Homeಮುಖಪುಟಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

ಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿದೆ.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು.

ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

“ನಮ್ಮ ಕುಟುಂಬಕ್ಕೆ 100 ವರ್ಷಗಳ ಕಾಲ ಭೂಮಿಯನ್ನು ಗುತ್ತಿಗೆ ನೀಡಲಾಗಿದೆ. ಅದರಲ್ಲಿ ಕೆಲವನ್ನು ನನ್ನ ತಂದೆ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಮಾರುಕಟ್ಟೆಯಿಂದ ಖರೀದಿಸಿದ್ದಾರೆ” ಎಂದು ಸೇನ್ ಹೇಳಿಕೊಂಡಿದ್ದರು.

“ಕ್ಯಾಂಪಸ್‌ನಲ್ಲಿರುವ ನಮ್ಮ ಆಸ್ತಿಯನ್ನು ಹಿಂದಿರುಗಿಸುವಂತೆ ಕೇಳುತ್ತಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಉದ್ದೇಶ ಅರ್ಥವಾಗುತ್ತಿಲ್ಲ” ಎಂದು ಸೇನ್‌ ದೂರಿದ್ದಾರೆ.

“ಅವರ [ವಿಶ್ವವಿದ್ಯಾಲಯದ ಅಧಿಕಾರಿಗಳ] ಚಿಂತನೆಯಲ್ಲಿ ನನಗೆ ಯಾವುದೇ ಸೂಕ್ಷ್ಮತೆ ಕಾಣುತ್ತಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ವಿಶ್ವಭಾರತಿ ವಿಶ್ವವಿದ್ಯಾಲಯದ ಈ ಧೋರಣೆಯ ಹಿಂದಿನ ರಾಜಕೀಯ ನನಗೂ ಅರ್ಥವಾಗುತ್ತಿಲ್ಲ. ಇದು 1940 ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನಮ್ಮ ನಿವಾಸ ಇದಾಗಿದೆ” ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...