HomeUncategorizedಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ - 2025 ಹಾಗೂ ಚಲೋ ಕಲಬುರಗಿ...

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

- Advertisement -
- Advertisement -

ಏಕ ಸಂಸ್ಕೃತಿಯ ಹೇರಿಕೆಯ ವಿರುದ್ಧ ಕಲಬುರಗಿಯಲ್ಲಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ – 2025’ ಹಾಗೂ ಚಲೋ ಕಲಬುರಗಿ ರ‍್ಯಾಲಿಯನ್ನು ರಾಜ್ಯದ ಎಡ, ದಲಿತ, ಕಾರ್ಮಿಕ, ಮಹಿಳಾ ಮತ್ತು ಬಸವಾದಿ ಸೇರಿದಂತೆ ಸುಮಾರು 40 ಸಂಘಟನೆಗಳು ಜನವರಿ 17, 18 ಮತ್ತು 19ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿವೆ. ಈ ನಡುವೆ, ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳು ಕೂಡಾ ಜನವರಿ 29 ಮತ್ತು ಫೆಬ್ರವರಿ 6ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ವನ್ನು ಆಯೋಜಿಸಿವೆ.

ಸೌಹಾರ್ದ ಕರ್ನಾಟಕ ವೇದಿಕೆ ಆಯೋಜಿಸಿರುವ ಬಹುತ್ವ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಲು ಹಲವಾರು ಲಿಂಗಾಯತ ಮಠಾಧೀಶರು ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ, ಗದಗಿನ ತೋಂಟದ ಸಿದ್ಧರಾಮ ಸ್ವಾಮೀ, ಇಲಕಲ್ಲಿನ ಗುರುಮಹಾಂತ ಸ್ವಾಮೀ, ಗುರುಮಠಕಲ್‌ನ ಶಾಂತವೀರ ಸ್ವಾಮಿ, ಬಸವ ಕಲ್ಯಾಣದ ಗಂಗಾಂಬಿಕ ಅಕ್ಕ ಸೇರಿದಂತೆ ಹಲವಾರು ಪ್ರಮುಖರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 17 ರಂದು ಪ್ರಾರಂಭವಾಗಲಿರುವ ಬಹುತ್ವ ಸಂಸ್ಕೃತಿ ಉತ್ಸವವು ಸೌಹಾರ್ದ ಯಾತ್ರೆಯೊಂದಿಗೆ ಆರಂಭವಾಗಲಿದ್ದು, ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಮಹಾತ್ಮ ಬಸವೇಶ್ವರ ಮತ್ತು ಬಾಬಾಸಾಹೇಬರ ಪುತ್ಥಳಿ ಮಾರ್ಗವಾಗಿ ಖ್ವಾಜಾ ಬಂದೇನವಾಜ್ ದರ್ಗಾದವರೆಗೆ ಇದು ನಡೆಯಲಿದೆ. ಇದೇ ವೇಳೆ “ನಮ್ಮ ನಡಿಗೆ ಶರಣ, ಸಂತ, ಸೂಫಿ ಪ್ರಜ್ಞೆಯೆಡೆಗೆ” ಘೋಷಣೆಯಡಿಯಲ್ಲಿ ವಾಹನ ಜಾಥಾ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 18ರಂದು “ಭಾವೈಕ್ಯದ ಹೊನಲು: ಸಮನ್ವಯದ ಗಾಯನ ಗಮಲು” ಘೋಷಣೆಯಡಿ ದಿನವಿಡೀ ತತ್ವಪದ, ಸೂಫಿಪದ, ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಜನವರಿ 19ರಂದು ದಿನವಿಡೀ “ಬಹುತ್ವ ಭಾರತದ ಜಾಗ್ರತ ಅಭಿಯಾನ” ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ನಾಡಿನೆಲ್ಲೆಡೆಯಿಂದ ಸರ್ವಧರ್ಮಗಳ ನೇತಾರರು, ವಿಚಾರವಾದಿಗಳು, ಸಾಮಾಜಿಕ ಹೋರಾಟಗಾರರು, ಮಾನವಹಕ್ಕುಗಳ ಹೋರಾಟಗಾರರು, ನಾಡಿನ ದುಡಿಯುವ ವರ್ಗದ ಜನರು ಸಮಾವೇಶಗೊಂಡು ಸಮತೆ-ಮಮತೆಗಳ ಸಂದೇಶ ಸಾರಲಿದ್ದಾರೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಕಲಬುರಗಿಯು ಬಸವಕಲ್ಯಾಣದ ಹೆಬ್ಬಾಗಿಲು. ಶರಣಬಸವಪ್ಪನವರ ಕರ್ಮಭೂಮಿ ಮತ್ತು ಸೂಫಿಸಂತ ಖ್ವಾಜಾ ಬಂದೇನವಾಜ್‌ರ ಪ್ರಯೋಗ ಭೂಮಿ. ಕ್ರಿ.ಶ 1ನೇ ಶತಮಾನದಲ್ಲಿ ಚಿತ್ತಾಪೂರದ ಕನಗವಳ್ಳಿಯಲ್ಲಿ ನಿರ್ಮಿಸಲಾದ ಬೌದ್ಧ ಮಹಾಸ್ತೂಪವು ಸಾಮ್ರಾಟ್ ಅಶೋಕನ ಕಾಲದಲ್ಲಿ ಇದು ಬೌದ್ಧ ಭೂಮಿಯಾಗಿತ್ತು ಎಂಬುದನ್ನು ಸಾಕ್ಷೀಕರಿಸುತ್ತಿದೆ. ಅತ್ಯಂತ ಪ್ರಾಚೀನ ಕಾಲದಿಂದಲೂ ಹಲವು ಧರ್ಮ, ಜಾತಿ, ಮತ, ಪಂಥ ಮತ್ತು ಭಾಷೆಗಳ ಸಮ್ಮಿಲನಕ್ಕೆ ನೆಲೆಮನೆಯಾಗಿದೆ. ಧಾರ್ಮಿಕ ಸಾಮರಸ್ಯ, ಸಹಬಾಳ್ವೆ, ಮತ ಸಮನ್ವಯತೆಗೆ ಪ್ರಸಿದ್ಧಿಯಾಗಿರುವ ಈ ನಾಡು¸ ಸಾಂಸ್ಕೃತಿಕ ಬಹುತ್ವಕ್ಕೂ ಹೆಸರುವಾಸಿಯಾಗಿದೆ. ಇಂಥ ಕಲ್ಬುರ್ಗಿಯನ್ನು ಇತ್ತೀಚಿಗೆ ಕೋಮುವಾದೀಕರಣಗೊಳಿಸುವ ನಿಷ್ಫಲ ಪ್ರಯತ್ನಗಳು ನಡೆಯುತ್ತಿವೆ” ಎಂದು ಸಂಘಟಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

