Homeಕರ್ನಾಟಕ'ಚೀನಾ' ಎಂಬ ಪದದ ಉಚ್ಚಾರಣೆಗೂ ಪ್ರಧಾನಿ ಭಯಪಡುತ್ತಿದ್ದಾರೆ: ಕಾಂಗ್ರೆಸ್ ಟೀಕೆ

‘ಚೀನಾ’ ಎಂಬ ಪದದ ಉಚ್ಚಾರಣೆಗೂ ಪ್ರಧಾನಿ ಭಯಪಡುತ್ತಿದ್ದಾರೆ: ಕಾಂಗ್ರೆಸ್ ಟೀಕೆ

- Advertisement -
- Advertisement -

ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರವನ್ನು ಒಳಗೊಂಡಿರುವ 2023ರ ಮ್ಯಾಪ್‌ನ್ನು ಚೀನಾ ಸೋಮವಾರ ಬಿಡುಗಡೆ ಮಾಡಿದೆ. ಈ ಬಗ್ಗೆ ಪ್ರಧಾನಿ ಮೋದಿ ಮೌನವಾಗಿರುವುದನ್ನು ಟೀಕಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ‘ಚೀನಾ’ ಎಂಬ ಪದದ ಉಚ್ಚಾರಣೆಗೂ ಪ್ರಧಾನಿ ಭಯಪಡುತ್ತಿದ್ದಾರೆ ಎಂದು ಟೀಕೆ ಮಾಡಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಚೀನಾ ಮತ್ತೊಮ್ಮೆ ಭಾರತವನ್ನು ಕೆಣಕುತ್ತಿದೆ, ಚೀನಾದೆಡೆಗೆ ಕೆಂಗಣ್ಣು ಬಿಡಬೇಕಿದ್ದ ಪ್ರಧಾನಿಯವರು ‘ಚೀನಾ’ ಎಂಬ ಪದದ ಉಚ್ಚಾರಣೆಗೂ ಭಯಪಡುತ್ತಿದ್ದಾರೆ. ಭಾರತದ ಪ್ರದೇಶಗಳಾದ ಅರುಣಾಚಲಪ್ರದೇಶ, ಅಕ್ಸಾಯ್ ಚಿನ್, ಲಡಾಕ್ ಚೀನಾ ತನ್ನ ನಕ್ಷೆಯಲ್ಲಿ ಸೇರಿಸಿ ಬಿಡುಗಡೆ ಮಾಡಿದ್ದರೂ 56 ಇಂಚಿನ ಎದೆಯವರು ಮೌನ ಮುರಿಯದಿರುವುದೇಕೆ? ಚೀನಾ ಪ್ರತಿ ವರ್ಷವೂ ಭಾರತದ ನೆಲವನ್ನು ಆಕ್ರಮಿಸುತ್ತಾ ಮುಂದೆ ಬರುತ್ತಿದ್ದರೂ ಕೇಂದ್ರ ಸರ್ಕಾರ ಕೈ ಕಟ್ಟಿ ಕುಳಿತಿರುವುದೇಕೆ?” ಎಂದು ತರಾಟೆ ತೆಗೆದುಕೊಂಡಿದೆ.

ಚೀನಾ ಬಿಡುಗಡೆ ಮಾಡಿದ ಹೊಸ ಮ್ಯಾಪ್‌ನ ಬಗ್ಗೆ ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದಾರೆ.

”ಲಡಾಖ್‌ನಲ್ಲಿ ಒಂದು ಇಂಚು ಭೂಮಿಯೂ ನಷ್ಟವಾಗಿಲ್ಲ ಎಂದು ಪ್ರಧಾನಿ ಹೇಳಿದ್ದು ಸುಳ್ಳು ಎಂದು ನಾನು ವರ್ಷಗಳಿಂದ ಹೇಳುತ್ತಿದ್ದೇನೆ. ಚೀನಾ ಭೂಮಿ ಅತಿಕ್ರಮಿಸಿದೆ ಎಂದು ಇಡೀ ಲಡಾಖ್‌ಗೆ ತಿಳಿದಿದೆ. ಈ ನಕ್ಷೆಯ ವಿಷಯವು ತುಂಬಾ ಗಂಭೀರವಾಗಿದೆ. ಅವರು ನಮ್ಮ ಭೂಮಿಯನ್ನು ಕಿತ್ತುಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಪ್ರತಿಕ್ರಿಯಿಸಬೇಕು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಗ್ಲೋಬಲ್ ಟೈಮ್ಸ್ ಪ್ರದರ್ಶಿಸಿದ ನಕ್ಷೆಯು ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಳ್ಳುವ ಅರುಣಾಚಲ ಪ್ರದೇಶ ಮತ್ತು 1962ರ ಯುದ್ಧದಲ್ಲಿ ಆಕ್ರಮಿಸಿಕೊಂಡ ಅಕ್ಸಾಯ್ ಚಿನ್‌ನ್ನು ಚೀನಾದ ಭಾಗವಾಗಿ ತೋರಿಸಿದೆ. ನಕ್ಷೆಯಲ್ಲಿ ಇದಲ್ಲದೆ ಚೀನಾದ ಭೂಪ್ರದೇಶವಾಗಿ ತೈವಾನ್ ದ್ವೀಪ ಮತ್ತು ದಕ್ಷಿಣ ಚೀನಾ ಸಮುದ್ರದ ಹೆಚ್ಚಿನ ಭಾಗವನ್ನು ತೋರಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ನಕ್ಷೆಗೆ ಪ್ರಾಮುಖ್ಯತೆ ಕೊಡಬೇಕಾಗಿಲ್ಲ ಮತ್ತು ಚೀನಾವು ಅಂತಹ ನಕ್ಷೆಗಳನ್ನು ಬಿಡುಗಡೆ ಮಾಡುವ  ಕೆಟ್ಟ ಅಭ್ಯಾಸ ಹೊಂದಿದೆ ಎಂದು ಹೇಳಿದರು.

ಚೀನಾವು ತಮ್ಮದಲ್ಲದ ಪ್ರದೇಶಗಳ ನಕ್ಷೆಗಳನ್ನು ಹಾಕಿದೆ. ಇದು ಹಳೆಯ ಅಭ್ಯಾಸ. ಕೇವಲ ಭಾರತದ ಕೆಲವು ಭಾಗಗಳೊಂದಿಗೆ ನಕ್ಷೆಗಳನ್ನು ಹಾಕುವುದರಿಂದ ಏನೂ ಬದಲಾಗುವುದಿಲ್ಲ. ನಮ್ಮ ಭೂಭಾಗದ ಬಗ್ಗೆ ಸರಕಾರಕ್ಕೆ ಸರಿಯಾಗಿ ತಿಳಿದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿರೋಧ ಪಕ್ಷದಲ್ಲಿದ್ದಾಗ ಚೀನಾ ವಿರುದ್ಧ ಕೆಂಡಕಾರುತ್ತಿದ್ದ ಪ್ರಧಾನಿ ಈಗ ಏನು ಮಾಡುತ್ತಿದ್ದಾರೆ?: ಮೋದಿ ವಿರುದ್ಧ ಸಿಬಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...