Homeಕರೋನಾ ತಲ್ಲಣಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಭಾರತದ ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ. ಅವರು ನಮ್ಮ ದೇಶವನ್ನು ನಿರಾಶೆಗೊಳಿಸಿದರು ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ, ಕೋವಿಡ್ ನಿರ್ವಹಣೆಯ ಕುರಿತು ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈಗ ಸಂಭವಿಸಿರುವ ಕೋವಿಡ್ ದುರಂತಗಳಿಗೆ ಯಾರು ಜವಾಬ್ದಾರಿ (ಜಿಮ್ಮೆದಾರ್ ಕೌನ್) ಎಂಬ ಆಂದೋಲನ ಆರಂಭಿಸಿರುವ ಅವರು, “ಭಾರತದಲ್ಲಿ ನಾಯಕತ್ವದ ಬಿಕ್ಕಟ್ಟು ಮತ್ತು ಸಾಂಕ್ರಾಮಿಕ ಸಮಯದಲ್ಲಿ ಪ್ರಧಾನಮಂತ್ರಿಯವರ ಆಡಳಿತದ ಅಸಮರ್ಥತೆಯನ್ನು ಇಡೀ ಜಗತ್ತು ಕಂಡಿದೆ ಎಂದು ಪ್ರತಿಪಾದಿಸಿದ್ದಾರೆ.

ಕೋವಿಡ್ ಎರಡನೇ ಅಲೆ ಅಪ್ಪಳಿಸಿದಾಗ ಅವರು ಹಿಂದೆ ಸರಿದರು ಮತ್ತು ಅತಿ ಕೆಟ್ಟ ಕಾಲ ತಾನಾಗಿಯೇ ಸರಿದು ಹೋಗಲು ಕಾದು ಕುಳಿತರು. ಈ ರೀತಿಯಾಗಿ ತಾವೊಬ್ಬ ಹೇಡಿ ಎಂಬುದನ್ನು ತೋರಿಸಿಕೊಟ್ಟರು ಎಂದು ಪ್ರಿಯಾಂಕ ಆರೋಪಿಸಿದ್ದಾರೆ.

“ಪ್ರಧಾನಿಗಳಿಗೆ ಭಾರತೀಯರು ಮುಖ್ಯವಲ್ಲ, ರಾಜಕೀಯ ಮುಖ್ಯ. ಅವರಿಗೆ ಸತ್ಯ ಮುಖ್ಯವಲ್ಲ ಪ್ರೊಪಗಂಡಾ ಮುಖ್ಯ. ಭಾರತದಲ್ಲಿ ಸಂಭವಿಸಿದ ಸಾವು ನೋವುಗಳಿಗೆ ಯಾರು ಹೊಣೆ ಎಂದು ಭಾರತೀಯರೆಲ್ಲರೂ ಕೇಳುವ ಸಮಯ ಬಂದಿದೆ” ಎಂದು ಅವರು ಬರೆದ ಪತ್ರದಲ್ಲಿ ಕಟುವಾಗಿ ಟೀಕಿಸಿದ್ದಾರೆ.

ಬಿಕ್ಕಟ್ಟಿನ ಸಮಯದಲ್ಲಿ ಸತ್ಯವನ್ನು ಎದುರಿಸುವುದು, ಜವಾಬ್ದಾರಿಯನ್ನು ಹೊತ್ತುಕೊಳ್ಳುವುದು ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳುವುದು ಉತ್ತಮ ಆಡಳಿತ. ದುರದೃಷ್ಟವಶಾತ್, ಮೋದಿ ಸರ್ಕಾರ ಇವುಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಬದಲಿಗೆ, ಸಾಂಕ್ರಾಮಿಕ ರೋಗದ ಆರಂಭದಿಂದಲೂ, ಇದು ಸತ್ಯವನ್ನು ಮರೆಮಾಚಲು ಮತ್ತು ಜವಾಬ್ದಾರಿಯಿಂದ ತಪ್ಪಿಸಲು ಎಲ್ಲ ಪ್ರಯತ್ನಗಳನ್ನು ಮಾಡಿತು” ಎಂದು ಅವರು ಆರೋಪಿಸಿದ್ದಾರೆ.

“ಇದರ ಪರಿಣಾಮವಾಗಿ, ಎರಡನೇ ಅಲೆಯೂ ಅಪ್ಪಳಿಸಿದಾಗ ಸರ್ಕಾರವು ನಿಷ್ಕ್ರಿಯ ಸ್ಥಿತಿಗೆ ಇಳಿಯಿತು. ಈ ನಿಷ್ಕ್ರಿಯತೆಯು ವೈರಸ್ ಹೆಚ್ಚು ಉಗ್ರತೆಯಿಂದ ಹರಡಲು ಮತ್ತು ವಿವರಿಸಲಾಗದ ಸಾವು ನೋವುಗಳಿಗೆ ಕಾರಣವಾಯಿತು” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಭಾರತ ಮತ್ತು ಪ್ರಪಂಚದಾದ್ಯಂತದ ತಜ್ಞರು ನೀಡಿದ ಅಸಂಖ್ಯಾತ ಎಚ್ಚರಿಕೆಗಳನ್ನು ಪ್ರಧಾನಿ ಕೇಳಿಸಿಕೊಂಡಿದ್ದರೆ ಅಥವಾ ಆರೋಗ್ಯ ಸಂಸದೀಯ ಸಮಿತಿಯ ಶಿಫಾರಸುಗಳನ್ನು ಆಲಿಸಿದ್ದರೆ ನಾವು ಬೆಡ್, ಆಮ್ಲಜನಕ, ಔಷಧಿಗಳಿಗಾಗಿ ಒದ್ದಾಡಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ. ಲಸಿಕೆಗಳನ್ನು ವಿದೇಶಕ್ಕೆ ಕಳಿಸದೇ ಇದ್ದಿದ್ದರೆ ಭಾರತದ ಇನ್ನಷ್ಟು ಜೀವಗಳನ್ನು ಉಳಿಸಬಹುದಿತ್ತು ಎಂದು ಅವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...