HomeಮುಖಪುಟPM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರ ಸ್ಥಾಪಿಸಿದೆ. ಆದರೆ, ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಹೇಳಿದೆ.

- Advertisement -
- Advertisement -

ಕೊರೊನಾ ಪರಿಹಾರ ನಿಧಿ ಸಂಗ್ರಹಿಸಲೆಂದು ಸರ್ಕಾರ PM-CARES ಸ್ಥಾಪಿಸಿದೆ. ಹಾಗಾಗಿ ಅದೊಂದು ಸರ್ಕಾರಿ ಟ್ರಸ್ಟ್ ಆಗಿದೆ. ಆದರೆ ಆರ್‌ಟಿಐ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೊಸ ಆರ್‌ಟಿಐ ಅರ್ಜಿಗೆ ಸರ್ಕಾರ ಮಾಹಿತಿ ನೀಡಿದೆ.

ಸರ್ಕಾರ ತನ್ನ ವೆಬ್‌ಸೈಟ್‌ನಲ್ಲಿ ಖಾಸಗಿ ಎಂದು ಬರೆದುಕೊಂಡಿದ್ದನ್ನು ಪ್ರಶ್ನಿಸಿದ ಹೊಸ ಆರ್‌ಟಿಐ ಅರ್ಜಿಗೆ ಉತ್ತರಿಸುವಾಗ ಅದು ಉಲ್ಟಾ ಹೊಡೆದಿದೆ. ಖಾಸಗಿ ಮಾಧ್ಯಮ ಸಂಸ್ಥೆ ಸಲ್ಲಿಸಿರುವ ಆರ್‌ಟಿಐಗೆ ನೀಡಿರುವ ಪ್ರತ್ಯುತ್ತರದಲ್ಲಿ, PM-CARES “ಭಾರತ ಸರ್ಕಾರದ ಒಡೆತನದಲ್ಲಿದೆ, ಸರ್ಕಾರದಿಂದ ನಿಯಂತ್ರಿಸಲ್ಪಡುತ್ತದೆ ಮತ್ತು ಸರ್ಕಾರದಿಂದ ಸ್ಥಾಪಿಸಲ್ಪಟ್ಟಿದೆ” ಎಂದು ಹೇಳಿದೆ.

ಆದರೆ, PM-CARES ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಸಮರ್ಥನೆ ನೀಡಿದೆ.

ಡಿಸೆಂಬರ್‌ 24 ರ ಆರ್‌ಟಿಐಗೆ ಉತ್ತರ ನೀಡಿರುವ ಟ್ರಸ್ಟ್, ’ ಈ ನಿಧಿಗೆ ವ್ಯಯಕ್ತಿಕವಾಗಿ ವ್ಯಕ್ತಿಗಳು, ಸಂಸ್ಥೆಗಳು, ಕಾರ್ಪೊರೇಟ್‌ಗಳು, ವಿದೇಶಿ ವ್ಯಕ್ತಿಗಳು, ವಿದೇಶಿ ಸಂಸ್ಥೆಗಳು ಸಂಪೂರ್ಣವಾಗಿ ದೇಣಿಗೆ, ಹಣಕಾಸು ಒದಗಿಸುತ್ತದೆ. ಈ ನಿಧಿಗೆ ಸರ್ಕಾರ ಹಣಕಾಸು ಒದಗಿಸುವುದಿಲ್ಲ. ಹೀಗಾಗಿ ಖಾಸಗಿ ವ್ಯಕ್ತಿಗಳು ಇದರ ಟ್ರಸ್ಟಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 2 (h) ಪ್ರಕಾರ ಈ ನಿಧಿಯನ್ನು ಸಾರ್ವಜನಿಕ ಪ್ರಾಧಿಕಾರವೆಂದು ಪರಿಗಣಿಸಲಾಗುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ಪ್ರಧಾನಮಂತ್ರಿ ಅಧ್ಯಕ್ಷರಾಗಿರುವ PM-CARES ಟ್ರಸ್ಟ್‌ನ ನಿಧಿಯನ್ನು ದೆಹಲಿಯ ಕಂದಾಯ ಇಲಾಖೆಯಲ್ಲಿ ನೋಂದಾಯಿಸಲಾಗಿದೆ. ಆದರೆ ಸಾರ್ವಜನಿಕಗೊಂಡಿರುವ ಟ್ರಸ್ಟ್‌ನ ದಾಖಲೆ ಪತ್ರವು ಇದನ್ನು ಸರ್ಕಾರಿ ಟ್ರಸ್ಟ್ ಎಂದು ಹೇಳುವುದಿಲ್ಲ.

