ ಕುಟುಂಬಕ್ಕೆ 100 ವರ್ಷಗಳ ಕಾಲ ಭೂಮಿಯನ್ನು ಗುತ್ತಿಗೆ ನೀಡಲಾಗಿದೆ. ಅದರಲ್ಲಿ ಕೆಲವನ್ನು ನನ್ನ ತಂದೆ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಮಾರುಕಟ್ಟೆಯಿಂದ ಖರೀದಿಸಿದ್ದಾರೆ” ಎಂದು ಸೇನ್ ಹೇಳಿಕೊಂಡಿದ್ದರು.

“ಕ್ಯಾಂಪಸ್‌ನಲ್ಲಿರುವ ನಮ್ಮ ಆಸ್ತಿಯನ್ನು ಹಿಂದಿರುಗಿಸುವಂತೆ ಕೇಳುತ್ತಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಉದ್ದೇಶ ಅರ್ಥವಾಗುತ್ತಿಲ್ಲ” ಎಂದು ಸೇನ್‌ ದೂರಿದ್ದಾರೆ.

“ಅವರ [ವಿಶ್ವವಿದ್ಯಾಲಯದ ಅಧಿಕಾರಿಗಳ] ಚಿಂತನೆಯಲ್ಲಿ ನನಗೆ ಯಾವುದೇ ಸೂಕ್ಷ್ಮತೆ ಕಾಣುತ್ತಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ವಿಶ್ವಭಾರತಿ ವಿಶ್ವವಿದ್ಯಾಲಯದ ಈ ಧೋರಣೆಯ ಹಿಂದಿನ ರಾಜಕೀಯ ನನಗೂ ಅರ್ಥವಾಗುತ್ತಿಲ್ಲ. ಇದು 1940 ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನಮ್ಮ ನಿವಾಸ ಇದಾಗಿದೆ” ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...