Homeಮುಖಪುಟಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

ಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿದೆ.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು.

ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

“ನಮ್ಮ ಕುಟುಂಬಕ್ಕೆ 100 ವರ್ಷಗಳ ಕಾಲ ಭೂಮಿಯನ್ನು ಗುತ್ತಿಗೆ ನೀಡಲಾಗಿದೆ. ಅದರಲ್ಲಿ ಕೆಲವನ್ನು ನನ್ನ ತಂದೆ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಮಾರುಕಟ್ಟೆಯಿಂದ ಖರೀದಿಸಿದ್ದಾರೆ” ಎಂದು ಸೇನ್ ಹೇಳಿಕೊಂಡಿದ್ದರು.

“ಕ್ಯಾಂಪಸ್‌ನಲ್ಲಿರುವ ನಮ್ಮ ಆಸ್ತಿಯನ್ನು ಹಿಂದಿರುಗಿಸುವಂತೆ ಕೇಳುತ್ತಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಉದ್ದೇಶ ಅರ್ಥವಾಗುತ್ತಿಲ್ಲ” ಎಂದು ಸೇನ್‌ ದೂರಿದ್ದಾರೆ.

“ಅವರ [ವಿಶ್ವವಿದ್ಯಾಲಯದ ಅಧಿಕಾರಿಗಳ] ಚಿಂತನೆಯಲ್ಲಿ ನನಗೆ ಯಾವುದೇ ಸೂಕ್ಷ್ಮತೆ ಕಾಣುತ್ತಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ವಿಶ್ವಭಾರತಿ ವಿಶ್ವವಿದ್ಯಾಲಯದ ಈ ಧೋರಣೆಯ ಹಿಂದಿನ ರಾಜಕೀಯ ನನಗೂ ಅರ್ಥವಾಗುತ್ತಿಲ್ಲ. ಇದು 1940 ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನಮ್ಮ ನಿವಾಸ ಇದಾಗಿದೆ” ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...