Homeಮುಖಪುಟಉಡುಪಿ: ಕೋವಿಡ್ ಕರ್ಫ್ಯೂ ಕಾಲದಲ್ಲಿ ಯಕ್ಷಗಾನಕ್ಕೆ ಅವಕಾಶ ಕೋರಿ ಕಲಾವಿದರ ಮನವಿ

ಉಡುಪಿ: ಕೋವಿಡ್ ಕರ್ಫ್ಯೂ ಕಾಲದಲ್ಲಿ ಯಕ್ಷಗಾನಕ್ಕೆ ಅವಕಾಶ ಕೋರಿ ಕಲಾವಿದರ ಮನವಿ

- Advertisement -
- Advertisement -

ಉಡುಪಿ : ಕೋವಿಡ್ ಕರ್ಫ್ಯೂ, ಲಾಕ್ ಡೌನ್‌ನಿಂದ ಕಳೆದೆರಡು ವರ್ಷದಿಂದ ತಮ್ಮ ಜೀವನಾಧಾರ ಕಸಬು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಕರಾವಳಿಯ ಯಕ್ಷಗಾನ ಕಲಾವಿದರು ಮತ್ತೆ ಎದುರಾಗಿರುವ ರಾತ್ರಿ ಹಾಗು ವಾರಾಂತ್ಯದ ನಿರ್ಬಂಧದಿಂದ ಕಂಗಾಲಾಗಿದ್ದಾರೆ. ಪರಿಸ್ಥತಿ ಹೀಗೇ ಮುಂದುವರಿದರೆ ತಮ್ಮ ಕುಟುಂಬಗಳು ಬೀದಿಗೆ ಬೀಳುವ ಆತಂಕದಿಂದ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಯಕ್ಷಗಾನ ಕಲಾವಿದರು ರಾತ್ರಿ ವೇಳೆ ಯಕ್ಷಗಾನ ಪ್ರದರ್ಶನಕ್ಕೆ ರಿಯಾಯತಿ ನೀಡಬೇಕೆಂದು ಆಗ್ರಹಿಸಿ ಧರಣಿ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ್ದ ಯಕ್ಷಗಾನದ ನೂರಾರು ಹವ್ಯಾಸಿ ಮತ್ತು ವೃತ್ತಿಪರ ಕಲಾವಿದರು, ಐದಾರು ಸಾವಿರದಷ್ಟು ಜನರು, ನಮಗೆ ಯಕ್ಷಗಾನ ಬಿಟ್ಟರೆ ಬೇರೆ ಉದ್ಯೋಗ ಗೊತ್ತಿಲ್ಲ. ಲಾಕ್‌ಡೌನ್‌ನಿಂದ ಎರಡು ವರ್ಷ ಮನೆಯಲ್ಲಿಯೆ ಕುಳಿತ್ತಿದ್ದೆವು. ತಂದೆ, ತಾಯಿ, ಹೆಂಡತಿ, ಮಕ್ಕಳಿಗೆ ಒದೊಂತ್ತು ಗಂಜಿ ಹಾಕಲು ಆಗುತ್ತಿಲ್ಲ. ಸರ್ಕಾರ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಲೆ, ಕಲಾವಿದರಿಗೆ ದ್ರೋಹವಾದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಅಳಲು ತೋಡಿಕೊಂಡರು.

ಕಟ್ಟು ನಿಟ್ಟಿನ ರಾತ್ರಿ ಕರ್ಪ್ಯೂನಿಂದ ರಾತ್ರಿ 10ರ ಬಳಿಕ ಯಕ್ಷಗಾನ ಪ್ರದರ್ಶನ ಮಾಡಲಾಗುತ್ತಿಲ್ಲ. ಹೆಚ್ಚಿನ ಯಕ್ಷಗಾನ ನಡೆಯುವುದೆ ಶನಿವಾರ ಮತ್ತು ರವಿವಾರ. ವಿಕ್ ಎಂಡ್ ಕರ್ಫ್ಯೂನಿಂದಾಗಿ ವಾರದ ಕೊನೆಯ ಪ್ರದರ್ಶನ ಸ್ಥಗಿತ ಗೊಳಿಸಬೇಕಾಗಿದೆ. ಹೀಗಾದರೆ ಯಕ್ಷಗಾನದಿಂದಲೆ ಬದುಕು ಕಟ್ಟಿಕೊಂಡಿರುವ ನಮ್ಮ ಕುಟುಂಬಗಳು ಅನಾಥವಾಗುತ್ತವೆ. ರಾತ್ರಿ 12ರ ತನಕವಾದರೂ ಸರ್ಕಾರ ಯಕ್ಷಗಾನಕ್ಕೆ ಅನುಮತಿ ಸರ್ಕಾರ ಕೊಡಬೇಕು. ಈಗಾಗಲೆ ದಿನಾಂಕ ನಿಗದಿತವಾಗಿರುವ ಪ್ರದರ್ಶನಗಳಿಗೆ ಒಪ್ಪಿಗೆ ನೀಡಬೇಕು. ಕಠಿಣ ಕರ್ಫ್ಯೂ ಜಾರಿಗೊಳಿಸಿದರೆ ಅಸಹಾಯಕ ಕಲಾವಿದರ ಜೀವನಕ್ಕೆ ಭದ್ರತೆ ಒದಗಿಸುವ ಪರ್ಯಾಯ ವ್ಯವಸ್ದೆ ಮಾಡಬೇಕೆಂದು ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿದರು.

ಕರೋನಾ ಹಾವಳಿಯಿಂದ ಕಳೆದೆರಡು ವರ್ಷದಿಂದ ಟೆಂಟ್ ಮೇಳ, ಬಯಲಾಟ ನಡೆಯದೆ ಯಕ್ಷಗಾನ ಕಲಾವಿದರು ಕಷ್ಟ-ನಷ್ಟ ಅನುಭವಿಸಿದ್ದಾರೆ. ಕೊರೋನಾ ಆತಂಕ ಸ್ವಲ್ಪ ಕಡಿಮೆಯಾಗಿ ಮೇಳಗಳ ತಿರುಗಾಟ ಆರಂಭಿಸಿದ್ದು ಕಲಾವಿದರು ನಿಟ್ಟುಸಿರು ಬಿಡುವಂತಾಗಿತ್ತು. ಚೇತರಿಸಿಕೊಳ್ಳುವಷ್ಟರಲ್ಲೆ ಕೋವಿಡ್ ಮೂರನೆ ಅಲೆ ನಿಯಂತ್ರಣಕ್ಕೆಂದು ಸರ್ಕಾರ ಮತ್ತೆ ಹೇರಿರುವ ಕಠಿಣ ನಿಯಮಗಳು ಯಕ್ಷಗಾನದ ನಟರು ಮತ್ತು ನೇಪಥ್ಯದ ಕಲಾವಿದರ ದಿಕ್ಕೆಡಿಸಿಬಿಟ್ಟಿದೆ. ಡಿಸೆಂಬರ್ ತಿಂಗಳಲ್ಲಿ ಆರಂಭವಾಗಿದ್ದ ಮೇಳಗಳ ತಿರುಗಾಟ ಒಂದು ತಿಂಗಳು ಕಳೆಯುವಷ್ಟರಲ್ಲೆ ನಿಲ್ಲಿಸಬೇಕಾಗಿ ಬಂದಿರುವುದು ಯಕ್ಷಗಾನ ಅವಲಂಬಿತ ಕಸುಬುಗಾರರಲ್ಲಿ ಆತಂಕ ಸೃಷ್ಟಿಸಿದೆ.


ಇದನ್ನೂ ಓದಿ; ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...