Homeಮುಖಪುಟಉಡುಪಿ: ಕೋವಿಡ್ ಕರ್ಫ್ಯೂ ಕಾಲದಲ್ಲಿ ಯಕ್ಷಗಾನಕ್ಕೆ ಅವಕಾಶ ಕೋರಿ ಕಲಾವಿದರ ಮನವಿ

ಉಡುಪಿ: ಕೋವಿಡ್ ಕರ್ಫ್ಯೂ ಕಾಲದಲ್ಲಿ ಯಕ್ಷಗಾನಕ್ಕೆ ಅವಕಾಶ ಕೋರಿ ಕಲಾವಿದರ ಮನವಿ

- Advertisement -
- Advertisement -

ಉಡುಪಿ : ಕೋವಿಡ್ ಕರ್ಫ್ಯೂ, ಲಾಕ್ ಡೌನ್‌ನಿಂದ ಕಳೆದೆರಡು ವರ್ಷದಿಂದ ತಮ್ಮ ಜೀವನಾಧಾರ ಕಸಬು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಕರಾವಳಿಯ ಯಕ್ಷಗಾನ ಕಲಾವಿದರು ಮತ್ತೆ ಎದುರಾಗಿರುವ ರಾತ್ರಿ ಹಾಗು ವಾರಾಂತ್ಯದ ನಿರ್ಬಂಧದಿಂದ ಕಂಗಾಲಾಗಿದ್ದಾರೆ. ಪರಿಸ್ಥತಿ ಹೀಗೇ ಮುಂದುವರಿದರೆ ತಮ್ಮ ಕುಟುಂಬಗಳು ಬೀದಿಗೆ ಬೀಳುವ ಆತಂಕದಿಂದ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಯಕ್ಷಗಾನ ಕಲಾವಿದರು ರಾತ್ರಿ ವೇಳೆ ಯಕ್ಷಗಾನ ಪ್ರದರ್ಶನಕ್ಕೆ ರಿಯಾಯತಿ ನೀಡಬೇಕೆಂದು ಆಗ್ರಹಿಸಿ ಧರಣಿ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ್ದ ಯಕ್ಷಗಾನದ ನೂರಾರು ಹವ್ಯಾಸಿ ಮತ್ತು ವೃತ್ತಿಪರ ಕಲಾವಿದರು, ಐದಾರು ಸಾವಿರದಷ್ಟು ಜನರು, ನಮಗೆ ಯಕ್ಷಗಾನ ಬಿಟ್ಟರೆ ಬೇರೆ ಉದ್ಯೋಗ ಗೊತ್ತಿಲ್ಲ. ಲಾಕ್‌ಡೌನ್‌ನಿಂದ ಎರಡು ವರ್ಷ ಮನೆಯಲ್ಲಿಯೆ ಕುಳಿತ್ತಿದ್ದೆವು. ತಂದೆ, ತಾಯಿ, ಹೆಂಡತಿ, ಮಕ್ಕಳಿಗೆ ಒದೊಂತ್ತು ಗಂಜಿ ಹಾಕಲು ಆಗುತ್ತಿಲ್ಲ. ಸರ್ಕಾರ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಲೆ, ಕಲಾವಿದರಿಗೆ ದ್ರೋಹವಾದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಅಳಲು ತೋಡಿಕೊಂಡರು.

ಕಟ್ಟು ನಿಟ್ಟಿನ ರಾತ್ರಿ ಕರ್ಪ್ಯೂನಿಂದ ರಾತ್ರಿ 10ರ ಬಳಿಕ ಯಕ್ಷಗಾನ ಪ್ರದರ್ಶನ ಮಾಡಲಾಗುತ್ತಿಲ್ಲ. ಹೆಚ್ಚಿನ ಯಕ್ಷಗಾನ ನಡೆಯುವುದೆ ಶನಿವಾರ ಮತ್ತು ರವಿವಾರ. ವಿಕ್ ಎಂಡ್ ಕರ್ಫ್ಯೂನಿಂದಾಗಿ ವಾರದ ಕೊನೆಯ ಪ್ರದರ್ಶನ ಸ್ಥಗಿತ ಗೊಳಿಸಬೇಕಾಗಿದೆ. ಹೀಗಾದರೆ ಯಕ್ಷಗಾನದಿಂದಲೆ ಬದುಕು ಕಟ್ಟಿಕೊಂಡಿರುವ ನಮ್ಮ ಕುಟುಂಬಗಳು ಅನಾಥವಾಗುತ್ತವೆ. ರಾತ್ರಿ 12ರ ತನಕವಾದರೂ ಸರ್ಕಾರ ಯಕ್ಷಗಾನಕ್ಕೆ ಅನುಮತಿ ಸರ್ಕಾರ ಕೊಡಬೇಕು. ಈಗಾಗಲೆ ದಿನಾಂಕ ನಿಗದಿತವಾಗಿರುವ ಪ್ರದರ್ಶನಗಳಿಗೆ ಒಪ್ಪಿಗೆ ನೀಡಬೇಕು. ಕಠಿಣ ಕರ್ಫ್ಯೂ ಜಾರಿಗೊಳಿಸಿದರೆ ಅಸಹಾಯಕ ಕಲಾವಿದರ ಜೀವನಕ್ಕೆ ಭದ್ರತೆ ಒದಗಿಸುವ ಪರ್ಯಾಯ ವ್ಯವಸ್ದೆ ಮಾಡಬೇಕೆಂದು ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿದರು.

ಕರೋನಾ ಹಾವಳಿಯಿಂದ ಕಳೆದೆರಡು ವರ್ಷದಿಂದ ಟೆಂಟ್ ಮೇಳ, ಬಯಲಾಟ ನಡೆಯದೆ ಯಕ್ಷಗಾನ ಕಲಾವಿದರು ಕಷ್ಟ-ನಷ್ಟ ಅನುಭವಿಸಿದ್ದಾರೆ. ಕೊರೋನಾ ಆತಂಕ ಸ್ವಲ್ಪ ಕಡಿಮೆಯಾಗಿ ಮೇಳಗಳ ತಿರುಗಾಟ ಆರಂಭಿಸಿದ್ದು ಕಲಾವಿದರು ನಿಟ್ಟುಸಿರು ಬಿಡುವಂತಾಗಿತ್ತು. ಚೇತರಿಸಿಕೊಳ್ಳುವಷ್ಟರಲ್ಲೆ ಕೋವಿಡ್ ಮೂರನೆ ಅಲೆ ನಿಯಂತ್ರಣಕ್ಕೆಂದು ಸರ್ಕಾರ ಮತ್ತೆ ಹೇರಿರುವ ಕಠಿಣ ನಿಯಮಗಳು ಯಕ್ಷಗಾನದ ನಟರು ಮತ್ತು ನೇಪಥ್ಯದ ಕಲಾವಿದರ ದಿಕ್ಕೆಡಿಸಿಬಿಟ್ಟಿದೆ. ಡಿಸೆಂಬರ್ ತಿಂಗಳಲ್ಲಿ ಆರಂಭವಾಗಿದ್ದ ಮೇಳಗಳ ತಿರುಗಾಟ ಒಂದು ತಿಂಗಳು ಕಳೆಯುವಷ್ಟರಲ್ಲೆ ನಿಲ್ಲಿಸಬೇಕಾಗಿ ಬಂದಿರುವುದು ಯಕ್ಷಗಾನ ಅವಲಂಬಿತ ಕಸುಬುಗಾರರಲ್ಲಿ ಆತಂಕ ಸೃಷ್ಟಿಸಿದೆ.


ಇದನ್ನೂ ಓದಿ; ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...