ಮಾರ್ಚ್ 27 ರಂದು ಈ ಟ್ರಸ್ಟ್ ನೋಂದಾಯಿಸಲಾಗಿದ್ದು, ಮಾರ್ಚ್ 28 ರಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಕಾರ್ಪೊರೇಟ್ ದೇಣಿಗೆ ಸ್ವೀಕರಿಸಲು ”ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ” (CSR)ಯ  ಅರ್ಹತೆ ಇರುವ ಜ್ಞಾಪಕ ಪತ್ರವನ್ನು PM-CARESಗೆ ನೀಡಿತ್ತು.

ಪಿಎಂ ಕೇರ್ಸ್‌‌ನ ಅಧಿಕೃತ ದಾಖಲೆಗಳಲ್ಲಿ ವಿರೋಧಾಭಾಸವು ಹೊರಹೊಮ್ಮಿದ ನಂತರ ನಿಧಿಯ ಬಗೆಗಿನ ಗೊಂದಲ ಹೆಚ್ಚಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ತುರ್ತು ಪರಿಸ್ಥಿತಿಯಲ್ಲಿ ಈ ನಿಧಿಯನ್ನು ಬಳಸುವ ಸಲುವಾಗಿ ವಿವಿಧ ದಾನಿಗಳಿಂದ ದೇಣಿಗೆ ಪಡೆಯುವ ಸರ್ಕಾರಿ ಘಟಕವೆಂದು ಪಿಎಂ ಕೇರ್ಸ್ ಸ್ಥಾಪಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ ಕೇರ್ಸ್ ಬಗ್ಗೆ ಟ್ರಸ್ಟ್ ಹೇಳುವ ವಿಚಾರಕ್ಕೂ, ಸರ್ಕಾರ ನೀಡುವ ಉತ್ತರಕ್ಕೂ ಸಾಕಷ್ಟು ಗೊಂದಲಗಳಿವೆ. ಸರ್ಕಾರ ಈಗ ಇದು ಸಾರ್ವಜನಿಕ ನಿಧಿ ಎಂದು ಹೇಳುತ್ತಲೇ ಮಾಹಿತಿ ಹಕ್ಕನ್ನೂ ನಿರಾಕರಿಸಿದೆ. ಇದು ಮೊದಲೇನು ಅಲ್ಲ, ಕೋಟ್ಯಾಂತರ ರೂಪಾಯಿ ಹರಿದು ಬಂದಿರುವ ಪಿಎಂ ಕೇರ್ಸ್ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ಕೇಂದ್ರ ಸರ್ಕಾರ ಬಿಟ್ಟು ಕೊಡುತ್ತಿಲ್ಲ.

ಪಿಎಂ ಕೇರ್ಸ್ ನಿಧಿಯ ಬಳಕೆ ಬಗ್ಗೆ ಮಾಹಿತಿ ಕೇಳಿ ಹಲವಾರು ಅರ್ಜಿಗಳು ದಾಖಲಾಗಿರುವ ಪ್ರತಿ ಬಾರಿಯೂ,  ಅಂತಹ ಮಾಹಿತಿ ಒದಗಿಸುವುದು “ಕಚೇರಿಯ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ” ಕಾರಣವಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ.

ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮತ್ತು ಹೈಕೋರ್ಟ್‌, ಕೇಂದ್ರ ಮಾಹಿತಿ ಆಯೋಗದ ತೀರ್ಪುಗಳ ಹೊರತಾಗಿಯೂ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಪಿಎಂಒ ಕಚೇರಿ ಹೇಳುತ್ತಲೇ ಇದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...