“ಉಗ್ರ ಹಿಂದುತ್ವವಾದಿಗಳು ಸಂಸ್ಕೃತಿ ಉತ್ಸವದ ನೆಪದಲ್ಲಿ ಏಕ ಸಂಸ್ಕೃತಿಯನ್ನು ಹೇರುತ್ತಾ ನಮ್ಮ ನಾಡಿನ ಭಾವೈಕ್ಯ ಪರಂಪರೆಯನ್ನು ಹಾಳು ಮಾಡಲು ಮುಂದಾಗುತ್ತಿದ್ದಾರೆ. ಇದಕ್ಕೆ ಉತ್ತರವೆಂಬಂತೆ ಕೆಲವು ಅಲ್ಪಸಂಖ್ಯಾತ ಮೂಲಭೂತವಾದಿಗಳು ಮತಾಂಧತೆಯಲ್ಲಿ ಮುಳುಗುತ್ತಿದ್ದಾರೆ. ಅತ್ಯಂತ ಅಪಾಯಕಾರಿ ಕೋಮು ಚಟುವಟಿಕೆಗಳು ಪ್ರಭುತ್ವ ಪ್ರೇರಿತ ಅಧಿಕಾರದ ಮೂಲಕ ನಡೆಯುತ್ತಿವೆ. ಈ ನಡೆಗಳು ನಮ್ಮ ಬದುಕನ್ನು ಇನ್ನಷ್ಟು ದುರ್ಬಲಗೊಳಿಸುತ್ತವೆ. ಈಗಾಗಲೇ ಬಡತನ, ಅಪೌಷ್ಟಿಕತೆ, ಅನಿಯಂತ್ರಿತ ವಲಸೆ, ನಿರುದ್ಯೋಗ, ಪ್ರಾದೇಶಿಕ ಅಸಮಾನತೆ, ಮೌಢ್ಯಗಳಿಂದ ನಲುಗುತ್ತಿರುವ ಜನಸಮುದಾಯಗಳನ್ನು ಮತ್ತಷ್ಟು ಪ್ರಪಾತಕ್ಕೆ ತಳ್ಳುತ್ತಿವೆ.” ಎಂದು ಅವರು ಹೇಳಿದ್ದಾರೆ.

“ಕೋಮುವಾದಿಗಳ ಆಕರ್ಷಕ ಮಾತುಗಳಿಗೆ ಮರುಳಾದ ನಮ್ಮ ಯುವಜನರು, ವಿಶೇಷವಾಗಿ ದಲಿತ, ಶೂದ್ರ ಮುಂತಾಗಿ ಹಿಂದುಳಿದ ಯುವಜನರು ಅವರು ತೋಡಿದ ಖೆಡ್ಡಾಗಳಿಗೆ ಬೀಳುತ್ತಿದ್ದಾರೆ. ಧಾರ್ಮಿಕ ದ್ವೇಷಗಳಿಂದ ಕೋಮುದಂಗೆಗಳಲ್ಲಿ ನಿರತರಾಗಿ ಕೇಸು ಹಾಕಿಸಿಕೊಂಡು ಒದ್ದಾಡುತ್ತಿದ್ದಾರೆ. ಹಿಂದೂ ನಾವೆಲ್ಲ ಒಂದು ಎನ್ನುತ್ತ ದಲಿತಾದಿ ಶೂದ್ರ ಬಡಮಕ್ಕಳನ್ನು ಮತಾಂಧತೆಯಲ್ಲಿ ಕೆರಳಿಸಿ ಅವರೆಲ್ಲರನ್ನು ಕ್ರಿಮಿನಲ್‌ಗಳಾಗಿಸುತ್ತಿದ್ದಾರೆ. ನಮ್ಮ ತರುಣ ಪೀಳಿಗೆ ಕೋಮುದ್ವೇಷದ ದಳ್ಳುರಿಗೆ ಸಿಲುಕದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಸಂಘಟಕರು ಹೇಳಿದ್ದಾರೆ.

ಇದನ್ನೂಓದಿ:  ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...