HomeUncategorizedಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ - 2025 ಹಾಗೂ ಚಲೋ ಕಲಬುರಗಿ...

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

- Advertisement -
- Advertisement -

ಏಕ ಸಂಸ್ಕೃತಿಯ ಹೇರಿಕೆಯ ವಿರುದ್ಧ ಕಲಬುರಗಿಯಲ್ಲಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ – 2025’ ಹಾಗೂ ಚಲೋ ಕಲಬುರಗಿ ರ‍್ಯಾಲಿಯನ್ನು ರಾಜ್ಯದ ಎಡ, ದಲಿತ, ಕಾರ್ಮಿಕ, ಮಹಿಳಾ ಮತ್ತು ಬಸವಾದಿ ಸೇರಿದಂತೆ ಸುಮಾರು 40 ಸಂಘಟನೆಗಳು ಜನವರಿ 17, 18 ಮತ್ತು 19ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿವೆ. ಈ ನಡುವೆ, ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳು ಕೂಡಾ ಜನವರಿ 29 ಮತ್ತು ಫೆಬ್ರವರಿ 6ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ವನ್ನು ಆಯೋಜಿಸಿವೆ.

ಸೌಹಾರ್ದ ಕರ್ನಾಟಕ ವೇದಿಕೆ ಆಯೋಜಿಸಿರುವ ಬಹುತ್ವ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಲು ಹಲವಾರು ಲಿಂಗಾಯತ ಮಠಾಧೀಶರು ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ, ಗದಗಿನ ತೋಂಟದ ಸಿದ್ಧರಾಮ ಸ್ವಾಮೀ, ಇಲಕಲ್ಲಿನ ಗುರುಮಹಾಂತ ಸ್ವಾಮೀ, ಗುರುಮಠಕಲ್‌ನ ಶಾಂತವೀರ ಸ್ವಾಮಿ, ಬಸವ ಕಲ್ಯಾಣದ ಗಂಗಾಂಬಿಕ ಅಕ್ಕ ಸೇರಿದಂತೆ ಹಲವಾರು ಪ್ರಮುಖರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 17 ರಂದು ಪ್ರಾರಂಭವಾಗಲಿರುವ ಬಹುತ್ವ ಸಂಸ್ಕೃತಿ ಉತ್ಸವವು ಸೌಹಾರ್ದ ಯಾತ್ರೆಯೊಂದಿಗೆ ಆರಂಭವಾಗಲಿದ್ದು, ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಮಹಾತ್ಮ ಬಸವೇಶ್ವರ ಮತ್ತು ಬಾಬಾಸಾಹೇಬರ ಪುತ್ಥಳಿ ಮಾರ್ಗವಾಗಿ ಖ್ವಾಜಾ ಬಂದೇನವಾಜ್ ದರ್ಗಾದವರೆಗೆ ಇದು ನಡೆಯಲಿದೆ. ಇದೇ ವೇಳೆ “ನಮ್ಮ ನಡಿಗೆ ಶರಣ, ಸಂತ, ಸೂಫಿ ಪ್ರಜ್ಞೆಯೆಡೆಗೆ” ಘೋಷಣೆಯಡಿಯಲ್ಲಿ ವಾಹನ ಜಾಥಾ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 18ರಂದು “ಭಾವೈಕ್ಯದ ಹೊನಲು: ಸಮನ್ವಯದ ಗಾಯನ ಗಮಲು” ಘೋಷಣೆಯಡಿ ದಿನವಿಡೀ ತತ್ವಪದ, ಸೂಫಿಪದ, ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಜನವರಿ 19ರಂದು ದಿನವಿಡೀ “ಬಹುತ್ವ ಭಾರತದ ಜಾಗ್ರತ ಅಭಿಯಾನ” ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ನಾಡಿನೆಲ್ಲೆಡೆಯಿಂದ ಸರ್ವಧರ್ಮಗಳ ನೇತಾರರು, ವಿಚಾರವಾದಿಗಳು, ಸಾಮಾಜಿಕ ಹೋರಾಟಗಾರರು, ಮಾನವಹಕ್ಕುಗಳ ಹೋರಾಟಗಾರರು, ನಾಡಿನ ದುಡಿಯುವ ವರ್ಗದ ಜನರು ಸಮಾವೇಶಗೊಂಡು ಸಮತೆ-ಮಮತೆಗಳ ಸಂದೇಶ ಸಾರಲಿದ್ದಾರೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಕಲಬುರಗಿಯು ಬಸವಕಲ್ಯಾಣದ ಹೆಬ್ಬಾಗಿಲು. ಶರಣಬಸವಪ್ಪನವರ ಕರ್ಮಭೂಮಿ ಮತ್ತು ಸೂಫಿಸಂತ ಖ್ವಾಜಾ ಬಂದೇನವಾಜ್‌ರ ಪ್ರಯೋಗ ಭೂಮಿ. ಕ್ರಿ.ಶ 1ನೇ ಶತಮಾನದಲ್ಲಿ ಚಿತ್ತಾಪೂರದ ಕನಗವಳ್ಳಿಯಲ್ಲಿ ನಿರ್ಮಿಸಲಾದ ಬೌದ್ಧ ಮಹಾಸ್ತೂಪವು ಸಾಮ್ರಾಟ್ ಅಶೋಕನ ಕಾಲದಲ್ಲಿ ಇದು ಬೌದ್ಧ ಭೂಮಿಯಾಗಿತ್ತು ಎಂಬುದನ್ನು ಸಾಕ್ಷೀಕರಿಸುತ್ತಿದೆ. ಅತ್ಯಂತ ಪ್ರಾಚೀನ ಕಾಲದಿಂದಲೂ ಹಲವು ಧರ್ಮ, ಜಾತಿ, ಮತ, ಪಂಥ ಮತ್ತು ಭಾಷೆಗಳ ಸಮ್ಮಿಲನಕ್ಕೆ ನೆಲೆಮನೆಯಾಗಿದೆ. ಧಾರ್ಮಿಕ ಸಾಮರಸ್ಯ, ಸಹಬಾಳ್ವೆ, ಮತ ಸಮನ್ವಯತೆಗೆ ಪ್ರಸಿದ್ಧಿಯಾಗಿರುವ ಈ ನಾಡು¸ ಸಾಂಸ್ಕೃತಿಕ ಬಹುತ್ವಕ್ಕೂ ಹೆಸರುವಾಸಿಯಾಗಿದೆ. ಇಂಥ ಕಲ್ಬುರ್ಗಿಯನ್ನು ಇತ್ತೀಚಿಗೆ ಕೋಮುವಾದೀಕರಣಗೊಳಿಸುವ ನಿಷ್ಫಲ ಪ್ರಯತ್ನಗಳು ನಡೆಯುತ್ತಿವೆ” ಎಂದು ಸಂಘಟಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

