HomeUncategorizedಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ - 2025 ಹಾಗೂ ಚಲೋ ಕಲಬುರಗಿ...

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

- Advertisement -
- Advertisement -

ಏಕ ಸಂಸ್ಕೃತಿಯ ಹೇರಿಕೆಯ ವಿರುದ್ಧ ಕಲಬುರಗಿಯಲ್ಲಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ – 2025’ ಹಾಗೂ ಚಲೋ ಕಲಬುರಗಿ ರ‍್ಯಾಲಿಯನ್ನು ರಾಜ್ಯದ ಎಡ, ದಲಿತ, ಕಾರ್ಮಿಕ, ಮಹಿಳಾ ಮತ್ತು ಬಸವಾದಿ ಸೇರಿದಂತೆ ಸುಮಾರು 40 ಸಂಘಟನೆಗಳು ಜನವರಿ 17, 18 ಮತ್ತು 19ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿವೆ. ಈ ನಡುವೆ, ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳು ಕೂಡಾ ಜನವರಿ 29 ಮತ್ತು ಫೆಬ್ರವರಿ 6ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ವನ್ನು ಆಯೋಜಿಸಿವೆ.

ಸೌಹಾರ್ದ ಕರ್ನಾಟಕ ವೇದಿಕೆ ಆಯೋಜಿಸಿರುವ ಬಹುತ್ವ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಲು ಹಲವಾರು ಲಿಂಗಾಯತ ಮಠಾಧೀಶರು ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ, ಗದಗಿನ ತೋಂಟದ ಸಿದ್ಧರಾಮ ಸ್ವಾಮೀ, ಇಲಕಲ್ಲಿನ ಗುರುಮಹಾಂತ ಸ್ವಾಮೀ, ಗುರುಮಠಕಲ್‌ನ ಶಾಂತವೀರ ಸ್ವಾಮಿ, ಬಸವ ಕಲ್ಯಾಣದ ಗಂಗಾಂಬಿಕ ಅಕ್ಕ ಸೇರಿದಂತೆ ಹಲವಾರು ಪ್ರಮುಖರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 17 ರಂದು ಪ್ರಾರಂಭವಾಗಲಿರುವ ಬಹುತ್ವ ಸಂಸ್ಕೃತಿ ಉತ್ಸವವು ಸೌಹಾರ್ದ ಯಾತ್ರೆಯೊಂದಿಗೆ ಆರಂಭವಾಗಲಿದ್ದು, ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಮಹಾತ್ಮ ಬಸವೇಶ್ವರ ಮತ್ತು ಬಾಬಾಸಾಹೇಬರ ಪುತ್ಥಳಿ ಮಾರ್ಗವಾಗಿ ಖ್ವಾಜಾ ಬಂದೇನವಾಜ್ ದರ್ಗಾದವರೆಗೆ ಇದು ನಡೆಯಲಿದೆ. ಇದೇ ವೇಳೆ “ನಮ್ಮ ನಡಿಗೆ ಶರಣ, ಸಂತ, ಸೂಫಿ ಪ್ರಜ್ಞೆಯೆಡೆಗೆ” ಘೋಷಣೆಯಡಿಯಲ್ಲಿ ವಾಹನ ಜಾಥಾ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 18ರಂದು “ಭಾವೈಕ್ಯದ ಹೊನಲು: ಸಮನ್ವಯದ ಗಾಯನ ಗಮಲು” ಘೋಷಣೆಯಡಿ ದಿನವಿಡೀ ತತ್ವಪದ, ಸೂಫಿಪದ, ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಜನವರಿ 19ರಂದು ದಿನವಿಡೀ “ಬಹುತ್ವ ಭಾರತದ ಜಾಗ್ರತ ಅಭಿಯಾನ” ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ನಾಡಿನೆಲ್ಲೆಡೆಯಿಂದ ಸರ್ವಧರ್ಮಗಳ ನೇತಾರರು, ವಿಚಾರವಾದಿಗಳು, ಸಾಮಾಜಿಕ ಹೋರಾಟಗಾರರು, ಮಾನವಹಕ್ಕುಗಳ ಹೋರಾಟಗಾರರು, ನಾಡಿನ ದುಡಿಯುವ ವರ್ಗದ ಜನರು ಸಮಾವೇಶಗೊಂಡು ಸಮತೆ-ಮಮತೆಗಳ ಸಂದೇಶ ಸಾರಲಿದ್ದಾರೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಕಲಬುರಗಿಯು ಬಸವಕಲ್ಯಾಣದ ಹೆಬ್ಬಾಗಿಲು. ಶರಣಬಸವಪ್ಪನವರ ಕರ್ಮಭೂಮಿ ಮತ್ತು ಸೂಫಿಸಂತ ಖ್ವಾಜಾ ಬಂದೇನವಾಜ್‌ರ ಪ್ರಯೋಗ ಭೂಮಿ. ಕ್ರಿ.ಶ 1ನೇ ಶತಮಾನದಲ್ಲಿ ಚಿತ್ತಾಪೂರದ ಕನಗವಳ್ಳಿಯಲ್ಲಿ ನಿರ್ಮಿಸಲಾದ ಬೌದ್ಧ ಮಹಾಸ್ತೂಪವು ಸಾಮ್ರಾಟ್ ಅಶೋಕನ ಕಾಲದಲ್ಲಿ ಇದು ಬೌದ್ಧ ಭೂಮಿಯಾಗಿತ್ತು ಎಂಬುದನ್ನು ಸಾಕ್ಷೀಕರಿಸುತ್ತಿದೆ. ಅತ್ಯಂತ ಪ್ರಾಚೀನ ಕಾಲದಿಂದಲೂ ಹಲವು ಧರ್ಮ, ಜಾತಿ, ಮತ, ಪಂಥ ಮತ್ತು ಭಾಷೆಗಳ ಸಮ್ಮಿಲನಕ್ಕೆ ನೆಲೆಮನೆಯಾಗಿದೆ. ಧಾರ್ಮಿಕ ಸಾಮರಸ್ಯ, ಸಹಬಾಳ್ವೆ, ಮತ ಸಮನ್ವಯತೆಗೆ ಪ್ರಸಿದ್ಧಿಯಾಗಿರುವ ಈ ನಾಡು¸ ಸಾಂಸ್ಕೃತಿಕ ಬಹುತ್ವಕ್ಕೂ ಹೆಸರುವಾಸಿಯಾಗಿದೆ. ಇಂಥ ಕಲ್ಬುರ್ಗಿಯನ್ನು ಇತ್ತೀಚಿಗೆ ಕೋಮುವಾದೀಕರಣಗೊಳಿಸುವ ನಿಷ್ಫಲ ಪ್ರಯತ್ನಗಳು ನಡೆಯುತ್ತಿವೆ” ಎಂದು ಸಂಘಟಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

