Homeಕರೋನಾ ತಲ್ಲಣಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ-ಕೇರ್ಸ್ ಫಂಡ್ ಮತ್ತು ಪಿಎಂಎನ್‌ಆರ್‌ಎಫ್‌ಗೆ ಸಂಬಂಧಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ, ಪಿಎಂಒ 'ಕಾಯಿದೆಯ ಸೆಕ್ಷನ್ 7 (9) ರ ಅಡಿಯಲ್ಲಿ ನಿರ್ಬಂಧಗಳಿರುವುದರಿಂದ ನೀವು ಕೇಳಿದ ಮಾಹಿತಿಯನ್ನು ನೀಡಲಾಗುವುದಿಲ್ಲ' ಎಂದಿದೆ.

- Advertisement -
- Advertisement -

ಪಿಎಂ ಕೇರ್ಸ್ ನಿಧಿಯ ಬಳಕೆ ಬಗ್ಗೆ ಮಾಹಿತಿ ಕೇಳಿ ಹಲವಾರು ಅರ್ಜಿಗಳು ದಾಖಲಾಗಿರುವ ಸಂದರ್ಭದಲ್ಲಿ,  ಅಂತಹ ಮಾಹಿತಿ ಒದಗಿಸುವುದು “ಕಚೇರಿಯ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ” ಕಾರಣವಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ. ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮತ್ತು ಹೈಕೋರ್ಟ್‌, ಕೇಂದ್ರ ಮಾಹಿತಿ ಆಯೋಗದ ತೀರ್ಪುಗಳ ಹೊರತಾಗಿಯೂ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ದೇಣಿಗೆ ಸಂಗ್ರಹಕ್ಕಾಗಿ ಸ್ಥಾಪಿಸಲ್ಪಟ್ಟ ಪಿಎಂ ಕೇರ್ಸ್‌ ಕುರಿತು ಮಾಹಿತಿ ಕೇಳಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಸಾವಿರಾರು ಕೋಟಿ ರೂ ಹಣ ಸಂಗ್ರಹವಾಗಿದ್ದರೂ ಸಮರ್ಪಕ ಮಾಹಿತಿ ಒದಗಿಸಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಮಾಹಿತಿ ಹಕ್ಕು ಕಾಯ್ದೆ, 2005 ರ ಸೆಕ್ಷನ್ 2 (ಎಚ್) ಅಡಿಯಲ್ಲಿ ಈ ನಿಧಿ ಸಾರ್ವಜನಿಕ ಪ್ರಾಧಿಕಾರವಲ್ಲ ಎಂದು ಮೇ ತಿಂಗಳಿನಲ್ಲಿಯೇ ಪಿಎಂಒ ಹೇಳಿದೆ. ಆದ್ದರಿಂದ ಅರ್ಜಿಯಲ್ಲಿ ಕೋರಿದ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದೆ.

ಈ ಬಾರಿ, ಪ್ರಸಿದ್ಧ ಆರ್‌ಟಿಐ ಕಾರ್ಯಕರ್ತ ಲೋಕೇಶ್ ಬಾತ್ರಾ ಪಿಎಂ ಕೇರ್ಸ್ ಫಂಡ್ ಮತ್ತು ಪಿಎಂ ನ್ಯಾಷನಲ್ ರಿಲೀಫ್ ಫಂಡ್‌ಗೆ ಸಂಬಂಧಿಸಿದಂತೆ ಸಲ್ಲಿಸಲಾದ ಆರ್‌ಟಿಐ ಅರ್ಜಿಗಳ ಕುರಿತ ಮಾಹಿತಿ  ನೀಡುವಂತೆ ಪ್ರಧಾನಮಂತ್ರಿ ಕಛೇರಿಗೆ ಮನವಿ ಸಲ್ಲಿಸಿದ್ದರು.

ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ರ ಅನ್ವಯ, ಈ ವಿಭಾಗವು “ಮಾಹಿತಿ ನೀಡುವಿಕೆಯ ನಿರಾಕರಣೆ ಮಾಡುವುದಿಲ್ಲ. ಆದರೆ ಅವರು ಬಯಸಿದ ರೂಪದಲ್ಲಿ ಒದಗಿಸುವುದನ್ನು ನಿರಾಕರಿಸುತ್ತದೆ” ಎಂದು ನ್ಯಾಯಾಲಯಗಳು ಮತ್ತು ಆಯೋಗವು ಪದೇ ಪದೇ ಹೇಳುತ್ತಿದೆ ಎಂದು ಪಿಎಂಒ ಹೇಳಿದೆ.

