HomeUncategorizedಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ - 2025 ಹಾಗೂ ಚಲೋ ಕಲಬುರಗಿ...

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

- Advertisement -
- Advertisement -

ಏಕ ಸಂಸ್ಕೃತಿಯ ಹೇರಿಕೆಯ ವಿರುದ್ಧ ಕಲಬುರಗಿಯಲ್ಲಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ – 2025’ ಹಾಗೂ ಚಲೋ ಕಲಬುರಗಿ ರ‍್ಯಾಲಿಯನ್ನು ರಾಜ್ಯದ ಎಡ, ದಲಿತ, ಕಾರ್ಮಿಕ, ಮಹಿಳಾ ಮತ್ತು ಬಸವಾದಿ ಸೇರಿದಂತೆ ಸುಮಾರು 40 ಸಂಘಟನೆಗಳು ಜನವರಿ 17, 18 ಮತ್ತು 19ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿವೆ. ಈ ನಡುವೆ, ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳು ಕೂಡಾ ಜನವರಿ 29 ಮತ್ತು ಫೆಬ್ರವರಿ 6ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ವನ್ನು ಆಯೋಜಿಸಿವೆ.

ಸೌಹಾರ್ದ ಕರ್ನಾಟಕ ವೇದಿಕೆ ಆಯೋಜಿಸಿರುವ ಬಹುತ್ವ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಲು ಹಲವಾರು ಲಿಂಗಾಯತ ಮಠಾಧೀಶರು ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ, ಗದಗಿನ ತೋಂಟದ ಸಿದ್ಧರಾಮ ಸ್ವಾಮೀ, ಇಲಕಲ್ಲಿನ ಗುರುಮಹಾಂತ ಸ್ವಾಮೀ, ಗುರುಮಠಕಲ್‌ನ ಶಾಂತವೀರ ಸ್ವಾಮಿ, ಬಸವ ಕಲ್ಯಾಣದ ಗಂಗಾಂಬಿಕ ಅಕ್ಕ ಸೇರಿದಂತೆ ಹಲವಾರು ಪ್ರಮುಖರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 17 ರಂದು ಪ್ರಾರಂಭವಾಗಲಿರುವ ಬಹುತ್ವ ಸಂಸ್ಕೃತಿ ಉತ್ಸವವು ಸೌಹಾರ್ದ ಯಾತ್ರೆಯೊಂದಿಗೆ ಆರಂಭವಾಗಲಿದ್ದು, ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಮಹಾತ್ಮ ಬಸವೇಶ್ವರ ಮತ್ತು ಬಾಬಾಸಾಹೇಬರ ಪುತ್ಥಳಿ ಮಾರ್ಗವಾಗಿ ಖ್ವಾಜಾ ಬಂದೇನವಾಜ್ ದರ್ಗಾದವರೆಗೆ ಇದು ನಡೆಯಲಿದೆ. ಇದೇ ವೇಳೆ “ನಮ್ಮ ನಡಿಗೆ ಶರಣ, ಸಂತ, ಸೂಫಿ ಪ್ರಜ್ಞೆಯೆಡೆಗೆ” ಘೋಷಣೆಯಡಿಯಲ್ಲಿ ವಾಹನ ಜಾಥಾ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 18ರಂದು “ಭಾವೈಕ್ಯದ ಹೊನಲು: ಸಮನ್ವಯದ ಗಾಯನ ಗಮಲು” ಘೋಷಣೆಯಡಿ ದಿನವಿಡೀ ತತ್ವಪದ, ಸೂಫಿಪದ, ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಜನವರಿ 19ರಂದು ದಿನವಿಡೀ “ಬಹುತ್ವ ಭಾರತದ ಜಾಗ್ರತ ಅಭಿಯಾನ” ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ನಾಡಿನೆಲ್ಲೆಡೆಯಿಂದ ಸರ್ವಧರ್ಮಗಳ ನೇತಾರರು, ವಿಚಾರವಾದಿಗಳು, ಸಾಮಾಜಿಕ ಹೋರಾಟಗಾರರು, ಮಾನವಹಕ್ಕುಗಳ ಹೋರಾಟಗಾರರು, ನಾಡಿನ ದುಡಿಯುವ ವರ್ಗದ ಜನರು ಸಮಾವೇಶಗೊಂಡು ಸಮತೆ-ಮಮತೆಗಳ ಸಂದೇಶ ಸಾರಲಿದ್ದಾರೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಕಲಬುರಗಿಯು ಬಸವಕಲ್ಯಾಣದ ಹೆಬ್ಬಾಗಿಲು. ಶರಣಬಸವಪ್ಪನವರ ಕರ್ಮಭೂಮಿ ಮತ್ತು ಸೂಫಿಸಂತ ಖ್ವಾಜಾ ಬಂದೇನವಾಜ್‌ರ ಪ್ರಯೋಗ ಭೂಮಿ. ಕ್ರಿ.ಶ 1ನೇ ಶತಮಾನದಲ್ಲಿ ಚಿತ್ತಾಪೂರದ ಕನಗವಳ್ಳಿಯಲ್ಲಿ ನಿರ್ಮಿಸಲಾದ ಬೌದ್ಧ ಮಹಾಸ್ತೂಪವು ಸಾಮ್ರಾಟ್ ಅಶೋಕನ ಕಾಲದಲ್ಲಿ ಇದು ಬೌದ್ಧ ಭೂಮಿಯಾಗಿತ್ತು ಎಂಬುದನ್ನು ಸಾಕ್ಷೀಕರಿಸುತ್ತಿದೆ. ಅತ್ಯಂತ ಪ್ರಾಚೀನ ಕಾಲದಿಂದಲೂ ಹಲವು ಧರ್ಮ, ಜಾತಿ, ಮತ, ಪಂಥ ಮತ್ತು ಭಾಷೆಗಳ ಸಮ್ಮಿಲನಕ್ಕೆ ನೆಲೆಮನೆಯಾಗಿದೆ. ಧಾರ್ಮಿಕ ಸಾಮರಸ್ಯ, ಸಹಬಾಳ್ವೆ, ಮತ ಸಮನ್ವಯತೆಗೆ ಪ್ರಸಿದ್ಧಿಯಾಗಿರುವ ಈ ನಾಡು¸ ಸಾಂಸ್ಕೃತಿಕ ಬಹುತ್ವಕ್ಕೂ ಹೆಸರುವಾಸಿಯಾಗಿದೆ. ಇಂಥ ಕಲ್ಬುರ್ಗಿಯನ್ನು ಇತ್ತೀಚಿಗೆ ಕೋಮುವಾದೀಕರಣಗೊಳಿಸುವ ನಿಷ್ಫಲ ಪ್ರಯತ್ನಗಳು ನಡೆಯುತ್ತಿವೆ” ಎಂದು ಸಂಘಟಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

