Homeಕರೋನಾ ತಲ್ಲಣಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ-ಕೇರ್ಸ್ ಫಂಡ್ ಮತ್ತು ಪಿಎಂಎನ್‌ಆರ್‌ಎಫ್‌ಗೆ ಸಂಬಂಧಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ, ಪಿಎಂಒ 'ಕಾಯಿದೆಯ ಸೆಕ್ಷನ್ 7 (9) ರ ಅಡಿಯಲ್ಲಿ ನಿರ್ಬಂಧಗಳಿರುವುದರಿಂದ ನೀವು ಕೇಳಿದ ಮಾಹಿತಿಯನ್ನು ನೀಡಲಾಗುವುದಿಲ್ಲ' ಎಂದಿದೆ.

- Advertisement -
- Advertisement -

ಪಿಎಂ ಕೇರ್ಸ್ ನಿಧಿಯ ಬಳಕೆ ಬಗ್ಗೆ ಮಾಹಿತಿ ಕೇಳಿ ಹಲವಾರು ಅರ್ಜಿಗಳು ದಾಖಲಾಗಿರುವ ಸಂದರ್ಭದಲ್ಲಿ,  ಅಂತಹ ಮಾಹಿತಿ ಒದಗಿಸುವುದು “ಕಚೇರಿಯ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ” ಕಾರಣವಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ. ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮತ್ತು ಹೈಕೋರ್ಟ್‌, ಕೇಂದ್ರ ಮಾಹಿತಿ ಆಯೋಗದ ತೀರ್ಪುಗಳ ಹೊರತಾಗಿಯೂ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ದೇಣಿಗೆ ಸಂಗ್ರಹಕ್ಕಾಗಿ ಸ್ಥಾಪಿಸಲ್ಪಟ್ಟ ಪಿಎಂ ಕೇರ್ಸ್‌ ಕುರಿತು ಮಾಹಿತಿ ಕೇಳಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಸಾವಿರಾರು ಕೋಟಿ ರೂ ಹಣ ಸಂಗ್ರಹವಾಗಿದ್ದರೂ ಸಮರ್ಪಕ ಮಾಹಿತಿ ಒದಗಿಸಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಮಾಹಿತಿ ಹಕ್ಕು ಕಾಯ್ದೆ, 2005 ರ ಸೆಕ್ಷನ್ 2 (ಎಚ್) ಅಡಿಯಲ್ಲಿ ಈ ನಿಧಿ ಸಾರ್ವಜನಿಕ ಪ್ರಾಧಿಕಾರವಲ್ಲ ಎಂದು ಮೇ ತಿಂಗಳಿನಲ್ಲಿಯೇ ಪಿಎಂಒ ಹೇಳಿದೆ. ಆದ್ದರಿಂದ ಅರ್ಜಿಯಲ್ಲಿ ಕೋರಿದ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದೆ.

ಈ ಬಾರಿ, ಪ್ರಸಿದ್ಧ ಆರ್‌ಟಿಐ ಕಾರ್ಯಕರ್ತ ಲೋಕೇಶ್ ಬಾತ್ರಾ ಪಿಎಂ ಕೇರ್ಸ್ ಫಂಡ್ ಮತ್ತು ಪಿಎಂ ನ್ಯಾಷನಲ್ ರಿಲೀಫ್ ಫಂಡ್‌ಗೆ ಸಂಬಂಧಿಸಿದಂತೆ ಸಲ್ಲಿಸಲಾದ ಆರ್‌ಟಿಐ ಅರ್ಜಿಗಳ ಕುರಿತ ಮಾಹಿತಿ  ನೀಡುವಂತೆ ಪ್ರಧಾನಮಂತ್ರಿ ಕಛೇರಿಗೆ ಮನವಿ ಸಲ್ಲಿಸಿದ್ದರು.

ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ರ ಅನ್ವಯ, ಈ ವಿಭಾಗವು “ಮಾಹಿತಿ ನೀಡುವಿಕೆಯ ನಿರಾಕರಣೆ ಮಾಡುವುದಿಲ್ಲ. ಆದರೆ ಅವರು ಬಯಸಿದ ರೂಪದಲ್ಲಿ ಒದಗಿಸುವುದನ್ನು ನಿರಾಕರಿಸುತ್ತದೆ” ಎಂದು ನ್ಯಾಯಾಲಯಗಳು ಮತ್ತು ಆಯೋಗವು ಪದೇ ಪದೇ ಹೇಳುತ್ತಿದೆ ಎಂದು ಪಿಎಂಒ ಹೇಳಿದೆ.

