HomeUncategorizedಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ - 2025 ಹಾಗೂ ಚಲೋ ಕಲಬುರಗಿ...

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

- Advertisement -
- Advertisement -

ಏಕ ಸಂಸ್ಕೃತಿಯ ಹೇರಿಕೆಯ ವಿರುದ್ಧ ಕಲಬುರಗಿಯಲ್ಲಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ – 2025’ ಹಾಗೂ ಚಲೋ ಕಲಬುರಗಿ ರ‍್ಯಾಲಿಯನ್ನು ರಾಜ್ಯದ ಎಡ, ದಲಿತ, ಕಾರ್ಮಿಕ, ಮಹಿಳಾ ಮತ್ತು ಬಸವಾದಿ ಸೇರಿದಂತೆ ಸುಮಾರು 40 ಸಂಘಟನೆಗಳು ಜನವರಿ 17, 18 ಮತ್ತು 19ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿವೆ. ಈ ನಡುವೆ, ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳು ಕೂಡಾ ಜನವರಿ 29 ಮತ್ತು ಫೆಬ್ರವರಿ 6ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ವನ್ನು ಆಯೋಜಿಸಿವೆ.

ಸೌಹಾರ್ದ ಕರ್ನಾಟಕ ವೇದಿಕೆ ಆಯೋಜಿಸಿರುವ ಬಹುತ್ವ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಲು ಹಲವಾರು ಲಿಂಗಾಯತ ಮಠಾಧೀಶರು ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ, ಗದಗಿನ ತೋಂಟದ ಸಿದ್ಧರಾಮ ಸ್ವಾಮೀ, ಇಲಕಲ್ಲಿನ ಗುರುಮಹಾಂತ ಸ್ವಾಮೀ, ಗುರುಮಠಕಲ್‌ನ ಶಾಂತವೀರ ಸ್ವಾಮಿ, ಬಸವ ಕಲ್ಯಾಣದ ಗಂಗಾಂಬಿಕ ಅಕ್ಕ ಸೇರಿದಂತೆ ಹಲವಾರು ಪ್ರಮುಖರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 17 ರಂದು ಪ್ರಾರಂಭವಾಗಲಿರುವ ಬಹುತ್ವ ಸಂಸ್ಕೃತಿ ಉತ್ಸವವು ಸೌಹಾರ್ದ ಯಾತ್ರೆಯೊಂದಿಗೆ ಆರಂಭವಾಗಲಿದ್ದು, ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಮಹಾತ್ಮ ಬಸವೇಶ್ವರ ಮತ್ತು ಬಾಬಾಸಾಹೇಬರ ಪುತ್ಥಳಿ ಮಾರ್ಗವಾಗಿ ಖ್ವಾಜಾ ಬಂದೇನವಾಜ್ ದರ್ಗಾದವರೆಗೆ ಇದು ನಡೆಯಲಿದೆ. ಇದೇ ವೇಳೆ “ನಮ್ಮ ನಡಿಗೆ ಶರಣ, ಸಂತ, ಸೂಫಿ ಪ್ರಜ್ಞೆಯೆಡೆಗೆ” ಘೋಷಣೆಯಡಿಯಲ್ಲಿ ವಾಹನ ಜಾಥಾ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 18ರಂದು “ಭಾವೈಕ್ಯದ ಹೊನಲು: ಸಮನ್ವಯದ ಗಾಯನ ಗಮಲು” ಘೋಷಣೆಯಡಿ ದಿನವಿಡೀ ತತ್ವಪದ, ಸೂಫಿಪದ, ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಜನವರಿ 19ರಂದು ದಿನವಿಡೀ “ಬಹುತ್ವ ಭಾರತದ ಜಾಗ್ರತ ಅಭಿಯಾನ” ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ನಾಡಿನೆಲ್ಲೆಡೆಯಿಂದ ಸರ್ವಧರ್ಮಗಳ ನೇತಾರರು, ವಿಚಾರವಾದಿಗಳು, ಸಾಮಾಜಿಕ ಹೋರಾಟಗಾರರು, ಮಾನವಹಕ್ಕುಗಳ ಹೋರಾಟಗಾರರು, ನಾಡಿನ ದುಡಿಯುವ ವರ್ಗದ ಜನರು ಸಮಾವೇಶಗೊಂಡು ಸಮತೆ-ಮಮತೆಗಳ ಸಂದೇಶ ಸಾರಲಿದ್ದಾರೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಕಲಬುರಗಿಯು ಬಸವಕಲ್ಯಾಣದ ಹೆಬ್ಬಾಗಿಲು. ಶರಣಬಸವಪ್ಪನವರ ಕರ್ಮಭೂಮಿ ಮತ್ತು ಸೂಫಿಸಂತ ಖ್ವಾಜಾ ಬಂದೇನವಾಜ್‌ರ ಪ್ರಯೋಗ ಭೂಮಿ. ಕ್ರಿ.ಶ 1ನೇ ಶತಮಾನದಲ್ಲಿ ಚಿತ್ತಾಪೂರದ ಕನಗವಳ್ಳಿಯಲ್ಲಿ ನಿರ್ಮಿಸಲಾದ ಬೌದ್ಧ ಮಹಾಸ್ತೂಪವು ಸಾಮ್ರಾಟ್ ಅಶೋಕನ ಕಾಲದಲ್ಲಿ ಇದು ಬೌದ್ಧ ಭೂಮಿಯಾಗಿತ್ತು ಎಂಬುದನ್ನು ಸಾಕ್ಷೀಕರಿಸುತ್ತಿದೆ. ಅತ್ಯಂತ ಪ್ರಾಚೀನ ಕಾಲದಿಂದಲೂ ಹಲವು ಧರ್ಮ, ಜಾತಿ, ಮತ, ಪಂಥ ಮತ್ತು ಭಾಷೆಗಳ ಸಮ್ಮಿಲನಕ್ಕೆ ನೆಲೆಮನೆಯಾಗಿದೆ. ಧಾರ್ಮಿಕ ಸಾಮರಸ್ಯ, ಸಹಬಾಳ್ವೆ, ಮತ ಸಮನ್ವಯತೆಗೆ ಪ್ರಸಿದ್ಧಿಯಾಗಿರುವ ಈ ನಾಡು¸ ಸಾಂಸ್ಕೃತಿಕ ಬಹುತ್ವಕ್ಕೂ ಹೆಸರುವಾಸಿಯಾಗಿದೆ. ಇಂಥ ಕಲ್ಬುರ್ಗಿಯನ್ನು ಇತ್ತೀಚಿಗೆ ಕೋಮುವಾದೀಕರಣಗೊಳಿಸುವ ನಿಷ್ಫಲ ಪ್ರಯತ್ನಗಳು ನಡೆಯುತ್ತಿವೆ” ಎಂದು ಸಂಘಟಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