2020ರ ಏಪ್ರಿಲ್ ನಿಂದ ಇಲ್ಲಿಯವರೆಗೆ ಪಿಎಂಒ ಸ್ವೀಕರಿಸಿದ ಒಟ್ಟು ಆರ್‌ಟಿಐ ಅರ್ಜಿಗಳು ಮತ್ತು ವಿಲೇವಾರಿ ಮಾಡಿದ ಆರ್‌ಟಿಐ ಅರ್ಜಿಗಳ ವಿವರಗಳನ್ನು ಕೋರಿ ಬಾತ್ರಾ ಮೇ 26 ರಂದು,ಆರ್‌ಟಿಐ ಅರ್ಜಿ ಸಲ್ಲಿಸಿದ್ದರು.

ಅವರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ಬಾತ್ರಾ ಜುಲೈ 16 ರಂದು ಉಪ ಕಾರ್ಯದರ್ಶಿ ಮತ್ತು ಮೇಲ್ಮನವಿ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ. 52 ದಿನಗಳು ಕಳೆದರೂ, ಅವರ ಪ್ರಶ್ನೆಗೆ ಇನ್ನೂ ಉತ್ತರ ಬಂದಿಲ್ಲ ಎನ್ನಲಾಗಿದೆ. ಅಂತಿಮವಾಗಿ, ಆಗಸ್ಟ್ 14 ರಂದು, ಬಾತ್ರಾ ಅವರ ಪ್ರಶ್ನೆಗೆ ಪಿಎಂಒ ಪ್ರತಿಕ್ರಿಯಿಸಿದೆ. ಆರ್‌ಟಿಐ ಅರ್ಜಿಗಳು ಮತ್ತು ಪಿಎಂಒನಲ್ಲಿ ಸಾಮಾನ್ಯವಾಗಿ ಸ್ವೀಕರಿಸಿದ ಮೇಲ್ಮನವಿಗಳು ಮತ್ತು ವಿಲೇವಾರಿ ಮಾಡಿದ ತಿಂಗಳ ವಿವರಗಳನ್ನು ನೀಡುವ ಮೂಲಕ ಇದು ಅವರ ಅರ್ಜಿಗೆ ಭಾಗಶಃ ಉತ್ತರವನ್ನು ಮಾತ್ರ ನೀಡಿದೆ ಎಂದು ಅವರು ಆರೋಪಿಸಿದ್ದಾರೆ.

ಪಿಎಂ-ಕೇರ್ಸ್ ಫಂಡ್ ಮತ್ತು ಪಿಎಂಎನ್‌ಆರ್‌ಎಫ್‌ಗೆ ಸಂಬಂಧಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ, ಪಿಎಂಒ ‘ಕಾಯಿದೆಯ ಸೆಕ್ಷನ್ 7 (9) ರ ಅಡಿಯಲ್ಲಿ ನಿರ್ಬಂಧಗಳಿರುವುದರಿಂದ ನೀವು ಕೇಳಿದ ಮಾಹಿತಿಯನ್ನು ನೀಡಲಾಗುವುದಿಲ್ಲ’ ಎಂದಿದೆ.

ಆದಾಗ್ಯೂ, ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮಾಹಿತಿ ನಿರಾಕರಿಸುವಂತಿಲ್ಲ ಎಂದು ಹೇಳುವ ಕೇಂದ್ರ ಮಾಹಿತಿ ಆಯೋಗ ಮತ್ತು ಹೈಕೋರ್ಟ್‌ಗಳ ಹಲವಾರು ಆದೇಶಗಳಿವೆ ಎಂದು ಬಾತ್ರಾ ವಾದಿಸಿದರು.

ಈ ಪ್ರಕರಣಗಳಲ್ಲಿ, ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9), ಪಿಎಂಒ ಪ್ರತಿಕ್ರಿಯೆಯನ್ನು ಉಲ್ಲೇಖಿಸಿ, ಮಾಹಿತಿಯನ್ನು ನಿರಾಕರಿಸಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿ, ಇಂತಹ ವಿಷಯದಲ್ಲಿ ನ್ಯಾಯಾಂಗವು ಅತ್ಯಂತ ಸ್ಪಷ್ಟವಾದ ತೀರ್ಪುಗಳನ್ನು ನೀಡಿದೆ.

ವಾಸ್ತವವಾಗಿ ಮಾಹಿತಿಯ ಪೂರೈಕೆಯು ಸಾರ್ವಜನಿಕ ಪ್ರಾಧಿಕಾರದ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ ಕಾರಣವಾಗುತ್ತದೆ ಎಂಬ ಕಾರಣದಿಂದ ಮಾಹಿತಿಯನ್ನು ನಿರಾಕರಿಸಲು ಕಾಯಿದೆಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಕೃಪೆ: ದಿ ವೈರ್


ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...