Homeಕರ್ನಾಟಕ'ಚೀನಾ' ಎಂಬ ಪದದ ಉಚ್ಚಾರಣೆಗೂ ಪ್ರಧಾನಿ ಭಯಪಡುತ್ತಿದ್ದಾರೆ: ಕಾಂಗ್ರೆಸ್ ಟೀಕೆ

‘ಚೀನಾ’ ಎಂಬ ಪದದ ಉಚ್ಚಾರಣೆಗೂ ಪ್ರಧಾನಿ ಭಯಪಡುತ್ತಿದ್ದಾರೆ: ಕಾಂಗ್ರೆಸ್ ಟೀಕೆ

- Advertisement -
- Advertisement -

ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರವನ್ನು ಒಳಗೊಂಡಿರುವ 2023ರ ಮ್ಯಾಪ್‌ನ್ನು ಚೀನಾ ಸೋಮವಾರ ಬಿಡುಗಡೆ ಮಾಡಿದೆ. ಈ ಬಗ್ಗೆ ಪ್ರಧಾನಿ ಮೋದಿ ಮೌನವಾಗಿರುವುದನ್ನು ಟೀಕಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ‘ಚೀನಾ’ ಎಂಬ ಪದದ ಉಚ್ಚಾರಣೆಗೂ ಪ್ರಧಾನಿ ಭಯಪಡುತ್ತಿದ್ದಾರೆ ಎಂದು ಟೀಕೆ ಮಾಡಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಚೀನಾ ಮತ್ತೊಮ್ಮೆ ಭಾರತವನ್ನು ಕೆಣಕುತ್ತಿದೆ, ಚೀನಾದೆಡೆಗೆ ಕೆಂಗಣ್ಣು ಬಿಡಬೇಕಿದ್ದ ಪ್ರಧಾನಿಯವರು ‘ಚೀನಾ’ ಎಂಬ ಪದದ ಉಚ್ಚಾರಣೆಗೂ ಭಯಪಡುತ್ತಿದ್ದಾರೆ. ಭಾರತದ ಪ್ರದೇಶಗಳಾದ ಅರುಣಾಚಲಪ್ರದೇಶ, ಅಕ್ಸಾಯ್ ಚಿನ್, ಲಡಾಕ್ ಚೀನಾ ತನ್ನ ನಕ್ಷೆಯಲ್ಲಿ ಸೇರಿಸಿ ಬಿಡುಗಡೆ ಮಾಡಿದ್ದರೂ 56 ಇಂಚಿನ ಎದೆಯವರು ಮೌನ ಮುರಿಯದಿರುವುದೇಕೆ? ಚೀನಾ ಪ್ರತಿ ವರ್ಷವೂ ಭಾರತದ ನೆಲವನ್ನು ಆಕ್ರಮಿಸುತ್ತಾ ಮುಂದೆ ಬರುತ್ತಿದ್ದರೂ ಕೇಂದ್ರ ಸರ್ಕಾರ ಕೈ ಕಟ್ಟಿ ಕುಳಿತಿರುವುದೇಕೆ?” ಎಂದು ತರಾಟೆ ತೆಗೆದುಕೊಂಡಿದೆ.

ಚೀನಾ ಬಿಡುಗಡೆ ಮಾಡಿದ ಹೊಸ ಮ್ಯಾಪ್‌ನ ಬಗ್ಗೆ ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದಾರೆ.

”ಲಡಾಖ್‌ನಲ್ಲಿ ಒಂದು ಇಂಚು ಭೂಮಿಯೂ ನಷ್ಟವಾಗಿಲ್ಲ ಎಂದು ಪ್ರಧಾನಿ ಹೇಳಿದ್ದು ಸುಳ್ಳು ಎಂದು ನಾನು ವರ್ಷಗಳಿಂದ ಹೇಳುತ್ತಿದ್ದೇನೆ. ಚೀನಾ ಭೂಮಿ ಅತಿಕ್ರಮಿಸಿದೆ ಎಂದು ಇಡೀ ಲಡಾಖ್‌ಗೆ ತಿಳಿದಿದೆ. ಈ ನಕ್ಷೆಯ ವಿಷಯವು ತುಂಬಾ ಗಂಭೀರವಾಗಿದೆ. ಅವರು ನಮ್ಮ ಭೂಮಿಯನ್ನು ಕಿತ್ತುಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಪ್ರತಿಕ್ರಿಯಿಸಬೇಕು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಗ್ಲೋಬಲ್ ಟೈಮ್ಸ್ ಪ್ರದರ್ಶಿಸಿದ ನಕ್ಷೆಯು ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಳ್ಳುವ ಅರುಣಾಚಲ ಪ್ರದೇಶ ಮತ್ತು 1962ರ ಯುದ್ಧದಲ್ಲಿ ಆಕ್ರಮಿಸಿಕೊಂಡ ಅಕ್ಸಾಯ್ ಚಿನ್‌ನ್ನು ಚೀನಾದ ಭಾಗವಾಗಿ ತೋರಿಸಿದೆ. ನಕ್ಷೆಯಲ್ಲಿ ಇದಲ್ಲದೆ ಚೀನಾದ ಭೂಪ್ರದೇಶವಾಗಿ ತೈವಾನ್ ದ್ವೀಪ ಮತ್ತು ದಕ್ಷಿಣ ಚೀನಾ ಸಮುದ್ರದ ಹೆಚ್ಚಿನ ಭಾಗವನ್ನು ತೋರಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ನಕ್ಷೆಗೆ ಪ್ರಾಮುಖ್ಯತೆ ಕೊಡಬೇಕಾಗಿಲ್ಲ ಮತ್ತು ಚೀನಾವು ಅಂತಹ ನಕ್ಷೆಗಳನ್ನು ಬಿಡುಗಡೆ ಮಾಡುವ  ಕೆಟ್ಟ ಅಭ್ಯಾಸ ಹೊಂದಿದೆ ಎಂದು ಹೇಳಿದರು.

ಚೀನಾವು ತಮ್ಮದಲ್ಲದ ಪ್ರದೇಶಗಳ ನಕ್ಷೆಗಳನ್ನು ಹಾಕಿದೆ. ಇದು ಹಳೆಯ ಅಭ್ಯಾಸ. ಕೇವಲ ಭಾರತದ ಕೆಲವು ಭಾಗಗಳೊಂದಿಗೆ ನಕ್ಷೆಗಳನ್ನು ಹಾಕುವುದರಿಂದ ಏನೂ ಬದಲಾಗುವುದಿಲ್ಲ. ನಮ್ಮ ಭೂಭಾಗದ ಬಗ್ಗೆ ಸರಕಾರಕ್ಕೆ ಸರಿಯಾಗಿ ತಿಳಿದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿರೋಧ ಪಕ್ಷದಲ್ಲಿದ್ದಾಗ ಚೀನಾ ವಿರುದ್ಧ ಕೆಂಡಕಾರುತ್ತಿದ್ದ ಪ್ರಧಾನಿ ಈಗ ಏನು ಮಾಡುತ್ತಿದ್ದಾರೆ?: ಮೋದಿ ವಿರುದ್ಧ ಸಿಬಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...