HomeಮುಖಪುಟPM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರ ಸ್ಥಾಪಿಸಿದೆ. ಆದರೆ, ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಹೇಳಿದೆ.

- Advertisement -
- Advertisement -

ಕೊರೊನಾ ಪರಿಹಾರ ನಿಧಿ ಸಂಗ್ರಹಿಸಲೆಂದು ಸರ್ಕಾರ PM-CARES ಸ್ಥಾಪಿಸಿದೆ. ಹಾಗಾಗಿ ಅದೊಂದು ಸರ್ಕಾರಿ ಟ್ರಸ್ಟ್ ಆಗಿದೆ. ಆದರೆ ಆರ್‌ಟಿಐ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೊಸ ಆರ್‌ಟಿಐ ಅರ್ಜಿಗೆ ಸರ್ಕಾರ ಮಾಹಿತಿ ನೀಡಿದೆ.

ಸರ್ಕಾರ ತನ್ನ ವೆಬ್‌ಸೈಟ್‌ನಲ್ಲಿ ಖಾಸಗಿ ಎಂದು ಬರೆದುಕೊಂಡಿದ್ದನ್ನು ಪ್ರಶ್ನಿಸಿದ ಹೊಸ ಆರ್‌ಟಿಐ ಅರ್ಜಿಗೆ ಉತ್ತರಿಸುವಾಗ ಅದು ಉಲ್ಟಾ ಹೊಡೆದಿದೆ. ಖಾಸಗಿ ಮಾಧ್ಯಮ ಸಂಸ್ಥೆ ಸಲ್ಲಿಸಿರುವ ಆರ್‌ಟಿಐಗೆ ನೀಡಿರುವ ಪ್ರತ್ಯುತ್ತರದಲ್ಲಿ, PM-CARES “ಭಾರತ ಸರ್ಕಾರದ ಒಡೆತನದಲ್ಲಿದೆ, ಸರ್ಕಾರದಿಂದ ನಿಯಂತ್ರಿಸಲ್ಪಡುತ್ತದೆ ಮತ್ತು ಸರ್ಕಾರದಿಂದ ಸ್ಥಾಪಿಸಲ್ಪಟ್ಟಿದೆ” ಎಂದು ಹೇಳಿದೆ.

ಆದರೆ, PM-CARES ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಸಮರ್ಥನೆ ನೀಡಿದೆ.

ಡಿಸೆಂಬರ್‌ 24 ರ ಆರ್‌ಟಿಐಗೆ ಉತ್ತರ ನೀಡಿರುವ ಟ್ರಸ್ಟ್, ’ ಈ ನಿಧಿಗೆ ವ್ಯಯಕ್ತಿಕವಾಗಿ ವ್ಯಕ್ತಿಗಳು, ಸಂಸ್ಥೆಗಳು, ಕಾರ್ಪೊರೇಟ್‌ಗಳು, ವಿದೇಶಿ ವ್ಯಕ್ತಿಗಳು, ವಿದೇಶಿ ಸಂಸ್ಥೆಗಳು ಸಂಪೂರ್ಣವಾಗಿ ದೇಣಿಗೆ, ಹಣಕಾಸು ಒದಗಿಸುತ್ತದೆ. ಈ ನಿಧಿಗೆ ಸರ್ಕಾರ ಹಣಕಾಸು ಒದಗಿಸುವುದಿಲ್ಲ. ಹೀಗಾಗಿ ಖಾಸಗಿ ವ್ಯಕ್ತಿಗಳು ಇದರ ಟ್ರಸ್ಟಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 2 (h) ಪ್ರಕಾರ ಈ ನಿಧಿಯನ್ನು ಸಾರ್ವಜನಿಕ ಪ್ರಾಧಿಕಾರವೆಂದು ಪರಿಗಣಿಸಲಾಗುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ಪ್ರಧಾನಮಂತ್ರಿ ಅಧ್ಯಕ್ಷರಾಗಿರುವ PM-CARES ಟ್ರಸ್ಟ್‌ನ ನಿಧಿಯನ್ನು ದೆಹಲಿಯ ಕಂದಾಯ ಇಲಾಖೆಯಲ್ಲಿ ನೋಂದಾಯಿಸಲಾಗಿದೆ. ಆದರೆ ಸಾರ್ವಜನಿಕಗೊಂಡಿರುವ ಟ್ರಸ್ಟ್‌ನ ದಾಖಲೆ ಪತ್ರವು ಇದನ್ನು ಸರ್ಕಾರಿ ಟ್ರಸ್ಟ್ ಎಂದು ಹೇಳುವುದಿಲ್ಲ.

