HomeಮುಖಪುಟPM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರ ಸ್ಥಾಪಿಸಿದೆ. ಆದರೆ, ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಹೇಳಿದೆ.

- Advertisement -
- Advertisement -

ಕೊರೊನಾ ಪರಿಹಾರ ನಿಧಿ ಸಂಗ್ರಹಿಸಲೆಂದು ಸರ್ಕಾರ PM-CARES ಸ್ಥಾಪಿಸಿದೆ. ಹಾಗಾಗಿ ಅದೊಂದು ಸರ್ಕಾರಿ ಟ್ರಸ್ಟ್ ಆಗಿದೆ. ಆದರೆ ಆರ್‌ಟಿಐ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೊಸ ಆರ್‌ಟಿಐ ಅರ್ಜಿಗೆ ಸರ್ಕಾರ ಮಾಹಿತಿ ನೀಡಿದೆ.

ಸರ್ಕಾರ ತನ್ನ ವೆಬ್‌ಸೈಟ್‌ನಲ್ಲಿ ಖಾಸಗಿ ಎಂದು ಬರೆದುಕೊಂಡಿದ್ದನ್ನು ಪ್ರಶ್ನಿಸಿದ ಹೊಸ ಆರ್‌ಟಿಐ ಅರ್ಜಿಗೆ ಉತ್ತರಿಸುವಾಗ ಅದು ಉಲ್ಟಾ ಹೊಡೆದಿದೆ. ಖಾಸಗಿ ಮಾಧ್ಯಮ ಸಂಸ್ಥೆ ಸಲ್ಲಿಸಿರುವ ಆರ್‌ಟಿಐಗೆ ನೀಡಿರುವ ಪ್ರತ್ಯುತ್ತರದಲ್ಲಿ, PM-CARES “ಭಾರತ ಸರ್ಕಾರದ ಒಡೆತನದಲ್ಲಿದೆ, ಸರ್ಕಾರದಿಂದ ನಿಯಂತ್ರಿಸಲ್ಪಡುತ್ತದೆ ಮತ್ತು ಸರ್ಕಾರದಿಂದ ಸ್ಥಾಪಿಸಲ್ಪಟ್ಟಿದೆ” ಎಂದು ಹೇಳಿದೆ.

ಆದರೆ, PM-CARES ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಸಮರ್ಥನೆ ನೀಡಿದೆ.

ಡಿಸೆಂಬರ್‌ 24 ರ ಆರ್‌ಟಿಐಗೆ ಉತ್ತರ ನೀಡಿರುವ ಟ್ರಸ್ಟ್, ’ ಈ ನಿಧಿಗೆ ವ್ಯಯಕ್ತಿಕವಾಗಿ ವ್ಯಕ್ತಿಗಳು, ಸಂಸ್ಥೆಗಳು, ಕಾರ್ಪೊರೇಟ್‌ಗಳು, ವಿದೇಶಿ ವ್ಯಕ್ತಿಗಳು, ವಿದೇಶಿ ಸಂಸ್ಥೆಗಳು ಸಂಪೂರ್ಣವಾಗಿ ದೇಣಿಗೆ, ಹಣಕಾಸು ಒದಗಿಸುತ್ತದೆ. ಈ ನಿಧಿಗೆ ಸರ್ಕಾರ ಹಣಕಾಸು ಒದಗಿಸುವುದಿಲ್ಲ. ಹೀಗಾಗಿ ಖಾಸಗಿ ವ್ಯಕ್ತಿಗಳು ಇದರ ಟ್ರಸ್ಟಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 2 (h) ಪ್ರಕಾರ ಈ ನಿಧಿಯನ್ನು ಸಾರ್ವಜನಿಕ ಪ್ರಾಧಿಕಾರವೆಂದು ಪರಿಗಣಿಸಲಾಗುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ಪ್ರಧಾನಮಂತ್ರಿ ಅಧ್ಯಕ್ಷರಾಗಿರುವ PM-CARES ಟ್ರಸ್ಟ್‌ನ ನಿಧಿಯನ್ನು ದೆಹಲಿಯ ಕಂದಾಯ ಇಲಾಖೆಯಲ್ಲಿ ನೋಂದಾಯಿಸಲಾಗಿದೆ. ಆದರೆ ಸಾರ್ವಜನಿಕಗೊಂಡಿರುವ ಟ್ರಸ್ಟ್‌ನ ದಾಖಲೆ ಪತ್ರವು ಇದನ್ನು ಸರ್ಕಾರಿ ಟ್ರಸ್ಟ್ ಎಂದು ಹೇಳುವುದಿಲ್ಲ.

