Homeಕರೋನಾ ತಲ್ಲಣಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಭಾರತದ ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ. ಅವರು ನಮ್ಮ ದೇಶವನ್ನು ನಿರಾಶೆಗೊಳಿಸಿದರು ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ, ಕೋವಿಡ್ ನಿರ್ವಹಣೆಯ ಕುರಿತು ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈಗ ಸಂಭವಿಸಿರುವ ಕೋವಿಡ್ ದುರಂತಗಳಿಗೆ ಯಾರು ಜವಾಬ್ದಾರಿ (ಜಿಮ್ಮೆದಾರ್ ಕೌನ್) ಎಂಬ ಆಂದೋಲನ ಆರಂಭಿಸಿರುವ ಅವರು, “ಭಾರತದಲ್ಲಿ ನಾಯಕತ್ವದ ಬಿಕ್ಕಟ್ಟು ಮತ್ತು ಸಾಂಕ್ರಾಮಿಕ ಸಮಯದಲ್ಲಿ ಪ್ರಧಾನಮಂತ್ರಿಯವರ ಆಡಳಿತದ ಅಸಮರ್ಥತೆಯನ್ನು ಇಡೀ ಜಗತ್ತು ಕಂಡಿದೆ ಎಂದು ಪ್ರತಿಪಾದಿಸಿದ್ದಾರೆ.

ಕೋವಿಡ್ ಎರಡನೇ ಅಲೆ ಅಪ್ಪಳಿಸಿದಾಗ ಅವರು ಹಿಂದೆ ಸರಿದರು ಮತ್ತು ಅತಿ ಕೆಟ್ಟ ಕಾಲ ತಾನಾಗಿಯೇ ಸರಿದು ಹೋಗಲು ಕಾದು ಕುಳಿತರು. ಈ ರೀತಿಯಾಗಿ ತಾವೊಬ್ಬ ಹೇಡಿ ಎಂಬುದನ್ನು ತೋರಿಸಿಕೊಟ್ಟರು ಎಂದು ಪ್ರಿಯಾಂಕ ಆರೋಪಿಸಿದ್ದಾರೆ.

“ಪ್ರಧಾನಿಗಳಿಗೆ ಭಾರತೀಯರು ಮುಖ್ಯವಲ್ಲ, ರಾಜಕೀಯ ಮುಖ್ಯ. ಅವರಿಗೆ ಸತ್ಯ ಮುಖ್ಯವಲ್ಲ ಪ್ರೊಪಗಂಡಾ ಮುಖ್ಯ. ಭಾರತದಲ್ಲಿ ಸಂಭವಿಸಿದ ಸಾವು ನೋವುಗಳಿಗೆ ಯಾರು ಹೊಣೆ ಎಂದು ಭಾರತೀಯರೆಲ್ಲರೂ ಕೇಳುವ ಸಮಯ ಬಂದಿದೆ” ಎಂದು ಅವರು ಬರೆದ ಪತ್ರದಲ್ಲಿ ಕಟುವಾಗಿ ಟೀಕಿಸಿದ್ದಾರೆ.

ಬಿಕ್ಕಟ್ಟಿನ ಸಮಯದಲ್ಲಿ ಸತ್ಯವನ್ನು ಎದುರಿಸುವುದು, ಜವಾಬ್ದಾರಿಯನ್ನು ಹೊತ್ತುಕೊಳ್ಳುವುದು ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳುವುದು ಉತ್ತಮ ಆಡಳಿತ. ದುರದೃಷ್ಟವಶಾತ್, ಮೋದಿ ಸರ್ಕಾರ ಇವುಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಬದಲಿಗೆ, ಸಾಂಕ್ರಾಮಿಕ ರೋಗದ ಆರಂಭದಿಂದಲೂ, ಇದು ಸತ್ಯವನ್ನು ಮರೆಮಾಚಲು ಮತ್ತು ಜವಾಬ್ದಾರಿಯಿಂದ ತಪ್ಪಿಸಲು ಎಲ್ಲ ಪ್ರಯತ್ನಗಳನ್ನು ಮಾಡಿತು” ಎಂದು ಅವರು ಆರೋಪಿಸಿದ್ದಾರೆ.

“ಇದರ ಪರಿಣಾಮವಾಗಿ, ಎರಡನೇ ಅಲೆಯೂ ಅಪ್ಪಳಿಸಿದಾಗ ಸರ್ಕಾರವು ನಿಷ್ಕ್ರಿಯ ಸ್ಥಿತಿಗೆ ಇಳಿಯಿತು. ಈ ನಿಷ್ಕ್ರಿಯತೆಯು ವೈರಸ್ ಹೆಚ್ಚು ಉಗ್ರತೆಯಿಂದ ಹರಡಲು ಮತ್ತು ವಿವರಿಸಲಾಗದ ಸಾವು ನೋವುಗಳಿಗೆ ಕಾರಣವಾಯಿತು” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಭಾರತ ಮತ್ತು ಪ್ರಪಂಚದಾದ್ಯಂತದ ತಜ್ಞರು ನೀಡಿದ ಅಸಂಖ್ಯಾತ ಎಚ್ಚರಿಕೆಗಳನ್ನು ಪ್ರಧಾನಿ ಕೇಳಿಸಿಕೊಂಡಿದ್ದರೆ ಅಥವಾ ಆರೋಗ್ಯ ಸಂಸದೀಯ ಸಮಿತಿಯ ಶಿಫಾರಸುಗಳನ್ನು ಆಲಿಸಿದ್ದರೆ ನಾವು ಬೆಡ್, ಆಮ್ಲಜನಕ, ಔಷಧಿಗಳಿಗಾಗಿ ಒದ್ದಾಡಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ. ಲಸಿಕೆಗಳನ್ನು ವಿದೇಶಕ್ಕೆ ಕಳಿಸದೇ ಇದ್ದಿದ್ದರೆ ಭಾರತದ ಇನ್ನಷ್ಟು ಜೀವಗಳನ್ನು ಉಳಿಸಬಹುದಿತ್ತು ಎಂದು ಅವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...