HomeಮುಖಪುಟPM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರ ಸ್ಥಾಪಿಸಿದೆ. ಆದರೆ, ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಹೇಳಿದೆ.

- Advertisement -
- Advertisement -

ಕೊರೊನಾ ಪರಿಹಾರ ನಿಧಿ ಸಂಗ್ರಹಿಸಲೆಂದು ಸರ್ಕಾರ PM-CARES ಸ್ಥಾಪಿಸಿದೆ. ಹಾಗಾಗಿ ಅದೊಂದು ಸರ್ಕಾರಿ ಟ್ರಸ್ಟ್ ಆಗಿದೆ. ಆದರೆ ಆರ್‌ಟಿಐ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೊಸ ಆರ್‌ಟಿಐ ಅರ್ಜಿಗೆ ಸರ್ಕಾರ ಮಾಹಿತಿ ನೀಡಿದೆ.

ಸರ್ಕಾರ ತನ್ನ ವೆಬ್‌ಸೈಟ್‌ನಲ್ಲಿ ಖಾಸಗಿ ಎಂದು ಬರೆದುಕೊಂಡಿದ್ದನ್ನು ಪ್ರಶ್ನಿಸಿದ ಹೊಸ ಆರ್‌ಟಿಐ ಅರ್ಜಿಗೆ ಉತ್ತರಿಸುವಾಗ ಅದು ಉಲ್ಟಾ ಹೊಡೆದಿದೆ. ಖಾಸಗಿ ಮಾಧ್ಯಮ ಸಂಸ್ಥೆ ಸಲ್ಲಿಸಿರುವ ಆರ್‌ಟಿಐಗೆ ನೀಡಿರುವ ಪ್ರತ್ಯುತ್ತರದಲ್ಲಿ, PM-CARES “ಭಾರತ ಸರ್ಕಾರದ ಒಡೆತನದಲ್ಲಿದೆ, ಸರ್ಕಾರದಿಂದ ನಿಯಂತ್ರಿಸಲ್ಪಡುತ್ತದೆ ಮತ್ತು ಸರ್ಕಾರದಿಂದ ಸ್ಥಾಪಿಸಲ್ಪಟ್ಟಿದೆ” ಎಂದು ಹೇಳಿದೆ.

ಆದರೆ, PM-CARES ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಸಮರ್ಥನೆ ನೀಡಿದೆ.

ಡಿಸೆಂಬರ್‌ 24 ರ ಆರ್‌ಟಿಐಗೆ ಉತ್ತರ ನೀಡಿರುವ ಟ್ರಸ್ಟ್, ’ ಈ ನಿಧಿಗೆ ವ್ಯಯಕ್ತಿಕವಾಗಿ ವ್ಯಕ್ತಿಗಳು, ಸಂಸ್ಥೆಗಳು, ಕಾರ್ಪೊರೇಟ್‌ಗಳು, ವಿದೇಶಿ ವ್ಯಕ್ತಿಗಳು, ವಿದೇಶಿ ಸಂಸ್ಥೆಗಳು ಸಂಪೂರ್ಣವಾಗಿ ದೇಣಿಗೆ, ಹಣಕಾಸು ಒದಗಿಸುತ್ತದೆ. ಈ ನಿಧಿಗೆ ಸರ್ಕಾರ ಹಣಕಾಸು ಒದಗಿಸುವುದಿಲ್ಲ. ಹೀಗಾಗಿ ಖಾಸಗಿ ವ್ಯಕ್ತಿಗಳು ಇದರ ಟ್ರಸ್ಟಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 2 (h) ಪ್ರಕಾರ ಈ ನಿಧಿಯನ್ನು ಸಾರ್ವಜನಿಕ ಪ್ರಾಧಿಕಾರವೆಂದು ಪರಿಗಣಿಸಲಾಗುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ಪ್ರಧಾನಮಂತ್ರಿ ಅಧ್ಯಕ್ಷರಾಗಿರುವ PM-CARES ಟ್ರಸ್ಟ್‌ನ ನಿಧಿಯನ್ನು ದೆಹಲಿಯ ಕಂದಾಯ ಇಲಾಖೆಯಲ್ಲಿ ನೋಂದಾಯಿಸಲಾಗಿದೆ. ಆದರೆ ಸಾರ್ವಜನಿಕಗೊಂಡಿರುವ ಟ್ರಸ್ಟ್‌ನ ದಾಖಲೆ ಪತ್ರವು ಇದನ್ನು ಸರ್ಕಾರಿ ಟ್ರಸ್ಟ್ ಎಂದು ಹೇಳುವುದಿಲ್ಲ.