ಮಾರ್ಚ್ 27 ರಂದು ಈ ಟ್ರಸ್ಟ್ ನೋಂದಾಯಿಸಲಾಗಿದ್ದು, ಮಾರ್ಚ್ 28 ರಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಕಾರ್ಪೊರೇಟ್ ದೇಣಿಗೆ ಸ್ವೀಕರಿಸಲು ”ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ” (CSR)ಯ  ಅರ್ಹತೆ ಇರುವ ಜ್ಞಾಪಕ ಪತ್ರವನ್ನು PM-CARESಗೆ ನೀಡಿತ್ತು.

ಪಿಎಂ ಕೇರ್ಸ್‌‌ನ ಅಧಿಕೃತ ದಾಖಲೆಗಳಲ್ಲಿ ವಿರೋಧಾಭಾಸವು ಹೊರಹೊಮ್ಮಿದ ನಂತರ ನಿಧಿಯ ಬಗೆಗಿನ ಗೊಂದಲ ಹೆಚ್ಚಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ತುರ್ತು ಪರಿಸ್ಥಿತಿಯಲ್ಲಿ ಈ ನಿಧಿಯನ್ನು ಬಳಸುವ ಸಲುವಾಗಿ ವಿವಿಧ ದಾನಿಗಳಿಂದ ದೇಣಿಗೆ ಪಡೆಯುವ ಸರ್ಕಾರಿ ಘಟಕವೆಂದು ಪಿಎಂ ಕೇರ್ಸ್ ಸ್ಥಾಪಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ ಕೇರ್ಸ್ ಬಗ್ಗೆ ಟ್ರಸ್ಟ್ ಹೇಳುವ ವಿಚಾರಕ್ಕೂ, ಸರ್ಕಾರ ನೀಡುವ ಉತ್ತರಕ್ಕೂ ಸಾಕಷ್ಟು ಗೊಂದಲಗಳಿವೆ. ಸರ್ಕಾರ ಈಗ ಇದು ಸಾರ್ವಜನಿಕ ನಿಧಿ ಎಂದು ಹೇಳುತ್ತಲೇ ಮಾಹಿತಿ ಹಕ್ಕನ್ನೂ ನಿರಾಕರಿಸಿದೆ. ಇದು ಮೊದಲೇನು ಅಲ್ಲ, ಕೋಟ್ಯಾಂತರ ರೂಪಾಯಿ ಹರಿದು ಬಂದಿರುವ ಪಿಎಂ ಕೇರ್ಸ್ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ಕೇಂದ್ರ ಸರ್ಕಾರ ಬಿಟ್ಟು ಕೊಡುತ್ತಿಲ್ಲ.

ಪಿಎಂ ಕೇರ್ಸ್ ನಿಧಿಯ ಬಳಕೆ ಬಗ್ಗೆ ಮಾಹಿತಿ ಕೇಳಿ ಹಲವಾರು ಅರ್ಜಿಗಳು ದಾಖಲಾಗಿರುವ ಪ್ರತಿ ಬಾರಿಯೂ,  ಅಂತಹ ಮಾಹಿತಿ ಒದಗಿಸುವುದು “ಕಚೇರಿಯ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ” ಕಾರಣವಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ.

ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮತ್ತು ಹೈಕೋರ್ಟ್‌, ಕೇಂದ್ರ ಮಾಹಿತಿ ಆಯೋಗದ ತೀರ್ಪುಗಳ ಹೊರತಾಗಿಯೂ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಪಿಎಂಒ ಕಚೇರಿ ಹೇಳುತ್ತಲೇ ಇದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...