“ಉಗ್ರ ಹಿಂದುತ್ವವಾದಿಗಳು ಸಂಸ್ಕೃತಿ ಉತ್ಸವದ ನೆಪದಲ್ಲಿ ಏಕ ಸಂಸ್ಕೃತಿಯನ್ನು ಹೇರುತ್ತಾ ನಮ್ಮ ನಾಡಿನ ಭಾವೈಕ್ಯ ಪರಂಪರೆಯನ್ನು ಹಾಳು ಮಾಡಲು ಮುಂದಾಗುತ್ತಿದ್ದಾರೆ. ಇದಕ್ಕೆ ಉತ್ತರವೆಂಬಂತೆ ಕೆಲವು ಅಲ್ಪಸಂಖ್ಯಾತ ಮೂಲಭೂತವಾದಿಗಳು ಮತಾಂಧತೆಯಲ್ಲಿ ಮುಳುಗುತ್ತಿದ್ದಾರೆ. ಅತ್ಯಂತ ಅಪಾಯಕಾರಿ ಕೋಮು ಚಟುವಟಿಕೆಗಳು ಪ್ರಭುತ್ವ ಪ್ರೇರಿತ ಅಧಿಕಾರದ ಮೂಲಕ ನಡೆಯುತ್ತಿವೆ. ಈ ನಡೆಗಳು ನಮ್ಮ ಬದುಕನ್ನು ಇನ್ನಷ್ಟು ದುರ್ಬಲಗೊಳಿಸುತ್ತವೆ. ಈಗಾಗಲೇ ಬಡತನ, ಅಪೌಷ್ಟಿಕತೆ, ಅನಿಯಂತ್ರಿತ ವಲಸೆ, ನಿರುದ್ಯೋಗ, ಪ್ರಾದೇಶಿಕ ಅಸಮಾನತೆ, ಮೌಢ್ಯಗಳಿಂದ ನಲುಗುತ್ತಿರುವ ಜನಸಮುದಾಯಗಳನ್ನು ಮತ್ತಷ್ಟು ಪ್ರಪಾತಕ್ಕೆ ತಳ್ಳುತ್ತಿವೆ.” ಎಂದು ಅವರು ಹೇಳಿದ್ದಾರೆ.

“ಕೋಮುವಾದಿಗಳ ಆಕರ್ಷಕ ಮಾತುಗಳಿಗೆ ಮರುಳಾದ ನಮ್ಮ ಯುವಜನರು, ವಿಶೇಷವಾಗಿ ದಲಿತ, ಶೂದ್ರ ಮುಂತಾಗಿ ಹಿಂದುಳಿದ ಯುವಜನರು ಅವರು ತೋಡಿದ ಖೆಡ್ಡಾಗಳಿಗೆ ಬೀಳುತ್ತಿದ್ದಾರೆ. ಧಾರ್ಮಿಕ ದ್ವೇಷಗಳಿಂದ ಕೋಮುದಂಗೆಗಳಲ್ಲಿ ನಿರತರಾಗಿ ಕೇಸು ಹಾಕಿಸಿಕೊಂಡು ಒದ್ದಾಡುತ್ತಿದ್ದಾರೆ. ಹಿಂದೂ ನಾವೆಲ್ಲ ಒಂದು ಎನ್ನುತ್ತ ದಲಿತಾದಿ ಶೂದ್ರ ಬಡಮಕ್ಕಳನ್ನು ಮತಾಂಧತೆಯಲ್ಲಿ ಕೆರಳಿಸಿ ಅವರೆಲ್ಲರನ್ನು ಕ್ರಿಮಿನಲ್‌ಗಳಾಗಿಸುತ್ತಿದ್ದಾರೆ. ನಮ್ಮ ತರುಣ ಪೀಳಿಗೆ ಕೋಮುದ್ವೇಷದ ದಳ್ಳುರಿಗೆ ಸಿಲುಕದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಸಂಘಟಕರು ಹೇಳಿದ್ದಾರೆ.

ಇದನ್ನೂಓದಿ:  ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...