“ಉಗ್ರ ಹಿಂದುತ್ವವಾದಿಗಳು ಸಂಸ್ಕೃತಿ ಉತ್ಸವದ ನೆಪದಲ್ಲಿ ಏಕ ಸಂಸ್ಕೃತಿಯನ್ನು ಹೇರುತ್ತಾ ನಮ್ಮ ನಾಡಿನ ಭಾವೈಕ್ಯ ಪರಂಪರೆಯನ್ನು ಹಾಳು ಮಾಡಲು ಮುಂದಾಗುತ್ತಿದ್ದಾರೆ. ಇದಕ್ಕೆ ಉತ್ತರವೆಂಬಂತೆ ಕೆಲವು ಅಲ್ಪಸಂಖ್ಯಾತ ಮೂಲಭೂತವಾದಿಗಳು ಮತಾಂಧತೆಯಲ್ಲಿ ಮುಳುಗುತ್ತಿದ್ದಾರೆ. ಅತ್ಯಂತ ಅಪಾಯಕಾರಿ ಕೋಮು ಚಟುವಟಿಕೆಗಳು ಪ್ರಭುತ್ವ ಪ್ರೇರಿತ ಅಧಿಕಾರದ ಮೂಲಕ ನಡೆಯುತ್ತಿವೆ. ಈ ನಡೆಗಳು ನಮ್ಮ ಬದುಕನ್ನು ಇನ್ನಷ್ಟು ದುರ್ಬಲಗೊಳಿಸುತ್ತವೆ. ಈಗಾಗಲೇ ಬಡತನ, ಅಪೌಷ್ಟಿಕತೆ, ಅನಿಯಂತ್ರಿತ ವಲಸೆ, ನಿರುದ್ಯೋಗ, ಪ್ರಾದೇಶಿಕ ಅಸಮಾನತೆ, ಮೌಢ್ಯಗಳಿಂದ ನಲುಗುತ್ತಿರುವ ಜನಸಮುದಾಯಗಳನ್ನು ಮತ್ತಷ್ಟು ಪ್ರಪಾತಕ್ಕೆ ತಳ್ಳುತ್ತಿವೆ.” ಎಂದು ಅವರು ಹೇಳಿದ್ದಾರೆ.

“ಕೋಮುವಾದಿಗಳ ಆಕರ್ಷಕ ಮಾತುಗಳಿಗೆ ಮರುಳಾದ ನಮ್ಮ ಯುವಜನರು, ವಿಶೇಷವಾಗಿ ದಲಿತ, ಶೂದ್ರ ಮುಂತಾಗಿ ಹಿಂದುಳಿದ ಯುವಜನರು ಅವರು ತೋಡಿದ ಖೆಡ್ಡಾಗಳಿಗೆ ಬೀಳುತ್ತಿದ್ದಾರೆ. ಧಾರ್ಮಿಕ ದ್ವೇಷಗಳಿಂದ ಕೋಮುದಂಗೆಗಳಲ್ಲಿ ನಿರತರಾಗಿ ಕೇಸು ಹಾಕಿಸಿಕೊಂಡು ಒದ್ದಾಡುತ್ತಿದ್ದಾರೆ. ಹಿಂದೂ ನಾವೆಲ್ಲ ಒಂದು ಎನ್ನುತ್ತ ದಲಿತಾದಿ ಶೂದ್ರ ಬಡಮಕ್ಕಳನ್ನು ಮತಾಂಧತೆಯಲ್ಲಿ ಕೆರಳಿಸಿ ಅವರೆಲ್ಲರನ್ನು ಕ್ರಿಮಿನಲ್‌ಗಳಾಗಿಸುತ್ತಿದ್ದಾರೆ. ನಮ್ಮ ತರುಣ ಪೀಳಿಗೆ ಕೋಮುದ್ವೇಷದ ದಳ್ಳುರಿಗೆ ಸಿಲುಕದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಸಂಘಟಕರು ಹೇಳಿದ್ದಾರೆ.

ಇದನ್ನೂಓದಿ:  ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...