HomeUncategorizedಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ - 2025 ಹಾಗೂ ಚಲೋ ಕಲಬುರಗಿ...

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

- Advertisement -
- Advertisement -

ಏಕ ಸಂಸ್ಕೃತಿಯ ಹೇರಿಕೆಯ ವಿರುದ್ಧ ಕಲಬುರಗಿಯಲ್ಲಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ – 2025’ ಹಾಗೂ ಚಲೋ ಕಲಬುರಗಿ ರ‍್ಯಾಲಿಯನ್ನು ರಾಜ್ಯದ ಎಡ, ದಲಿತ, ಕಾರ್ಮಿಕ, ಮಹಿಳಾ ಮತ್ತು ಬಸವಾದಿ ಸೇರಿದಂತೆ ಸುಮಾರು 40 ಸಂಘಟನೆಗಳು ಜನವರಿ 17, 18 ಮತ್ತು 19ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿವೆ. ಈ ನಡುವೆ, ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳು ಕೂಡಾ ಜನವರಿ 29 ಮತ್ತು ಫೆಬ್ರವರಿ 6ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ವನ್ನು ಆಯೋಜಿಸಿವೆ.

ಸೌಹಾರ್ದ ಕರ್ನಾಟಕ ವೇದಿಕೆ ಆಯೋಜಿಸಿರುವ ಬಹುತ್ವ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಲು ಹಲವಾರು ಲಿಂಗಾಯತ ಮಠಾಧೀಶರು ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ, ಗದಗಿನ ತೋಂಟದ ಸಿದ್ಧರಾಮ ಸ್ವಾಮೀ, ಇಲಕಲ್ಲಿನ ಗುರುಮಹಾಂತ ಸ್ವಾಮೀ, ಗುರುಮಠಕಲ್‌ನ ಶಾಂತವೀರ ಸ್ವಾಮಿ, ಬಸವ ಕಲ್ಯಾಣದ ಗಂಗಾಂಬಿಕ ಅಕ್ಕ ಸೇರಿದಂತೆ ಹಲವಾರು ಪ್ರಮುಖರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 17 ರಂದು ಪ್ರಾರಂಭವಾಗಲಿರುವ ಬಹುತ್ವ ಸಂಸ್ಕೃತಿ ಉತ್ಸವವು ಸೌಹಾರ್ದ ಯಾತ್ರೆಯೊಂದಿಗೆ ಆರಂಭವಾಗಲಿದ್ದು, ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಮಹಾತ್ಮ ಬಸವೇಶ್ವರ ಮತ್ತು ಬಾಬಾಸಾಹೇಬರ ಪುತ್ಥಳಿ ಮಾರ್ಗವಾಗಿ ಖ್ವಾಜಾ ಬಂದೇನವಾಜ್ ದರ್ಗಾದವರೆಗೆ ಇದು ನಡೆಯಲಿದೆ. ಇದೇ ವೇಳೆ “ನಮ್ಮ ನಡಿಗೆ ಶರಣ, ಸಂತ, ಸೂಫಿ ಪ್ರಜ್ಞೆಯೆಡೆಗೆ” ಘೋಷಣೆಯಡಿಯಲ್ಲಿ ವಾಹನ ಜಾಥಾ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 18ರಂದು “ಭಾವೈಕ್ಯದ ಹೊನಲು: ಸಮನ್ವಯದ ಗಾಯನ ಗಮಲು” ಘೋಷಣೆಯಡಿ ದಿನವಿಡೀ ತತ್ವಪದ, ಸೂಫಿಪದ, ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಜನವರಿ 19ರಂದು ದಿನವಿಡೀ “ಬಹುತ್ವ ಭಾರತದ ಜಾಗ್ರತ ಅಭಿಯಾನ” ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ನಾಡಿನೆಲ್ಲೆಡೆಯಿಂದ ಸರ್ವಧರ್ಮಗಳ ನೇತಾರರು, ವಿಚಾರವಾದಿಗಳು, ಸಾಮಾಜಿಕ ಹೋರಾಟಗಾರರು, ಮಾನವಹಕ್ಕುಗಳ ಹೋರಾಟಗಾರರು, ನಾಡಿನ ದುಡಿಯುವ ವರ್ಗದ ಜನರು ಸಮಾವೇಶಗೊಂಡು ಸಮತೆ-ಮಮತೆಗಳ ಸಂದೇಶ ಸಾರಲಿದ್ದಾರೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಕಲಬುರಗಿಯು ಬಸವಕಲ್ಯಾಣದ ಹೆಬ್ಬಾಗಿಲು. ಶರಣಬಸವಪ್ಪನವರ ಕರ್ಮಭೂಮಿ ಮತ್ತು ಸೂಫಿಸಂತ ಖ್ವಾಜಾ ಬಂದೇನವಾಜ್‌ರ ಪ್ರಯೋಗ ಭೂಮಿ. ಕ್ರಿ.ಶ 1ನೇ ಶತಮಾನದಲ್ಲಿ ಚಿತ್ತಾಪೂರದ ಕನಗವಳ್ಳಿಯಲ್ಲಿ ನಿರ್ಮಿಸಲಾದ ಬೌದ್ಧ ಮಹಾಸ್ತೂಪವು ಸಾಮ್ರಾಟ್ ಅಶೋಕನ ಕಾಲದಲ್ಲಿ ಇದು ಬೌದ್ಧ ಭೂಮಿಯಾಗಿತ್ತು ಎಂಬುದನ್ನು ಸಾಕ್ಷೀಕರಿಸುತ್ತಿದೆ. ಅತ್ಯಂತ ಪ್ರಾಚೀನ ಕಾಲದಿಂದಲೂ ಹಲವು ಧರ್ಮ, ಜಾತಿ, ಮತ, ಪಂಥ ಮತ್ತು ಭಾಷೆಗಳ ಸಮ್ಮಿಲನಕ್ಕೆ ನೆಲೆಮನೆಯಾಗಿದೆ. ಧಾರ್ಮಿಕ ಸಾಮರಸ್ಯ, ಸಹಬಾಳ್ವೆ, ಮತ ಸಮನ್ವಯತೆಗೆ ಪ್ರಸಿದ್ಧಿಯಾಗಿರುವ ಈ ನಾಡು¸ ಸಾಂಸ್ಕೃತಿಕ ಬಹುತ್ವಕ್ಕೂ ಹೆಸರುವಾಸಿಯಾಗಿದೆ. ಇಂಥ ಕಲ್ಬುರ್ಗಿಯನ್ನು ಇತ್ತೀಚಿಗೆ ಕೋಮುವಾದೀಕರಣಗೊಳಿಸುವ ನಿಷ್ಫಲ ಪ್ರಯತ್ನಗಳು ನಡೆಯುತ್ತಿವೆ” ಎಂದು ಸಂಘಟಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