“ಉಗ್ರ ಹಿಂದುತ್ವವಾದಿಗಳು ಸಂಸ್ಕೃತಿ ಉತ್ಸವದ ನೆಪದಲ್ಲಿ ಏಕ ಸಂಸ್ಕೃತಿಯನ್ನು ಹೇರುತ್ತಾ ನಮ್ಮ ನಾಡಿನ ಭಾವೈಕ್ಯ ಪರಂಪರೆಯನ್ನು ಹಾಳು ಮಾಡಲು ಮುಂದಾಗುತ್ತಿದ್ದಾರೆ. ಇದಕ್ಕೆ ಉತ್ತರವೆಂಬಂತೆ ಕೆಲವು ಅಲ್ಪಸಂಖ್ಯಾತ ಮೂಲಭೂತವಾದಿಗಳು ಮತಾಂಧತೆಯಲ್ಲಿ ಮುಳುಗುತ್ತಿದ್ದಾರೆ. ಅತ್ಯಂತ ಅಪಾಯಕಾರಿ ಕೋಮು ಚಟುವಟಿಕೆಗಳು ಪ್ರಭುತ್ವ ಪ್ರೇರಿತ ಅಧಿಕಾರದ ಮೂಲಕ ನಡೆಯುತ್ತಿವೆ. ಈ ನಡೆಗಳು ನಮ್ಮ ಬದುಕನ್ನು ಇನ್ನಷ್ಟು ದುರ್ಬಲಗೊಳಿಸುತ್ತವೆ. ಈಗಾಗಲೇ ಬಡತನ, ಅಪೌಷ್ಟಿಕತೆ, ಅನಿಯಂತ್ರಿತ ವಲಸೆ, ನಿರುದ್ಯೋಗ, ಪ್ರಾದೇಶಿಕ ಅಸಮಾನತೆ, ಮೌಢ್ಯಗಳಿಂದ ನಲುಗುತ್ತಿರುವ ಜನಸಮುದಾಯಗಳನ್ನು ಮತ್ತಷ್ಟು ಪ್ರಪಾತಕ್ಕೆ ತಳ್ಳುತ್ತಿವೆ.” ಎಂದು ಅವರು ಹೇಳಿದ್ದಾರೆ.

“ಕೋಮುವಾದಿಗಳ ಆಕರ್ಷಕ ಮಾತುಗಳಿಗೆ ಮರುಳಾದ ನಮ್ಮ ಯುವಜನರು, ವಿಶೇಷವಾಗಿ ದಲಿತ, ಶೂದ್ರ ಮುಂತಾಗಿ ಹಿಂದುಳಿದ ಯುವಜನರು ಅವರು ತೋಡಿದ ಖೆಡ್ಡಾಗಳಿಗೆ ಬೀಳುತ್ತಿದ್ದಾರೆ. ಧಾರ್ಮಿಕ ದ್ವೇಷಗಳಿಂದ ಕೋಮುದಂಗೆಗಳಲ್ಲಿ ನಿರತರಾಗಿ ಕೇಸು ಹಾಕಿಸಿಕೊಂಡು ಒದ್ದಾಡುತ್ತಿದ್ದಾರೆ. ಹಿಂದೂ ನಾವೆಲ್ಲ ಒಂದು ಎನ್ನುತ್ತ ದಲಿತಾದಿ ಶೂದ್ರ ಬಡಮಕ್ಕಳನ್ನು ಮತಾಂಧತೆಯಲ್ಲಿ ಕೆರಳಿಸಿ ಅವರೆಲ್ಲರನ್ನು ಕ್ರಿಮಿನಲ್‌ಗಳಾಗಿಸುತ್ತಿದ್ದಾರೆ. ನಮ್ಮ ತರುಣ ಪೀಳಿಗೆ ಕೋಮುದ್ವೇಷದ ದಳ್ಳುರಿಗೆ ಸಿಲುಕದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಸಂಘಟಕರು ಹೇಳಿದ್ದಾರೆ.

ಇದನ್ನೂಓದಿ:  ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...