Homeಮುಖಪುಟಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

ಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿದೆ.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು.

ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

“ನಮ್ಮ ಕುಟುಂಬಕ್ಕೆ 100 ವರ್ಷಗಳ ಕಾಲ ಭೂಮಿಯನ್ನು ಗುತ್ತಿಗೆ ನೀಡಲಾಗಿದೆ. ಅದರಲ್ಲಿ ಕೆಲವನ್ನು ನನ್ನ ತಂದೆ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಮಾರುಕಟ್ಟೆಯಿಂದ ಖರೀದಿಸಿದ್ದಾರೆ” ಎಂದು ಸೇನ್ ಹೇಳಿಕೊಂಡಿದ್ದರು.

“ಕ್ಯಾಂಪಸ್‌ನಲ್ಲಿರುವ ನಮ್ಮ ಆಸ್ತಿಯನ್ನು ಹಿಂದಿರುಗಿಸುವಂತೆ ಕೇಳುತ್ತಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಉದ್ದೇಶ ಅರ್ಥವಾಗುತ್ತಿಲ್ಲ” ಎಂದು ಸೇನ್‌ ದೂರಿದ್ದಾರೆ.

“ಅವರ [ವಿಶ್ವವಿದ್ಯಾಲಯದ ಅಧಿಕಾರಿಗಳ] ಚಿಂತನೆಯಲ್ಲಿ ನನಗೆ ಯಾವುದೇ ಸೂಕ್ಷ್ಮತೆ ಕಾಣುತ್ತಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ವಿಶ್ವಭಾರತಿ ವಿಶ್ವವಿದ್ಯಾಲಯದ ಈ ಧೋರಣೆಯ ಹಿಂದಿನ ರಾಜಕೀಯ ನನಗೂ ಅರ್ಥವಾಗುತ್ತಿಲ್ಲ. ಇದು 1940 ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನಮ್ಮ ನಿವಾಸ ಇದಾಗಿದೆ” ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...