“ಉಗ್ರ ಹಿಂದುತ್ವವಾದಿಗಳು ಸಂಸ್ಕೃತಿ ಉತ್ಸವದ ನೆಪದಲ್ಲಿ ಏಕ ಸಂಸ್ಕೃತಿಯನ್ನು ಹೇರುತ್ತಾ ನಮ್ಮ ನಾಡಿನ ಭಾವೈಕ್ಯ ಪರಂಪರೆಯನ್ನು ಹಾಳು ಮಾಡಲು ಮುಂದಾಗುತ್ತಿದ್ದಾರೆ. ಇದಕ್ಕೆ ಉತ್ತರವೆಂಬಂತೆ ಕೆಲವು ಅಲ್ಪಸಂಖ್ಯಾತ ಮೂಲಭೂತವಾದಿಗಳು ಮತಾಂಧತೆಯಲ್ಲಿ ಮುಳುಗುತ್ತಿದ್ದಾರೆ. ಅತ್ಯಂತ ಅಪಾಯಕಾರಿ ಕೋಮು ಚಟುವಟಿಕೆಗಳು ಪ್ರಭುತ್ವ ಪ್ರೇರಿತ ಅಧಿಕಾರದ ಮೂಲಕ ನಡೆಯುತ್ತಿವೆ. ಈ ನಡೆಗಳು ನಮ್ಮ ಬದುಕನ್ನು ಇನ್ನಷ್ಟು ದುರ್ಬಲಗೊಳಿಸುತ್ತವೆ. ಈಗಾಗಲೇ ಬಡತನ, ಅಪೌಷ್ಟಿಕತೆ, ಅನಿಯಂತ್ರಿತ ವಲಸೆ, ನಿರುದ್ಯೋಗ, ಪ್ರಾದೇಶಿಕ ಅಸಮಾನತೆ, ಮೌಢ್ಯಗಳಿಂದ ನಲುಗುತ್ತಿರುವ ಜನಸಮುದಾಯಗಳನ್ನು ಮತ್ತಷ್ಟು ಪ್ರಪಾತಕ್ಕೆ ತಳ್ಳುತ್ತಿವೆ.” ಎಂದು ಅವರು ಹೇಳಿದ್ದಾರೆ.

“ಕೋಮುವಾದಿಗಳ ಆಕರ್ಷಕ ಮಾತುಗಳಿಗೆ ಮರುಳಾದ ನಮ್ಮ ಯುವಜನರು, ವಿಶೇಷವಾಗಿ ದಲಿತ, ಶೂದ್ರ ಮುಂತಾಗಿ ಹಿಂದುಳಿದ ಯುವಜನರು ಅವರು ತೋಡಿದ ಖೆಡ್ಡಾಗಳಿಗೆ ಬೀಳುತ್ತಿದ್ದಾರೆ. ಧಾರ್ಮಿಕ ದ್ವೇಷಗಳಿಂದ ಕೋಮುದಂಗೆಗಳಲ್ಲಿ ನಿರತರಾಗಿ ಕೇಸು ಹಾಕಿಸಿಕೊಂಡು ಒದ್ದಾಡುತ್ತಿದ್ದಾರೆ. ಹಿಂದೂ ನಾವೆಲ್ಲ ಒಂದು ಎನ್ನುತ್ತ ದಲಿತಾದಿ ಶೂದ್ರ ಬಡಮಕ್ಕಳನ್ನು ಮತಾಂಧತೆಯಲ್ಲಿ ಕೆರಳಿಸಿ ಅವರೆಲ್ಲರನ್ನು ಕ್ರಿಮಿನಲ್‌ಗಳಾಗಿಸುತ್ತಿದ್ದಾರೆ. ನಮ್ಮ ತರುಣ ಪೀಳಿಗೆ ಕೋಮುದ್ವೇಷದ ದಳ್ಳುರಿಗೆ ಸಿಲುಕದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಸಂಘಟಕರು ಹೇಳಿದ್ದಾರೆ.

ಇದನ್ನೂಓದಿ:  ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...