Homeಮುಖಪುಟಉಡುಪಿ: ಕೋವಿಡ್ ಕರ್ಫ್ಯೂ ಕಾಲದಲ್ಲಿ ಯಕ್ಷಗಾನಕ್ಕೆ ಅವಕಾಶ ಕೋರಿ ಕಲಾವಿದರ ಮನವಿ

ಉಡುಪಿ: ಕೋವಿಡ್ ಕರ್ಫ್ಯೂ ಕಾಲದಲ್ಲಿ ಯಕ್ಷಗಾನಕ್ಕೆ ಅವಕಾಶ ಕೋರಿ ಕಲಾವಿದರ ಮನವಿ

- Advertisement -
- Advertisement -

ಉಡುಪಿ : ಕೋವಿಡ್ ಕರ್ಫ್ಯೂ, ಲಾಕ್ ಡೌನ್‌ನಿಂದ ಕಳೆದೆರಡು ವರ್ಷದಿಂದ ತಮ್ಮ ಜೀವನಾಧಾರ ಕಸಬು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಕರಾವಳಿಯ ಯಕ್ಷಗಾನ ಕಲಾವಿದರು ಮತ್ತೆ ಎದುರಾಗಿರುವ ರಾತ್ರಿ ಹಾಗು ವಾರಾಂತ್ಯದ ನಿರ್ಬಂಧದಿಂದ ಕಂಗಾಲಾಗಿದ್ದಾರೆ. ಪರಿಸ್ಥತಿ ಹೀಗೇ ಮುಂದುವರಿದರೆ ತಮ್ಮ ಕುಟುಂಬಗಳು ಬೀದಿಗೆ ಬೀಳುವ ಆತಂಕದಿಂದ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಯಕ್ಷಗಾನ ಕಲಾವಿದರು ರಾತ್ರಿ ವೇಳೆ ಯಕ್ಷಗಾನ ಪ್ರದರ್ಶನಕ್ಕೆ ರಿಯಾಯತಿ ನೀಡಬೇಕೆಂದು ಆಗ್ರಹಿಸಿ ಧರಣಿ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ್ದ ಯಕ್ಷಗಾನದ ನೂರಾರು ಹವ್ಯಾಸಿ ಮತ್ತು ವೃತ್ತಿಪರ ಕಲಾವಿದರು, ಐದಾರು ಸಾವಿರದಷ್ಟು ಜನರು, ನಮಗೆ ಯಕ್ಷಗಾನ ಬಿಟ್ಟರೆ ಬೇರೆ ಉದ್ಯೋಗ ಗೊತ್ತಿಲ್ಲ. ಲಾಕ್‌ಡೌನ್‌ನಿಂದ ಎರಡು ವರ್ಷ ಮನೆಯಲ್ಲಿಯೆ ಕುಳಿತ್ತಿದ್ದೆವು. ತಂದೆ, ತಾಯಿ, ಹೆಂಡತಿ, ಮಕ್ಕಳಿಗೆ ಒದೊಂತ್ತು ಗಂಜಿ ಹಾಕಲು ಆಗುತ್ತಿಲ್ಲ. ಸರ್ಕಾರ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಲೆ, ಕಲಾವಿದರಿಗೆ ದ್ರೋಹವಾದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಅಳಲು ತೋಡಿಕೊಂಡರು.

ಕಟ್ಟು ನಿಟ್ಟಿನ ರಾತ್ರಿ ಕರ್ಪ್ಯೂನಿಂದ ರಾತ್ರಿ 10ರ ಬಳಿಕ ಯಕ್ಷಗಾನ ಪ್ರದರ್ಶನ ಮಾಡಲಾಗುತ್ತಿಲ್ಲ. ಹೆಚ್ಚಿನ ಯಕ್ಷಗಾನ ನಡೆಯುವುದೆ ಶನಿವಾರ ಮತ್ತು ರವಿವಾರ. ವಿಕ್ ಎಂಡ್ ಕರ್ಫ್ಯೂನಿಂದಾಗಿ ವಾರದ ಕೊನೆಯ ಪ್ರದರ್ಶನ ಸ್ಥಗಿತ ಗೊಳಿಸಬೇಕಾಗಿದೆ. ಹೀಗಾದರೆ ಯಕ್ಷಗಾನದಿಂದಲೆ ಬದುಕು ಕಟ್ಟಿಕೊಂಡಿರುವ ನಮ್ಮ ಕುಟುಂಬಗಳು ಅನಾಥವಾಗುತ್ತವೆ. ರಾತ್ರಿ 12ರ ತನಕವಾದರೂ ಸರ್ಕಾರ ಯಕ್ಷಗಾನಕ್ಕೆ ಅನುಮತಿ ಸರ್ಕಾರ ಕೊಡಬೇಕು. ಈಗಾಗಲೆ ದಿನಾಂಕ ನಿಗದಿತವಾಗಿರುವ ಪ್ರದರ್ಶನಗಳಿಗೆ ಒಪ್ಪಿಗೆ ನೀಡಬೇಕು. ಕಠಿಣ ಕರ್ಫ್ಯೂ ಜಾರಿಗೊಳಿಸಿದರೆ ಅಸಹಾಯಕ ಕಲಾವಿದರ ಜೀವನಕ್ಕೆ ಭದ್ರತೆ ಒದಗಿಸುವ ಪರ್ಯಾಯ ವ್ಯವಸ್ದೆ ಮಾಡಬೇಕೆಂದು ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿದರು.

ಕರೋನಾ ಹಾವಳಿಯಿಂದ ಕಳೆದೆರಡು ವರ್ಷದಿಂದ ಟೆಂಟ್ ಮೇಳ, ಬಯಲಾಟ ನಡೆಯದೆ ಯಕ್ಷಗಾನ ಕಲಾವಿದರು ಕಷ್ಟ-ನಷ್ಟ ಅನುಭವಿಸಿದ್ದಾರೆ. ಕೊರೋನಾ ಆತಂಕ ಸ್ವಲ್ಪ ಕಡಿಮೆಯಾಗಿ ಮೇಳಗಳ ತಿರುಗಾಟ ಆರಂಭಿಸಿದ್ದು ಕಲಾವಿದರು ನಿಟ್ಟುಸಿರು ಬಿಡುವಂತಾಗಿತ್ತು. ಚೇತರಿಸಿಕೊಳ್ಳುವಷ್ಟರಲ್ಲೆ ಕೋವಿಡ್ ಮೂರನೆ ಅಲೆ ನಿಯಂತ್ರಣಕ್ಕೆಂದು ಸರ್ಕಾರ ಮತ್ತೆ ಹೇರಿರುವ ಕಠಿಣ ನಿಯಮಗಳು ಯಕ್ಷಗಾನದ ನಟರು ಮತ್ತು ನೇಪಥ್ಯದ ಕಲಾವಿದರ ದಿಕ್ಕೆಡಿಸಿಬಿಟ್ಟಿದೆ. ಡಿಸೆಂಬರ್ ತಿಂಗಳಲ್ಲಿ ಆರಂಭವಾಗಿದ್ದ ಮೇಳಗಳ ತಿರುಗಾಟ ಒಂದು ತಿಂಗಳು ಕಳೆಯುವಷ್ಟರಲ್ಲೆ ನಿಲ್ಲಿಸಬೇಕಾಗಿ ಬಂದಿರುವುದು ಯಕ್ಷಗಾನ ಅವಲಂಬಿತ ಕಸುಬುಗಾರರಲ್ಲಿ ಆತಂಕ ಸೃಷ್ಟಿಸಿದೆ.


ಇದನ್ನೂ ಓದಿ; ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...