Homeಮುಖಪುಟಪ.ಬಂಗಾಳ ಚುನಾವಣೆ: AAP ಯ ದೆಹಲಿ ಮಾದರಿ ಪ್ರಚಾರ ತಂತ್ರ ಬಳಸಲಿರುವ ಮಮತಾ ಬ್ಯಾನರ್ಜಿ

ಪ.ಬಂಗಾಳ ಚುನಾವಣೆ: AAP ಯ ದೆಹಲಿ ಮಾದರಿ ಪ್ರಚಾರ ತಂತ್ರ ಬಳಸಲಿರುವ ಮಮತಾ ಬ್ಯಾನರ್ಜಿ

"ಪ್ರಚಾರದ ತಂತ್ರವಾಗಿ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬಳಸಿದ್ದ "ಅಭಿವೃದ್ಧಿ v/s ಹಿಂದುತ್ವ" ವಿಧಾನವನ್ನು ಬಳಸಿಕೊಳ್ಳುವುದಾಗಿ ತಿಳಿದುಬಂದಿದೆ"

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಇನ್ನೇನು ವಿಧಾನಸಭೆ ಚುನಾವಣೆ ಘೋಷಣೆಯಾಗಲಿದ್ದು, ಕೆಲವೇ ತಿಂಗಳಿನಲ್ಲಿ ಮತದಾನ ನಡೆಯಲಿದೆ. ಇದರ ಪ್ರಯುಕ್ತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಪ್ರಚಾರದ ತಂತ್ರವಾಗಿ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬಳಸಿದ್ದ “ಅಭಿವೃದ್ಧಿ v/s ಹಿಂದುತ್ವ” ವಿಧಾನವನ್ನು ಬಳಸಿಕೊಳ್ಳುವುದಾಗಿ ತಿಳಿದುಬಂದಿದೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಮಮತಾ ಬ್ಯಾನರ್ಜಿಯವರ ಸರ್ಕಾರ ಜಾರಿಗೆ ತಂದಿರುವ ಅಭಿವೃದ್ಧಿ ಯೋಜನೆಗಳನ್ನು ಎತ್ತಿತೋರಿಸುವ ಅಂಶಗಳನ್ನು 2021 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಅಳವಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಮಮತಾ ಬ್ಯಾನರ್ಜಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿರಬೇಕಾದ ನಿರ್ದಿಷ್ಟ ವಿಷಯಗಳ ಬಗ್ಗೆ ಗಮನಹರಿಸಲು ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ಕಾರ್ಯಕರ್ತರು, ಸಂಸದರು ಮತ್ತು ಶಾಸಕರಿಂದ ಸಲಹೆಗಳನ್ನು ಕೋರಿದ್ದಾರೆ.

“ದೆಹಲಿ ಚುನಾವಣೆಯಲ್ಲಿ ಬಿಜೆಪಿಯ ‘ಹಿಂದುತ್ವ’ದ ಆಕ್ರಮಣಕಾರಿ ಅಭಿಯಾನದ ವಿರುದ್ಧ ಅತ್ಯಂತ ಪರಿಣಾಮಕಾರಿಯಾಗಿದ್ದ ಆಪ್ ಪಕ್ಷದ ಪ್ರಚಾರದ ಮಾದರಿಯನ್ನು ನಾವು ಅನುಸರಿಸುತ್ತೇವೆ. ನಮ್ಮ ಪ್ರಣಾಳಿಕೆಯಲ್ಲಿ ಕಳೆದ 10 ವರ್ಷಗಳಲ್ಲಿ ಜಾರಿಗೆ ತರಲಾದ ಅಭಿವೃದ್ಧಿ ಯೋಜನೆಗಳನ್ನು ಎತ್ತಿತೋರಿಸುತ್ತೇವೆ. 2016 ರ ಚುನಾವಣೆಯಲ್ಲಿ ನಮ್ಮ ಪಕ್ಷ ಏನೇನು ಭರವಸೆಗಳನ್ನು ನೀಡಿತ್ತು ಮತ್ತು ಅದನ್ನು ಹೇಗೆ ನೆರವೇರಿಸಲಾಗಿದೆ ಎಂಬುದನ್ನು ಉಲ್ಲೇಖಿಸಲಿದ್ದೇವೆ” ಎಂದು ಟಿಎಂಸಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

2016 ರ ಚುನಾವಣೆಗೆ ಮೊದಲು ಘೋಷಿಸಲಾದ ಸರ್ಕಾರಿ ಯೋಜನೆಗಳನ್ನು ಪೂರ್ಣಗೊಳಿಸಲು ತೆಗೆದುಕೊಂಡ ಕಾಲಾವಕಾಶವನ್ನು ಸಹ ಈ ಪ್ರಣಾಳಿಕೆ ಉಲ್ಲೇಖಿಸುತ್ತದೆ.

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಅವರ ತಂಡ ನಡೆಸಿದ ಸಮೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಪ್ರಣಾಳಿಕೆ ರೂಪುಗೊಳ್ಳಲಿದ್ದು, ಇದರ ಪ್ರಕಾರ “ಬಿಜೆಪಿಯನ್ನು ಪ್ರಮುಖ ಪ್ರತಿಸ್ಪರ್ಧಿ ಎಂದು ಪರಿಗಣಿಸಿ ಪ್ರಣಾಳಿಕೆಯನ್ನು ವಿನ್ಯಾಸಗೊಳಿಸಲಾಗುವುದು. ಮತ್ತು ಬಿಜೆಪಿಯ ಒಡೆದು ಆಳುವ ನೀತಿಯನ್ನೂ ಸಹ ಉಲ್ಲೇಖಿಸಲಾಗುವುದು” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಾರ್ಯಕರ್ತರು ಮತ್ತು ಚುನಾಯಿತ ಪ್ರತಿನಿಧಿಗಳಿಂದ ಅಭಿಪ್ರಾಯವನ್ನು ಸಂಗ್ರಹಿಸಿದ ನಂತರ ಕರಡು ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಪೊಲೀಸರಿಂದ ಬೂಟು ನೆಕ್ಕಿಸುತ್ತೇವೆ ಎಂದ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...