2020ರ ಏಪ್ರಿಲ್ ನಿಂದ ಇಲ್ಲಿಯವರೆಗೆ ಪಿಎಂಒ ಸ್ವೀಕರಿಸಿದ ಒಟ್ಟು ಆರ್‌ಟಿಐ ಅರ್ಜಿಗಳು ಮತ್ತು ವಿಲೇವಾರಿ ಮಾಡಿದ ಆರ್‌ಟಿಐ ಅರ್ಜಿಗಳ ವಿವರಗಳನ್ನು ಕೋರಿ ಬಾತ್ರಾ ಮೇ 26 ರಂದು,ಆರ್‌ಟಿಐ ಅರ್ಜಿ ಸಲ್ಲಿಸಿದ್ದರು.

ಅವರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ಬಾತ್ರಾ ಜುಲೈ 16 ರಂದು ಉಪ ಕಾರ್ಯದರ್ಶಿ ಮತ್ತು ಮೇಲ್ಮನವಿ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ. 52 ದಿನಗಳು ಕಳೆದರೂ, ಅವರ ಪ್ರಶ್ನೆಗೆ ಇನ್ನೂ ಉತ್ತರ ಬಂದಿಲ್ಲ ಎನ್ನಲಾಗಿದೆ. ಅಂತಿಮವಾಗಿ, ಆಗಸ್ಟ್ 14 ರಂದು, ಬಾತ್ರಾ ಅವರ ಪ್ರಶ್ನೆಗೆ ಪಿಎಂಒ ಪ್ರತಿಕ್ರಿಯಿಸಿದೆ. ಆರ್‌ಟಿಐ ಅರ್ಜಿಗಳು ಮತ್ತು ಪಿಎಂಒನಲ್ಲಿ ಸಾಮಾನ್ಯವಾಗಿ ಸ್ವೀಕರಿಸಿದ ಮೇಲ್ಮನವಿಗಳು ಮತ್ತು ವಿಲೇವಾರಿ ಮಾಡಿದ ತಿಂಗಳ ವಿವರಗಳನ್ನು ನೀಡುವ ಮೂಲಕ ಇದು ಅವರ ಅರ್ಜಿಗೆ ಭಾಗಶಃ ಉತ್ತರವನ್ನು ಮಾತ್ರ ನೀಡಿದೆ ಎಂದು ಅವರು ಆರೋಪಿಸಿದ್ದಾರೆ.

ಪಿಎಂ-ಕೇರ್ಸ್ ಫಂಡ್ ಮತ್ತು ಪಿಎಂಎನ್‌ಆರ್‌ಎಫ್‌ಗೆ ಸಂಬಂಧಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ, ಪಿಎಂಒ ‘ಕಾಯಿದೆಯ ಸೆಕ್ಷನ್ 7 (9) ರ ಅಡಿಯಲ್ಲಿ ನಿರ್ಬಂಧಗಳಿರುವುದರಿಂದ ನೀವು ಕೇಳಿದ ಮಾಹಿತಿಯನ್ನು ನೀಡಲಾಗುವುದಿಲ್ಲ’ ಎಂದಿದೆ.

ಆದಾಗ್ಯೂ, ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮಾಹಿತಿ ನಿರಾಕರಿಸುವಂತಿಲ್ಲ ಎಂದು ಹೇಳುವ ಕೇಂದ್ರ ಮಾಹಿತಿ ಆಯೋಗ ಮತ್ತು ಹೈಕೋರ್ಟ್‌ಗಳ ಹಲವಾರು ಆದೇಶಗಳಿವೆ ಎಂದು ಬಾತ್ರಾ ವಾದಿಸಿದರು.

ಈ ಪ್ರಕರಣಗಳಲ್ಲಿ, ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9), ಪಿಎಂಒ ಪ್ರತಿಕ್ರಿಯೆಯನ್ನು ಉಲ್ಲೇಖಿಸಿ, ಮಾಹಿತಿಯನ್ನು ನಿರಾಕರಿಸಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿ, ಇಂತಹ ವಿಷಯದಲ್ಲಿ ನ್ಯಾಯಾಂಗವು ಅತ್ಯಂತ ಸ್ಪಷ್ಟವಾದ ತೀರ್ಪುಗಳನ್ನು ನೀಡಿದೆ.

ವಾಸ್ತವವಾಗಿ ಮಾಹಿತಿಯ ಪೂರೈಕೆಯು ಸಾರ್ವಜನಿಕ ಪ್ರಾಧಿಕಾರದ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ ಕಾರಣವಾಗುತ್ತದೆ ಎಂಬ ಕಾರಣದಿಂದ ಮಾಹಿತಿಯನ್ನು ನಿರಾಕರಿಸಲು ಕಾಯಿದೆಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಕೃಪೆ: ದಿ ವೈರ್


ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...