“ಉಗ್ರ ಹಿಂದುತ್ವವಾದಿಗಳು ಸಂಸ್ಕೃತಿ ಉತ್ಸವದ ನೆಪದಲ್ಲಿ ಏಕ ಸಂಸ್ಕೃತಿಯನ್ನು ಹೇರುತ್ತಾ ನಮ್ಮ ನಾಡಿನ ಭಾವೈಕ್ಯ ಪರಂಪರೆಯನ್ನು ಹಾಳು ಮಾಡಲು ಮುಂದಾಗುತ್ತಿದ್ದಾರೆ. ಇದಕ್ಕೆ ಉತ್ತರವೆಂಬಂತೆ ಕೆಲವು ಅಲ್ಪಸಂಖ್ಯಾತ ಮೂಲಭೂತವಾದಿಗಳು ಮತಾಂಧತೆಯಲ್ಲಿ ಮುಳುಗುತ್ತಿದ್ದಾರೆ. ಅತ್ಯಂತ ಅಪಾಯಕಾರಿ ಕೋಮು ಚಟುವಟಿಕೆಗಳು ಪ್ರಭುತ್ವ ಪ್ರೇರಿತ ಅಧಿಕಾರದ ಮೂಲಕ ನಡೆಯುತ್ತಿವೆ. ಈ ನಡೆಗಳು ನಮ್ಮ ಬದುಕನ್ನು ಇನ್ನಷ್ಟು ದುರ್ಬಲಗೊಳಿಸುತ್ತವೆ. ಈಗಾಗಲೇ ಬಡತನ, ಅಪೌಷ್ಟಿಕತೆ, ಅನಿಯಂತ್ರಿತ ವಲಸೆ, ನಿರುದ್ಯೋಗ, ಪ್ರಾದೇಶಿಕ ಅಸಮಾನತೆ, ಮೌಢ್ಯಗಳಿಂದ ನಲುಗುತ್ತಿರುವ ಜನಸಮುದಾಯಗಳನ್ನು ಮತ್ತಷ್ಟು ಪ್ರಪಾತಕ್ಕೆ ತಳ್ಳುತ್ತಿವೆ.” ಎಂದು ಅವರು ಹೇಳಿದ್ದಾರೆ.

“ಕೋಮುವಾದಿಗಳ ಆಕರ್ಷಕ ಮಾತುಗಳಿಗೆ ಮರುಳಾದ ನಮ್ಮ ಯುವಜನರು, ವಿಶೇಷವಾಗಿ ದಲಿತ, ಶೂದ್ರ ಮುಂತಾಗಿ ಹಿಂದುಳಿದ ಯುವಜನರು ಅವರು ತೋಡಿದ ಖೆಡ್ಡಾಗಳಿಗೆ ಬೀಳುತ್ತಿದ್ದಾರೆ. ಧಾರ್ಮಿಕ ದ್ವೇಷಗಳಿಂದ ಕೋಮುದಂಗೆಗಳಲ್ಲಿ ನಿರತರಾಗಿ ಕೇಸು ಹಾಕಿಸಿಕೊಂಡು ಒದ್ದಾಡುತ್ತಿದ್ದಾರೆ. ಹಿಂದೂ ನಾವೆಲ್ಲ ಒಂದು ಎನ್ನುತ್ತ ದಲಿತಾದಿ ಶೂದ್ರ ಬಡಮಕ್ಕಳನ್ನು ಮತಾಂಧತೆಯಲ್ಲಿ ಕೆರಳಿಸಿ ಅವರೆಲ್ಲರನ್ನು ಕ್ರಿಮಿನಲ್‌ಗಳಾಗಿಸುತ್ತಿದ್ದಾರೆ. ನಮ್ಮ ತರುಣ ಪೀಳಿಗೆ ಕೋಮುದ್ವೇಷದ ದಳ್ಳುರಿಗೆ ಸಿಲುಕದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಸಂಘಟಕರು ಹೇಳಿದ್ದಾರೆ.

ಇದನ್ನೂಓದಿ:  ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...