Homeಮುಖಪುಟಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

ಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿದೆ.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು.

ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

“ನಮ್ಮ ಕುಟುಂಬಕ್ಕೆ 100 ವರ್ಷಗಳ ಕಾಲ ಭೂಮಿಯನ್ನು ಗುತ್ತಿಗೆ ನೀಡಲಾಗಿದೆ. ಅದರಲ್ಲಿ ಕೆಲವನ್ನು ನನ್ನ ತಂದೆ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಮಾರುಕಟ್ಟೆಯಿಂದ ಖರೀದಿಸಿದ್ದಾರೆ” ಎಂದು ಸೇನ್ ಹೇಳಿಕೊಂಡಿದ್ದರು.

“ಕ್ಯಾಂಪಸ್‌ನಲ್ಲಿರುವ ನಮ್ಮ ಆಸ್ತಿಯನ್ನು ಹಿಂದಿರುಗಿಸುವಂತೆ ಕೇಳುತ್ತಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಉದ್ದೇಶ ಅರ್ಥವಾಗುತ್ತಿಲ್ಲ” ಎಂದು ಸೇನ್‌ ದೂರಿದ್ದಾರೆ.

“ಅವರ [ವಿಶ್ವವಿದ್ಯಾಲಯದ ಅಧಿಕಾರಿಗಳ] ಚಿಂತನೆಯಲ್ಲಿ ನನಗೆ ಯಾವುದೇ ಸೂಕ್ಷ್ಮತೆ ಕಾಣುತ್ತಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ವಿಶ್ವಭಾರತಿ ವಿಶ್ವವಿದ್ಯಾಲಯದ ಈ ಧೋರಣೆಯ ಹಿಂದಿನ ರಾಜಕೀಯ ನನಗೂ ಅರ್ಥವಾಗುತ್ತಿಲ್ಲ. ಇದು 1940 ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನಮ್ಮ ನಿವಾಸ ಇದಾಗಿದೆ” ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...