ಮಾರ್ಚ್ 27 ರಂದು ಈ ಟ್ರಸ್ಟ್ ನೋಂದಾಯಿಸಲಾಗಿದ್ದು, ಮಾರ್ಚ್ 28 ರಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಕಾರ್ಪೊರೇಟ್ ದೇಣಿಗೆ ಸ್ವೀಕರಿಸಲು ”ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ” (CSR)ಯ  ಅರ್ಹತೆ ಇರುವ ಜ್ಞಾಪಕ ಪತ್ರವನ್ನು PM-CARESಗೆ ನೀಡಿತ್ತು.

ಪಿಎಂ ಕೇರ್ಸ್‌‌ನ ಅಧಿಕೃತ ದಾಖಲೆಗಳಲ್ಲಿ ವಿರೋಧಾಭಾಸವು ಹೊರಹೊಮ್ಮಿದ ನಂತರ ನಿಧಿಯ ಬಗೆಗಿನ ಗೊಂದಲ ಹೆಚ್ಚಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ತುರ್ತು ಪರಿಸ್ಥಿತಿಯಲ್ಲಿ ಈ ನಿಧಿಯನ್ನು ಬಳಸುವ ಸಲುವಾಗಿ ವಿವಿಧ ದಾನಿಗಳಿಂದ ದೇಣಿಗೆ ಪಡೆಯುವ ಸರ್ಕಾರಿ ಘಟಕವೆಂದು ಪಿಎಂ ಕೇರ್ಸ್ ಸ್ಥಾಪಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ ಕೇರ್ಸ್ ಬಗ್ಗೆ ಟ್ರಸ್ಟ್ ಹೇಳುವ ವಿಚಾರಕ್ಕೂ, ಸರ್ಕಾರ ನೀಡುವ ಉತ್ತರಕ್ಕೂ ಸಾಕಷ್ಟು ಗೊಂದಲಗಳಿವೆ. ಸರ್ಕಾರ ಈಗ ಇದು ಸಾರ್ವಜನಿಕ ನಿಧಿ ಎಂದು ಹೇಳುತ್ತಲೇ ಮಾಹಿತಿ ಹಕ್ಕನ್ನೂ ನಿರಾಕರಿಸಿದೆ. ಇದು ಮೊದಲೇನು ಅಲ್ಲ, ಕೋಟ್ಯಾಂತರ ರೂಪಾಯಿ ಹರಿದು ಬಂದಿರುವ ಪಿಎಂ ಕೇರ್ಸ್ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ಕೇಂದ್ರ ಸರ್ಕಾರ ಬಿಟ್ಟು ಕೊಡುತ್ತಿಲ್ಲ.

ಪಿಎಂ ಕೇರ್ಸ್ ನಿಧಿಯ ಬಳಕೆ ಬಗ್ಗೆ ಮಾಹಿತಿ ಕೇಳಿ ಹಲವಾರು ಅರ್ಜಿಗಳು ದಾಖಲಾಗಿರುವ ಪ್ರತಿ ಬಾರಿಯೂ,  ಅಂತಹ ಮಾಹಿತಿ ಒದಗಿಸುವುದು “ಕಚೇರಿಯ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ” ಕಾರಣವಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ.

ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮತ್ತು ಹೈಕೋರ್ಟ್‌, ಕೇಂದ್ರ ಮಾಹಿತಿ ಆಯೋಗದ ತೀರ್ಪುಗಳ ಹೊರತಾಗಿಯೂ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಪಿಎಂಒ ಕಚೇರಿ ಹೇಳುತ್ತಲೇ ಇದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...