ಮಾರ್ಚ್ 27 ರಂದು ಈ ಟ್ರಸ್ಟ್ ನೋಂದಾಯಿಸಲಾಗಿದ್ದು, ಮಾರ್ಚ್ 28 ರಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಕಾರ್ಪೊರೇಟ್ ದೇಣಿಗೆ ಸ್ವೀಕರಿಸಲು ”ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ” (CSR)ಯ  ಅರ್ಹತೆ ಇರುವ ಜ್ಞಾಪಕ ಪತ್ರವನ್ನು PM-CARESಗೆ ನೀಡಿತ್ತು.

ಪಿಎಂ ಕೇರ್ಸ್‌‌ನ ಅಧಿಕೃತ ದಾಖಲೆಗಳಲ್ಲಿ ವಿರೋಧಾಭಾಸವು ಹೊರಹೊಮ್ಮಿದ ನಂತರ ನಿಧಿಯ ಬಗೆಗಿನ ಗೊಂದಲ ಹೆಚ್ಚಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ತುರ್ತು ಪರಿಸ್ಥಿತಿಯಲ್ಲಿ ಈ ನಿಧಿಯನ್ನು ಬಳಸುವ ಸಲುವಾಗಿ ವಿವಿಧ ದಾನಿಗಳಿಂದ ದೇಣಿಗೆ ಪಡೆಯುವ ಸರ್ಕಾರಿ ಘಟಕವೆಂದು ಪಿಎಂ ಕೇರ್ಸ್ ಸ್ಥಾಪಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ ಕೇರ್ಸ್ ಬಗ್ಗೆ ಟ್ರಸ್ಟ್ ಹೇಳುವ ವಿಚಾರಕ್ಕೂ, ಸರ್ಕಾರ ನೀಡುವ ಉತ್ತರಕ್ಕೂ ಸಾಕಷ್ಟು ಗೊಂದಲಗಳಿವೆ. ಸರ್ಕಾರ ಈಗ ಇದು ಸಾರ್ವಜನಿಕ ನಿಧಿ ಎಂದು ಹೇಳುತ್ತಲೇ ಮಾಹಿತಿ ಹಕ್ಕನ್ನೂ ನಿರಾಕರಿಸಿದೆ. ಇದು ಮೊದಲೇನು ಅಲ್ಲ, ಕೋಟ್ಯಾಂತರ ರೂಪಾಯಿ ಹರಿದು ಬಂದಿರುವ ಪಿಎಂ ಕೇರ್ಸ್ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ಕೇಂದ್ರ ಸರ್ಕಾರ ಬಿಟ್ಟು ಕೊಡುತ್ತಿಲ್ಲ.

ಪಿಎಂ ಕೇರ್ಸ್ ನಿಧಿಯ ಬಳಕೆ ಬಗ್ಗೆ ಮಾಹಿತಿ ಕೇಳಿ ಹಲವಾರು ಅರ್ಜಿಗಳು ದಾಖಲಾಗಿರುವ ಪ್ರತಿ ಬಾರಿಯೂ,  ಅಂತಹ ಮಾಹಿತಿ ಒದಗಿಸುವುದು “ಕಚೇರಿಯ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ” ಕಾರಣವಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ.

ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮತ್ತು ಹೈಕೋರ್ಟ್‌, ಕೇಂದ್ರ ಮಾಹಿತಿ ಆಯೋಗದ ತೀರ್ಪುಗಳ ಹೊರತಾಗಿಯೂ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಪಿಎಂಒ ಕಚೇರಿ ಹೇಳುತ್ತಲೇ ಇದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...